ರಾಜ್ಯದಲ್ಲಿ ಒಟ್ಟು 3484 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ: ಆರಗ ಜ್ಞಾನೇಂದ್ರ
Team Udayavani, Sep 13, 2022, 9:55 AM IST
ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪಡೆಗಳ ಕಾನ್ಸ್ಟೇಬಲ್ ಹುದ್ದೆಗಳನ್ನು, ಭರ್ತಿ ಮಾಡಲಾಗುತ್ತಿದ್ದು, ಪ್ರಥಮ ಬಾರಿಗೆ, ಪುರುಷ ತೃತೀಯ ಲಿಂಗಿ ಸಮುದಾಯದ 79 ಅಭ್ಯರ್ಥಿಗಳನ್ನು ಒಳಗೊಂಡಂತೆ ಒಟ್ಟು 3484 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಈ ಬಗ್ಗೆ ಮಾಹಿತಿ ನೀಡಿದ ಅವರು, ಈ ಎಲ್ಲಾ ಹುದ್ದೆಗಳನ್ನು ಅತ್ಯಂತ ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತಿದ್ದು, ಅಕ್ಟೋಬರ್ ತಿಂಗಳ 31 ರಂದು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 371J ಮೀಸಲಾತಿಯಂತ ಒಟ್ಟು 420 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇದರಲ್ಲಿ 11 ಪುರುಷ ತೃತೀಯ ಲಿಂಗಿಗಳಿಗೆ ಮೀಸಲಾಗಿದೆ. ರಾಜ್ಯದ ಇತರ ಭಾಗಗಳಲ್ಲಿ ಒಟ್ಟು 3064 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 68 ಹುದ್ದೆಗಳು ತೃತೀಯ ಲಿಂಗಿ ಪುರುಷರಿಗೆ ಮೀಸಲಾತಿ ನೀಡಲಾಗಿದೆ. ರಾಜ್ಯದಲ್ಲಿ ಪೊಲೀಸ್ ಇಲಾಖೆಯ ಎಲ್ಲಾ ವಿಭಾಗಗಳಲ್ಲಿ ಒಟ್ಟು ಒಂದು ಲಕ್ಷಕ್ಕೂ ಹೆಚ್ಚು ಹುದ್ದೆಗಳಲ್ಲಿ ಸುಮಾರು 16000 ಹುದ್ದೆಗಳು ಭರ್ತಿಯಾಗಬೇಕಿದೆ ಎಂದರು.
ಇದನ್ನೂ ಓದಿ:ಉಪ್ಪಿನಂಗಡಿ : 8,800ರೂ. ಬೆಲೆಯ ಫೋನ್ 1,785 ರೂ.ಗೆ : ಪಾರ್ಸೆಲ್ ನಂಬಿ ಹಣ ಕಳೆದುಕೊಂಡರು
ನೇಮಕಾತಿ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿ ನಡೆಯಲಿದ್ದು, ಅಭ್ಯರ್ಥಿಗಳು, ಯಾವುದೇ ಅಕ್ರಮಗಳ ಅಥವಾ ವಾಮಮಾರ್ಗದ ಮೂಲಕ ಹುದ್ದೆಗಳನ್ನು ಪಡೆಯಲು ಯತ್ನಿಸಿದರೆ, ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವರು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ