ಕೃಷಿ ಮಸೂದೆಗೆ ವಿರೋಧ: ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ
ಮುಖ್ಯವಾಗಿ ಪಂಜಾಬ್ ಮತ್ತು ಹರ್ಯಾಣದಲ್ಲಿ ತೀವ್ರ ವಿರೋಧ, ಪ್ರತಿಭಟನೆ ವ್ಯಕ್ತವಾಗಿದೆ.
Team Udayavani, Sep 28, 2020, 9:56 AM IST
ನವದೆಹಲಿ: ಭೂ ಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆಗಳ ಜಾರಿಗೆ ಹೊರಟಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಧೋರಣೆ ವಿರೋಧಿಸಿ ಸೋಮವಾರ ನಡೆಸುತ್ತಿರುವ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ವೊಂದಕ್ಕೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿಯನ್ನು ನಂದಿಸಿರುವುದಾಗಿ ವರದಿ ತಿಳಿಸಿದೆ. ರೈತರ ಹಾಗೂ ವಿಪಕ್ಷಗಳ ವಿರೋಧದ ನಡುವೆಯೇ ಸಂಸತ್ ನಲ್ಲಿ ಅಂಗೀಕಾರವಾಗಿರುವ ಕೃಷಿ ಸಂಬಂಧಿ ಮೂರು ಮಸೂದೆಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾನುವಾರ ಅಂಕಿತ ಹಾಕಿದ್ದಾರೆ.
ದೆಹಲಿಯ ಸೆಂಟ್ರಲ್ ಪ್ರದೇಶದಲ್ಲಿ ಬೆಳಗ್ಗೆ 15ರಿಂದ 20 ಮಂದಿ ಗುಂಪುಗೂಡಿದ್ದು, ಹಳೆಯ ಟ್ರ್ಯಾಕ್ಟರ್ ವೊಂದಕ್ಕೆ ಬೆಂಕಿ ಹಚ್ಚಿದ್ದರು. ಪೊಲೀಸರ ಹೇಳಿಕೆ ಪ್ರಕಾರ, ಪ್ರತಿಭಟನಾಕಾರರು ಕಾಂಗ್ರೆಸ್ ಪರ ಘೋಷಣೆ ಕೂಗುತ್ತಿದ್ದು, ಅವರನ್ನು ಪತ್ತೆಹಚ್ಚಲು ಪೊಲೀಸರು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: ಕರ್ನಾಟಕ ಬಂದ್: ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ, ಬಸ್ ಸಂಚಾರ ಆರಂಭ
ಕೃಷಿ ಮಸೂದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಮುಖ್ಯವಾಗಿ ಪಂಜಾಬ್ ಮತ್ತು ಹರ್ಯಾಣದಲ್ಲಿ ತೀವ್ರ ವಿರೋಧ, ಪ್ರತಿಭಟನೆ ವ್ಯಕ್ತವಾಗಿದೆ.
ಕರ್ನಾಟಕದಲ್ಲಿಯೂ ರಾಜ್ಯ ಬಂದ್ ಗೆ ರೈತ ಸಂಘ ಸೇರಿದಂತೆ ಹಲವಾರು ಸಂಘಟನೆಗಳು ಕರೆ ನೀಡಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲ್ಲದೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ್ದರು. ರಾಜ್ಯದಲ್ಲಿ ಜನಜೀವನಕ್ಕೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸುವಂತೆ ತಿಳಿಸಿದ್ದರು.
ಇದನ್ನೂ ಓದಿ: ರೈತರ ಕರೆಗಿಂದು ಕರ್ನಾಟಕ ಬಂದ್: ಹಲವೆಡೆ ಪ್ರತಿಭಟನೆ, ಬೆಂಗಳೂರಿನಲ್ಲಿ ರೈಲು ತಡೆಯತ್ನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ