ಇಂದು World Blood Donor Day: ರಕ್ತದಾನ ಎಂದರೆ ಜೀವದಾನ!


Team Udayavani, Jun 14, 2023, 8:03 AM IST

BLOOD DONOR

ಆರೋಗ್ಯಕರ ಜೀವನ ನಡೆಸಲು ರಕ್ತ ಅತೀ ಅವಶ್ಯ. ಅದಕ್ಕಾಗಿ ರಕ್ತವನ್ನು ಜೀವದ್ರವ್ಯ ಎಂದೇ ಕರೆಯಲಾಗುತ್ತದೆ. ಪ್ರತೀ ದಿನ ಅದೆಷ್ಟೋ ಮಂದಿ ರಕ್ತದ ಕೊರತೆಯಿಂದ ಸಾವನಪ್ಪುತ್ತಿದ್ದಾರೆ. ಪ್ರತೀ ದಿನ ಹಲವರಿಗೆ ರಕ್ತದ ಆವಶ್ಯಕತೆಯಿರುತ್ತದೆ.

ಶ್ರೇಷ್ಠ ದಾನಗಳಲ್ಲಿ ಒಂದಾಗಿ ರಕ್ತದಾನವನ್ನು ಪರಿಗಣಿಸಲಾಗಿದೆ. ಹಾಗಾಗಿ ಜನರಿಗೆ ರಕ್ತದ ಪ್ರಾಮುಖ್ಯವನ್ನು ತಿಳಿಸಲು, ರಕ್ತದಾನ ಮಾಡುವಂತೆ ಪ್ರೇರೇಪಿಸಲು ಹಾಗೂ ಸ್ವಯಂಪ್ರೇರಿತ ರಕ್ತದಾನಿಗಳಿಗೆ ಕೃತಜ್ಞತೆ ಸಲ್ಲಿಸಲು ಪ್ರತೀ ವರ್ಷ ಜೂ.14 ರಂದು ವಿಶ್ವ ರಕ್ತದಾನಿಗಳ‌ ದಿನವನ್ನು ಆಚರಿಸಲಾಗುತ್ತದೆ.

 ರಕ್ತದಾನಿಗಳ ದಿನದ ಹಿನ್ನೆಲೆ
ಮೊದಲ ಬಾರಿಗೆ ರಿಚರ್ಡ್‌ ಲೊವರ್‌ ಯಾವುದೇ ಅಡ್ಡಪರಿಣಾಮಗಳಿಲ್ಲದೇ ಎರಡು ನಾಯಿಗಳ ನಡುವೆ ರಕ್ತವನ್ನು ವರ್ಗಾವಣೆ ಮಾಡುವುದರ ಮೂಲಕ ಹೊಸ ಸಾಧ್ಯತೆಯನ್ನು ತೆರೆದಿಟ್ಟರು. ಅನಂತರ ಹೊಸ ತಂತ್ರಜ್ಞಾನಗಳ ಸಹಾಯದಿಂದ ಕಾರ್ಲ್ ಲ್ಯಾಂಡ್‌ಸ್ಟೈನರ್‌ ಮಾನವನ ರಕ್ತದಲ್ಲಿ ಅ,ಆ,O ಮೂರು ಗುಂಪುಗಳನ್ನು ಸಂಶೋಧಿಸಿದರು. ಆ ಬಳಿಕ ಮಾನವರಲ್ಲಿ ರಕ್ತ ವರ್ಗಾವಣೆಯು ಪ್ರಾಮುಖ್ಯ ಪಡೆದುಕೊಂಡಿತು. 2000ನೇ ಇಸವಿಯಲ್ಲಿ ವಿಶ್ವ ಆರೋಗ್ಯ ದಿನದ ಯಶಸ್ಸಿನ ಬಳಿಕ 2005ರ ಮೇಯಲ್ಲಿ ನಡೆದ 58ನೇ ವಿಶ್ವ ಆರೋಗ್ಯ ಸಂಸ್ಥೆಯ ಸಭೆಯಲ್ಲಿ ಪ್ರತೀ ವರ್ಷ ಜೂ.14ರಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸಲು ನಿರ್ಧರಿಸಲಾಯಿತು.

ಬಡದೇಶಗಳನ್ನು ಕಾಡುತ್ತಿದೆ ರಕ್ತದ ಕೊರತೆ!
2009ರ ಜೂನ್‌ನಲ್ಲಿ ಹೊರಡಿಸಲಾದ ಮೆಲ್ಬರ್ನ್ ಡಿಕ್ಲರೇಶನ್‌ ನಲ್ಲಿ 2020ರ ಹೊತ್ತಿಗೆ ಸ್ವಯಂಪ್ರೇರಿತವಾಗಿ ಸಂಗ್ರಹ ವಾದ ರಕ್ತವನ್ನು ಎಲ್ಲ ದೇಶಗಳಿಗೆ ಪೂರೈಸುವ ಗುರಿಯನ್ನು ಹೊಂದ ಲಾಯಿತು. ಆದರೆ ಇಂದಿಗೂ ಈ ಗುರಿಯನ್ನು ತಲು ಪಲು ಸಾಧ್ಯ ವಾಗಿಲ್ಲ. ಮುಂದುವರಿದ ದೇಶಗಳಲ್ಲಿ ರಕ್ತದಾನದ ಮಹತ್ವ ಮತ್ತು ಅದರ ಅಗತ್ಯತೆಯ ಬಗೆಗೆ ಜನರಲ್ಲಿ ಜಾಗೃತಿ ಮೂಡಿದ್ದು ತುರ್ತು ಸಂದರ್ಭಗಳಲ್ಲಿ ರಕ್ತದಾನ ಮಾಡಲು ಸ್ವಯಂ ಪ್ರೇರಿತ ರಾಗಿ ಮುಂದೆ ಬರುತ್ತಿದ್ದಾರೆ. ಆದರೆ ಅಭಿವೃದ್ಧಿಶೀಲ ಮತ್ತು ಅಭಿವೃದ್ಧಿಯಲ್ಲಿ ಹಿಂದುಳಿದ ದೇಶಗಳಲ್ಲಿನ್ನೂ ರಕ್ತದಾನದ ಬಗೆಗೆ ಜನರಲ್ಲಿ ಅರಿವು ಮೂಡಿಲ್ಲ. ಈ ಕಾರಣದಿಂದಾಗಿ ರಕ್ತದ ತೀವ್ರ ಕೊರತೆ ಈ ದೇಶಗಳನ್ನು ಬಾಧಿಸುತ್ತಿ¤ದೆ.

 ಈ ಬಾರಿಯ ಧ್ಯೇಯ
ರಕ್ತದಾನದಿಂದ ಜೀವ ಉಳಿಸುವಲ್ಲಿ ಪ್ರತೀ ದಾನವು ಮಹತ್ವದ ಪಾತ್ರ ವಹಿಸುತ್ತದೆ. ಈ ಬಾರಿ “ರಕ್ತ ನೀಡಿ, ಪ್ಲಾಸ್ಮಾ ನೀಡಿ ಜೀವವನ್ನು ಹಂಚಿಕೊಳ್ಳಿ, ಆಗಾಗ ಹಂಚಿಕೊಳ್ಳುತ್ತಿರಿ’
ಎಂಬ ಧ್ಯೇಯದೊಂದಿಗೆ ಜೀವನಪೂರ್ತಿ ರಕ್ತದ ಆವಶ್ಯಕತೆಯಿರುವ ರೋಗಿಗಳಿಗೆ ನೆರವಾಗುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತಿದೆ. ಅಲ್ಜೀರಿಯಾ ದೇಶವು ಈ ಬಾರಿಯ ರಕ್ತದಾನ ದಿನದ ಆತಿಥ್ಯವನ್ನು ವಹಿಸಿಕೊಂಡಿದೆ.

 ಸರಕಾರಗಳಿಂದ ಬೇಕಿದೆ ಇನ್ನಷ್ಟು ಉತ್ತೇಜನ
ಹಲವಾರು ದೇಶಗಳಲ್ಲಿ ಸೂಕ್ತ ಸಮಯಕ್ಕೆ ರಕ್ತ ದೊರಕದೆ ರೋಗಿ ಗಳು ಅಥವಾ ಗಾಯಾಳುಗಳು ರಕ್ತದ ಕೊರತೆಯಿಂದ ಸಾಯು ತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ರಕ್ತದ ಆವಶ್ಯಕತೆ ಇರುವವರೆಲ್ಲರಿಗೂ ರಕ್ತವನ್ನು ಪೂರೈಸುವಂತಹ ಯೋಜನೆ ಗಳನ್ನು ಸರಕಾರದ ಆರೋಗ್ಯ ಸೇವೆಗಳು ನೀಡಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ತಾಕೀತು ಮಾಡಿದೆ. 2018ರ ಅಂಕಿ ಅಂಶದ ಪ್ರಕಾರ 171ರಲ್ಲಿ 125 ದೇಶಗಳು ರಕ್ತದ ಪ್ರಾಮುಖ್ಯದ ಕುರಿ ತಾದ ನೀತಿ ಗಳನ್ನು ಹೊಂದಿವೆ ಹಾಗೂ 113 ದೇಶಗಳು ರಕ್ತ ವರ್ಗಾ ವಣೆಯ ಸುರಕ್ಷೆ ಹಾಗೂ ಗುಣಮಟ್ಟದ ಬಗ್ಗೆ ನೀತಿ ರೂಪಿಸಿದೆ.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.