ನಾಪತ್ತೆಯಾಗಿದ್ದ ಕುಖ್ಯಾತ ಮಾವೋವಾದಿ ನಾಯಕ “ಆರ್.ಕೆ. ಬಸ್ತಾರ್ ಅರಣ್ಯದಲ್ಲಿ” ನಿಧನ

ಮಾವೋವಾದಿ ಉನ್ನತ ನಾಯಕನ ನಿಧನದ ಸುದ್ದಿಯನ್ನು ಚತ್ತೀಸ್ ಗಢ್ ಪೊಲೀಸರು ಖಚಿತಪಡಿಸಿದ್ದಾರೆ.

Team Udayavani, Oct 15, 2021, 9:50 AM IST

ನಾಪತ್ತೆಯಾಗಿದ್ದ ಕುಖ್ಯಾತ ಮಾವೋವಾದಿ ನಾಯಕ “ಆರ್.ಕೆ. ಬಸ್ತಾರ್ ಅರಣ್ಯದಲ್ಲಿ” ನಿಧನ

ನವದೆಹಲಿ: 2004ರಲ್ಲಿ ಆಂಧ್ರಪ್ರದೇಶ ಸರ್ಕಾರದ ಜೊತೆ ಶಾಂತಿ ಮಾತುಕತೆಗೆ ಕಾರಣಕರ್ತನಾಗಿದ್ದ ನಿಷೇಧಿತ ಮಾವೋವಾದಿ ಸಂಘಟನೆಯ ಉನ್ನತ ಮುಖಂಡ ಅಕ್ಕಿರಾಜು ಹರಗೋಪಾಲ್ ಅಲಿಯಾಸ್ ರಾಮಕೃಷ್ಣ ಅನಾರೋಗ್ಯದಿಂದ ಛತ್ತೀಸ್ ಗಢದಲ್ಲಿ ನಿಧನರಾಗಿರುವುದಾಗಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಮುಂದುವರಿದ ಉಗ್ರರ ಅಟ್ಟಹಾಸ: ಭಯೋತ್ಪಾದಕರ ದಾಳಿಗೆ ಸೇನಾ ಅಧಿಕಾರಿ, ಯೋಧ ಹುತಾತ್ಮ

ಮೂಲಗಳ ಪ್ರಕಾರ, ಆರ್ ಕೆ ಎಂದೇ ಕುಖ್ಯಾತಿ ಪಡೆದಿದ್ದ 58 ವರ್ಷದ ನಕ್ಸಲ್ ಮುಖಂಡ ದೀರ್ಘಕಾಲದ ಅನಾರೋಗ್ಯದಿಂದ ದಕ್ಷಿಣ ಬಸ್ತಾರ್ ನಲ್ಲಿ ಬುಧವಾರ ಸಾವನ್ನಪ್ಪಿರುವುದಾಗಿ ಹೇಳಿದೆ. ಆರ್ ಕೆ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ-ಮಾವೋವಾದಿ ಕೇಂದ್ರ ಸಮಿತಿಯ ಸದಸ್ಯ ಮತ್ತು ನಿಷೇಧಿತ ಸಂಘಟನೆಯ ಆಂಧ್ರ-ಒಡಿಶಾ ಗಡಿ ವಿಶೇಷ ವಲಯ ಸಮಿತಿಯ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿರುವುದಾಗಿ ವರದಿ ವಿವರಿಸಿದೆ.

ಮಾವೋವಾದಿ ಸಂಘಟನೆಯಲ್ಲಿ ಪ್ರಮುಖ ವಿಚಾರವಾದಿಯಾಗಿದ್ದ ಆರ್ ಕೆ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿದ್ದವು, ಅಷ್ಟೇ ಅಲ್ಲ ಆರ್ ಕೆ ಬಗ್ಗೆ ಮಾಹಿತಿ ಕೊಟ್ಟವರಿಗೆ 97 ಲಕ್ಷ ರೂಪಾಯಿ ಬಹುಮಾನ ಕೊಡುವುದಾಗಿ ಪೊಲೀಸ್ ಇಲಾಖೆ ಘೋಷಿಸಿತ್ತು.

ಮಾವೋವಾದಿ ಉನ್ನತ ನಾಯಕನ ನಿಧನದ ಸುದ್ದಿಯನ್ನು ಚತ್ತೀಸ್ ಗಢ್ ಪೊಲೀಸರು ಖಚಿತಪಡಿಸಿದ್ದಾರೆ. ಗುಪ್ತಚರ ಇಲಾಖೆ ಕೂಡಾ ಸ್ಪಷ್ಟಪಡಿಸಿರುವುದಾಗಿ ವರದಿ ತಿಳಿಸಿದೆ. ಏತನ್ಮಧ್ಯೆ ಸಿಪಿಐ(ಮಾವೋವಾದಿ) ಆರ್ ಕೆ ಸಾವಿನ ಕುರಿತು ಯಾವುದೇ ಪ್ರಕಟಣೆ ನೀಡಿಲ್ಲ.

2016ರ ಅಕ್ಟೋಬರ್ ನಲ್ಲಿ ಒಡಿಶಾ ಮಲ್ಕಾನ್ ಗಿರಿ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಆರ್ ಕೆ ಗಾಯಗೊಂಡಿದ್ದು, ಈ ಸಂದರ್ಭದಲ್ಲಿ ನಡೆದ ಎನ್ ಕೌಂಟರ್ ನಲ್ಲಿ 30 ಮಂದಿ ಮಾವೋವಾದಿಗಳು ಸಾವನ್ನಪ್ಪಿದ್ದರು. ಅಂದು ಪ್ರಾಥಮಿಕ ವರದಿಯ ಪ್ರಕಾರ ಆರ್.ಕೆ ನಾಪತ್ತೆಯಾಗಿರುವುದಾಗಿ ವರದಿಯಾಗಿತ್ತು.

ಮಾವೋವಾದಿ ಪರ ಸಹಾನುಭೂತಿ ಹೊಂದಿದ ಗುಂಪು ಮತ್ತು ಮಾನವ ಹಕ್ಕು ಹೋರಾಟಗಾರರು ಆರ್ ಕೆ ಪೊಲೀಸ್ ವಶದಲ್ಲಿದ್ದಾರೆ ಎಂದು ಆರೋಪಿಸಿದ್ದರು. ಆರ್ ಕೆ ಪತ್ನಿ ಶಿರೀಷಾ ಹೈದರಾಬಾದ್ ಹೈಕೋರ್ಟ್ ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಕೊನೆಗೆ ಮಾವೋವಾದಿ ಸಂಘಟನೆ ಆರ್ ಕೆ ಸುರಕ್ಷಿತರಾಗಿರುವುದಾಗಿ ಪ್ರಕಟಣೆ ಹೊರಡಿಸಿತ್ತು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.