ಬುಧವಾರ ಸಂಜೆ ನಾಲ್ಕು ಗಂಟೆಗೆ ನೂತನ ಸಚಿವರ ಪದಗ್ರಹಣ: ಯಡಿಯೂರಪ್ಪ
Team Udayavani, Jan 12, 2021, 10:26 AM IST
ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ನೂತನ ಸಚಿವರ ಸೇರ್ಪಡೆಗೆ ಮುಹೂರ್ತ ಸಿದ್ದವಾಗಿದ್ದು ಬುಧವಾರ (ಜ.13) ಸಂಜೆ ನಾಲ್ಕು ಗಂಟೆಗೆ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಈ ಬಗ್ಗೆ ಮಾಹಿತಿ ನೀಡಿದ್ದು, ನಾಳೆ ಸಂಜೆ ನಾಲ್ಕು ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ನೂತನ ಸಚಿವರ ಪಟ್ಟಿ ನಾಳೆ ಬಿಡುಗಡೆ ಮಾಡಲಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ:ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿಗೆ ಆ್ಯಪ್ ಸಿದ್ಧ
ಕಳೆದ ರವಿವಾರ ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದರು. ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಜೊತೆ ಚರ್ಚೆ ನಡೆಸಿದ್ದರು. ಅದೇ ದಿನ ಸಂಜೆ ಬೆಂಗಳೂರಿಗೆ ಮರಳಿದ ನಂತರ ಸಂಪುಟ ವಿಸ್ತರಣೆಯ ಬಗ್ಗೆ ಮಾಹಿತಿ ನೀಡಿದ್ದರು.
ಏಳು ಜನರಿಗೆ ಸಚಿವ ಸ್ಥಾನ ನೀಡಲು ವರಿಷ್ಠರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಬಿಎಸ್ ವೈ ಹೇಳಿದ್ದರು. ಇದಾದ ಬಳಿಕ ಬಾರಿ ಸಚಿವಗಿರಿಗಾಗಿ ಲಾಬಿ ನಡೆಯುತ್ತಿದ್ದು, ಸಂಪುಟ ವಿಸ್ತರಣೆಯೋ ಅಥವಾ ಪನರಚನೆಯೋ ಎನ್ನುವ ಬಗ್ಗೆ ಇನ್ನೂ ಖಚಿತತೆ ಸಿಕ್ಕಿಲ್ಲ.
ಬಿಜೆಪಿ ಸರ್ಕಾರ ರಚನೆಗೆ ಸಹಾಯಕವಾದ ಮುನಿರತ್ನ, ಆರ್. ಶಂಕರ್, ಎಂಟಿಬಿ ನಾಗರಾಜ್ ಗೆ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ