ಪಾರಂಪರಿಕ ತಾಣಗಳ ರಕ್ಷಣೆ ನಮ್ಮೆಲ್ಲರ ಹೊಣೆ : ಇಂದು ವಿಶ್ವ ಪರಂಪರೆ ದಿನ


Team Udayavani, Apr 18, 2021, 7:00 AM IST

ಪಾರಂಪರಿಕ ತಾಣಗಳ ರಕ್ಷಣೆ ನಮ್ಮೆಲ್ಲರ ಹೊಣೆ : ಇಂದು ವಿಶ್ವ ಪರಂಪರೆ ದಿನ

ಪಾರಂಪರಿಕ ಸ್ವತ್ತುಗಳು ಮತ್ತು ತಾಣಗಳ ಪ್ರಾಮುಖ್ಯವನ್ನು ಗುರುತಿಸಿ ಸಂರಕ್ಷಿಸುವ ಮತ್ತು ಇವುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ 1983ರಿಂದ ಯುನೆಸ್ಕೋದ ನೇತೃತ್ವದಲ್ಲಿ ವಿಶ್ವಾದ್ಯಂತ ಪ್ರತೀ ವರ್ಷ ಎಪ್ರಿಲ್‌ 18 ರಂದು ವಿಶ್ವ ಪರಂಪರೆ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಅಂಗವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಂಘಿಕ ಪ್ರಯತ್ನಗಳನ್ನು ನಡೆಸುವ ಮೂಲಕ ವಿಶ್ವದ ಪ್ರತಿಯೊಂದೂ ಭಾಗದಲ್ಲಿರುವ ಐತಿಹಾಸಿಕ ಸ್ಮಾರಕಗಳು ಮತ್ತು ತಾಣಗಳನ್ನು ರಕ್ಷಿಸುವ ಕಾರ್ಯವನ್ನು ಮಾಡಲಾಗುತ್ತಿದೆ.

1,121 ವಿಶ್ವದ ತಾಣಗಳು
ಈವರೆಗೆ ವಿಶ್ವದ 167 ರಾಷ್ಟ್ರಗಳ ಒಟ್ಟು 1,121 ತಾಣಗಳಿಗೆ ವಿಶ್ವ ಪರಂಪರೆಯ ತಾಣದ ಮಾನ್ಯತೆ ನೀಡಲಾಗಿದೆ. ಇವುಗಳ ಪೈಕಿ 869 ಸಾಂಸ್ಕೃತಿಕ ನೆಲೆಗಳಾಗಿದ್ದರೆ 213 ಪ್ರಾಕೃತಿಕ ತಾಣಗಳು ಮತ್ತು 39 ತಾಣಗಳು ಈ ಎರಡರ ಮಹತ್ವವನ್ನೂ ಹೊಂದಿವೆ.

ಈ ವರ್ಷದ ಧ್ಯೇಯವಾಕ್ಯ
“ಸಂಕೀರ್ಣ ಇತಿಹಾಸ, ವೈವಿಧ್ಯಮಯ ಭವಿಷ್ಯ’-ಎಲ್ಲ ಧರ್ಮದ ಜನರು ಭಿನ್ನಾಭಿಪ್ರಾಯಗಳೆಲ್ಲವನ್ನೂ ಬದಿಗಿರಿಸಿ ಒಗ್ಗೂಡಿ ಏಕತೆಯ ಸಂದೇಶವನ್ನು ಸಾರೋಣ ಎಂಬ ಧ್ಯೇಯದೊಂದಿಗೆ ಈ ಬಾರಿಯ ವಿಶ್ವ ಪರಂಪರೆ ದಿನವನ್ನು ಆಚರಿಸಲಾಗುತ್ತಿದೆ.

ಸೇರ್ಪಡೆ ಪ್ರಕ್ರಿಯೆ
ವಿಶ್ವ ಪರಂಪರೆಯ ತಾಣಗಳ ಪಟ್ಟಿಗೆ ಸೇರ್ಪಡೆಯಾದ ಸ್ಥಳಗಳು ಆಯಾಯ ದೇಶದ ಭಾಗವಾಗಿ ಉಳಿಯುತ್ತದೆ ಮತ್ತು ಅಂತಾರಾಷ್ಟ್ರೀಯ ಸಮುದಾಯದ ಹಿತದೃಷ್ಟಿಯಿಂದ ಅದರ ರಕ್ಷಣೆಗೆ ಯುನೆಸ್ಕೋ ನೆರವಾಗುತ್ತದೆ. ವಿಶ್ವ ಪಾರಂಪರಿಕ ತಾಣಗಳೆಂದು ಘೋಷಿಸಲ್ಪಡುವ ತಾಣಗಳು ಅರಣ್ಯ, ಪರ್ವತ, ಸರೋವರ, ಮರುಭೂಮಿ, ಸ್ಮಾರಕ, ಕಟ್ಟಡ, ಸಂಕೀರ್ಣ ಅಥವಾ ನಗರವೂ ಆಗಿರಬಹುದು. ಮೊದಲಿಗೆ ವಿಶ್ವ ಪಾರಂಪರಿಕ ಸಮಿತಿಗೆ ಪಟ್ಟಿಗೆ ಸೇರಿಸಬೇಕೆಂದಿರುವ ಸ್ಥಳದ ನಾಮ ನಿರ್ದೇಶನವನ್ನು ಮಾಡಬೇಕಾಗುತ್ತದೆ. ಇದನ್ನು ಆಯಾಯ ದೇಶಗಳು ಮಾಡುತ್ತವೆ. 21 ಸದಸ್ಯ ರಾಷ್ಟ್ರಗಳನ್ನೊಳಗೊಂಡ ಯುನೆಸ್ಕೋದ ವಿಶ್ವ ಪರಂಪರೆಯ ತಾಣ ಸಮಿತಿಯು ಈ ತಾಣಗಳ ಅರ್ಹತೆಯನ್ನು ಪರಿಶೀಲಿಸಿ ಸೂಕ್ತವಾದವುಗಳನ್ನು ವಿಶ್ವ ಪರಂಪರೆಯ ತಾಣಗಳ ಪಟ್ಟಿಗೆ ಸೇರ್ಪಡೆಗೊಳಿಸುತ್ತದೆ. ಈ ಸಮಿತಿಯ ಸದಸ್ಯತ್ವವು ನಿಗದಿತ ಅವಧಿಯದಾಗಿದ್ದು ಸದಸ್ಯರಾಷ್ಟ್ರಗಳು ಬದಲಾಗುತ್ತಿರುತ್ತವೆ.

ವಿಶ್ವ ಪಾರಂಪರಿಕ ತಾಣ ಎಂದರೇನು?
ವಿಶ್ವ ಪರಂಪರೆಯ ತಾಣಗಳನ್ನು ನೈಸರ್ಗಿಕ ಅಥವಾ ಮಾನವ ನಿರ್ಮಿತ ಪ್ರದೇಶಗಳು ಅಥವಾ ಅಂತಾರಾಷ್ಟ್ರೀಯ ಪ್ರಾಮುಖ್ಯದ ಮತ್ತು ವಿಶೇಷ ರಕ್ಷಣೆಯ ಅಗತ್ಯವಿರುವ ಸಾಂಸ್ಕೃತಿಕ, ನೈಸರ್ಗಿಕ ಮತ್ತು ಐತಿಹಾಸಿಕ ಸ್ಥಳ ಅಥವಾ ಕಟ್ಟಡಗಳೆಂದು ವರ್ಗೀಕರಿಸಲಾಗಿದೆ.

ಈ ತಾಣಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಮಂಡಳಿ (ಯುನೆಸ್ಕೋ) ಅಧಿಕೃತವಾಗಿ ಗುರುತಿಸಿ ವಿಶ್ವ ಪಾರಂಪರಿಕ ತಾಣಗಳೆಂದು ಘೋಷಿಸುತ್ತದೆ. ಈ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸಿ ಅದನ್ನು ಮುಂದಿನ ತಲೆಮಾರಿಗೆ ಪರಿಚಯಿಸುವ ಉದ್ದೇಶದೊಂದಿಗೆ ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳನ್ನು ಗುರುತಿಸುವ ಪ್ರಕ್ರಿಯೆಯನ್ನು ಆರಂಭಿಸಿತು.

ಯುನೆಸ್ಕೋ ನೆರವು
ಪ್ರತಿ ವರ್ಷ ಪಟ್ಟಿಯಲ್ಲಿರುವ ತಾಣಗಳಿಗೆ ಅಂದಾಜು 20 ಕೋ. ರೂ. ನಿಧಿಯನ್ನು ಯುನೆಸ್ಕೋ ವ್ಯಯಿಸುತ್ತದೆ. ಈ ನಿಧಿ ಬಿಡುಗಡೆಯಾಗಬೇಕಾದರೆ ಸ್ಥಳೀಯ ಸರಕಾರ, ಖಾಸಗಿ ದಾನಿಗಳು ಆರ್ಥಿಕ ನೆರವು ನೀಡುವುದು ಕಡ್ಡಾಯವಾಗಿದೆ. ಯುನೆಸ್ಕೋ ಮಾರ್ಗಸೂಚಿಯಂತೆಯೇ ಈ ತಾಣಗಳಲ್ಲಿ ಎಲ್ಲ ಅಭಿವೃದ್ಧಿ ಅಥವಾ ಸಂರಕ್ಷಣ ಕಾಮಗಾರಿಗಳು ನಡೆಯಬೇಕು.

6ನೇ ಸ್ಥಾನದಲ್ಲಿ ಭಾರತ
ಪ್ರಸ್ತುತ ಭಾರತವು 38 ವಿಶ್ವ ಪಾರಂಪರಿಕ ತಾಣಗಳನ್ನು ಹೊಂದಿದೆ. ಈ ಮೂಲಕ ಭಾರತ ವಿಶ್ವದಲ್ಲಿಯೇ ಆರನೇ ಸ್ಥಾನದಲ್ಲಿದೆ. 38 ತಾಣಗಳ ಪೈಕಿ 30 ಸಾಂಸ್ಕೃತಿಕ, 7 ಪ್ರಾಕೃತಿಕ ಮತ್ತು ಒಂದು ಇವೆರಡರ ಮಹತ್ವವನ್ನೂ ಹೊಂದಿರುವ ತಾಣಗಳಾಗಿವೆ. “ವಿಶ್ವ ಪಾರಂಪರಿಕ ತಾಣ’ಗಳ ಪಟ್ಟಿಗೆ ಸೇರ್ಪಡೆಗೊಳಿಸಲು ಭಾರತದಿಂದ ಶಾಂತಿನಿಕೇತನ ಮತ್ತು ಹೊಯ್ಸಳ ದೇವಾಲಯ ಸಮೂಹಗಳನ್ನು ಸೇರಿಸಲು ನಾಮನಿರ್ದೇಶನಕ್ಕೆ ಸಂಬಂಧಿಸಿದಂತೆ ಪೂರಕ ದಾಖಲೆಗಳನ್ನು ಯುನೆಸ್ಕೋಗೆ ಕಳುಹಿಸಲಾಗಿದೆ. ಇದಲ್ಲದೆ ದೇಶದ 42 ತಾಣಗಳನ್ನು ತಾತ್ಕಾಲಿಕ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿದೆ.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.