ಮುನಿಯಾಲು ಪೇಟೆಯಲ್ಲಿ ಶೌಚಾಲಯದ ಕೊರತೆ : ದಶಕಗಳ ಮನವಿಗೆ ಸಿಕ್ಕಿಲ್ಲ ಸ್ಪಂದನೆ


Team Udayavani, Apr 18, 2021, 6:20 AM IST

ಮುನಿಯಾಲು ಪೇಟೆಯಲ್ಲಿ ಶೌಚಾಲಯದ ಕೊರತೆ : ದಶಕಗಳ ಮನವಿಗೆ ಸಿಕ್ಕಿಲ್ಲ ಸ್ಪಂದನೆ

ಅಜೆಕಾರು: ನಾಲ್ಕು ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆದ ವರಂಗ ಪಂಚಾಯತ್‌ನ ಪ್ರಮುಖ ಪೇಟೆ ಮುನಿಯಾಲಿನಲ್ಲಿ ಸಾರ್ವಜನಿಕ ಶೌಚಾಲಯ ಇಲ್ಲ ಎಂದರೆ ನಂಬಲೇ ಬೇಕು! ಅಭಿವೃದ್ಧಿ ಹೊಂದುತ್ತಿರುವ ಮುನಿಯಾಲು ಪೇಟೆಯಲ್ಲಿ ಶೌಚಾಲಯ ಅತ್ಯವಶ್ಯವಾಗಿದ್ದು, ಪೇಟೆಗೆ ಬಂದವರು ಬಹಿರ್ದೆಸೆಗೆ ಪರದಾಡಬೇಕಾಗಿದೆ.

ಜನರ ಬವಣೆ
ವ್ಯವಹಾರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮುನಿಯಾಲು ಪೇಟೆಯನ್ನು ಅವಲಂಬಿಸಿರುವುದರಿಂದ ಜನನಿಬಿಡವಾಗಿಯೂ ಇದೆ. ಮುನಿಯಾಲಿನಲ್ಲಿ ಸರಕಾರಿ ವಿದ್ಯಾ ಸಂಸ್ಥೆಗಳಲ್ಲಿ ಎಲ್‌ಕೆಜಿಯಿಂದ ಪದವಿ ತನಕ ಶಿಕ್ಷಣ ದೊರೆಯುತ್ತಿದ್ದು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಮುನಿಯಾಲಿಗೆ ಬರು ತ್ತಾರೆ. ಜತೆಗೆ ವಿದ್ಯಾರ್ಥಿಗಳ ಹೆತ್ತವರೂ ಆಗಿಂದಾಗ್ಗೆ ಬರುವುದಿದೆ. ಆಟೋ ಚಾಲಕರು, ಬಸ್‌ ನಿರ್ವಾಹಕ, ಚಾಲಕರೂ ಮುನಿಯಾಲಿಗೆ ಬಂದು ಹೋಗುತ್ತಾರೆ. ಆದರೆ ಶೌಚಾಲಯ ಇಲ್ಲದಿರುವುದರಿಂದ ಬಯಲು ಪ್ರದೇಶವನ್ನೇ ಆಶ್ರಯಿಸುತ್ತಾರೆ.

ಸಂತೆಗೆ ಬಂದವನ ಪಾಡು
ಪ್ರತಿವಾರ ನಡೆಯುವ ವಾರದ ಸಂತೆಗೂ ಸುತ್ತಲ ಗ್ರಾಮಗಳಿಂದ ಬರುವ ಜನರ ಸಂಖ್ಯೆ ಹೆಚ್ಚಾಗುತ್ತಿದ್ದು ಮುನಿಯಾಲಿಗೆ ಬರುವ ಪ್ರತಿಯೋರ್ವರೂ ಮೂತ್ರ ವಿಸರ್ಜನೆಗೆ ರಸ್ತೆ ಬದಿಯನ್ನೇ ಆಶ್ರಯಿಸ ಬೇಕಾಗಿದೆ ಎಂದು ಸಂತೆ ವ್ಯಾಪಾರಸ್ಥರು ಹೇಳುತ್ತಾರೆ.

ಸ್ವತ್ಛ ತೆ ಅಸಾಧ್ಯ
ಸಾರ್ವಜನಿಕ ಪ್ರದೇಶಗಳಲ್ಲಿ ಸ್ವಚ್ಚತೆ ಕಾಪಾಡುವುದು ಪ್ರತಿಯೋರ್ವರ ಕರ್ತವ್ಯ. ಆದರೆ ಅನಿವಾರ್ಯವಾಗಿ ಇಲ್ಲಿ ಸ್ವತ್ಛತೆ ಅಸಾಧ್ಯವಾಗಿದೆ. ಬಯಲು ಶೌಚ ಮುಕ್ತ ಆಂದೋಲನ ದೇಶದೆಲ್ಲಡೆ ನಡೆಯುತ್ತಿದ್ದರೂ ಇಲ್ಲಿ ಶೌಚ ಮುಕ್ತ ಆಗುವುದು ಅಸಾಧ್ಯವಾಗಿದೆ ಎಂದು ಜನರು ಹೇಳುತ್ತಾರೆ.

ಅನುದಾನ ಬೇರೆಡೆಗೆ ಸ್ಥಳಾಂತರ
ಕಳೆದ ಕೆಲ ವರ್ಷಗಳ ಹಿಂದೆ ಮುನಿಯಾಲಿನಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡುವ ಬಗ್ಗೆ ಅನುದಾನ ಬಿಡುಗಡೆ ಆಗಿತ್ತಾದರೂ ಪೇಟೆಯ ನಿವಾಸಿಗಳ ವಿರೋಧದ ಹಿನ್ನಲೆಯಲ್ಲಿ ಅದನ್ನು ಮೂಡು ಕುಡೂರು ಗರಡಿ ಬಳಿಗೆ ಸ್ಥಳಾಂತರಿಸಿ ನಿರ್ಮಾಣ ಮಾಡಲಾಗಿದೆ. ಇದು ಪೇಟೆಯಿಂದ ಸುಮಾರು 2 ಕಿ.ಮೀ. ದೂರವಿದ್ದು ಯಾವುದೇ ಪ್ರಯೋಜನ ಇಲ್ಲವಾಗಿದೆ.

ದಶಕಗಳಿಂದ ಮನವಿ
ಪೇಟೆಯಲ್ಲಿ ಶೌಚಾಲಯ ಮತ್ತು ಮೂಲಸೌಕರ್ಯ ವೃದ್ಧಿಗೆ ಜನರು ದಶಕಗಳಿಂದ ಮನವಿ ಮಾಡುತ್ತಲೇ ಬರುತ್ತಿದ್ದಾರೆ. ಗ್ರಾಮಸಭೆಗಳಲ್ಲೂ ಈ ವಿಚಾರ ಸಂಬಂಧ ನಿರ್ಣಯ ಕೈಗೊಳ್ಳಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಮುತುವರ್ಜಿ ವಹಿಸಬೇಕೆಂಬ ಆಗ್ರಹ ಜನರದ್ದಾಗಿದೆ.

ಸೂಕ್ತ ಕ್ರಮ
ಮುನಿಯಾಲಿನಲ್ಲಿ ಸಾರ್ವಜನಿಕ ಶೌಚಾಲಯ ಅಗತ್ಯ. ಈ ನಿಟ್ಟಿನಲ್ಲಿ ಸ್ಥಳೀಯರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
-ಉಷಾ ಹೆಬ್ಟಾರ್‌, ಅಧ್ಯಕ್ಷರು, ವರಂಗ ಗ್ರಾ.ಪಂ.

ಸ್ಥಳದ ಕೊರತೆ
ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಲು ಪೇಟೆಯಲ್ಲಿ ಸೂಕ್ತ ಸ್ಥಳದ ಕೊರತೆ ಇದ್ದು ಸೂಕ್ತ ಸ್ಥಳ ಗುರುತಿಸಿದಲ್ಲಿ ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು.
-ವಿಜಯ, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ, ವರಂಗ ಗ್ರಾ.ಪಂ.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.