ಆರೋಗ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ವರ್ಗಾವಣೆಗೆ ಕಟ್ಟುನಿಟ್ಟಿನ ಕ್ರಮ : ಸುಧಾಕರ್


Team Udayavani, Aug 18, 2021, 3:48 PM IST

ಅರೋಗ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ವರ್ಗಾವಣೆಗೆ ಕಟ್ಟುನಿಟ್ಟಿನ ಕ್ರಮ : ಸುಧಾಕರ್

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ವರ್ಗಾವಣೆ ಪ್ರಕ್ರಿಯೆಯಲ್ಲಿ ಕೌನ್ಸಿಲಿಂಗ್ ಕಡ್ಡಾಯಗೊಳಿಸುವುದರ ಮೂಲಕ ಕಟ್ಟುನಿಟ್ಟಿನ ಕ್ರಮಕ್ಕೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನಾಂದಿ ಹಾಡಿದ್ದಾರೆ.

ಈ ಮೂಲಕ ಇಲಾಖೆಯಲ್ಲಿ ಅನಿಯಮಿತ ವರ್ಗಾವಣೆಗೆ ತಡೆ ಹಾಕಿ, ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಶಿಸ್ತು, ಪಾರದರ್ಶಕತೆ ಹಾಗೂ ದಕ್ಷತೆ ತರಲಾಗಿದೆ. ಇದರಿಂದಾಗಿ ಇನ್ನು ಮುಂದೆ ಸಾರ್ವಜನಿಕರಿಗೆ ಯಾವುದೇ ಅಡ್ಡಿ ಇಲ್ಲದೆ ಸಮರ್ಪಕ ಆರೋಗ್ಯ ಸೇವೆ ಲಭ್ಯವಾಗಲಿದೆ.

ಆರೋಗ್ಯ ಇಲಾಖೆಯ ಆಡಳಿತದಲ್ಲಿ ದಕ್ಷತೆ ತಂದು ಭ್ರಷ್ಟಾಚಾರ ಮುಕ್ತಗೊಳಿಸುವ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಂಡಿದ್ದು, ಪಾರದರ್ಶಕ ಹಾಗೂ ನಿಗದಿತ ಕಾಲಮಿತಿಯಲ್ಲಿ ಸಕ್ಷಮ ಪ್ರಾಧಿಕಾರಗಳ ಮೂಲಕವೇ ವರ್ಗಾವಣೆ ಮಾಡುವ ಕಾನೂನನ್ನು ಕಡ್ಡಾಯವಾಗಿ ಜಾರಿಗೊಳಿಸಲು ಉನ್ನತಾಧಿಕಾರಿಗಳ ಸಭೆಯಲ್ಲಿ ಸೂಚಿಸಲಾಗಿದೆ. ಈ ಸಂಬಂಧ ಈಗಾಗಲೇ ಆದೇಶ ಹೊರಡಿಸಲಾಗಿದ್ದು, ಶಿಫಾರಸು, ಲಾಬಿಗಳಿಗೆ ತಡೆ ಬಿದ್ದಿದೆ.

ಇದನ್ನೂ ಓದಿ :ಸರಕಾರಿ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸಿ : ಅಧಿಕಾರಿಗಳಿಗೆ ಸಚಿವೆ ಜೊಲ್ಲೆ ಸೂಚನೆ

ಸಚಿವರಿಂದ ಸೂಚನೆ

ಇಲಾಖೆಯ ವ್ಯಾಪ್ತಿಯ ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿಯ ವರ್ಗಾವಣೆಯನ್ನು ‘ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) ಕಾಯ್ದೆ 2011 ರ ಅನ್ವಯ ಕೌನ್ಸಿಲಿಂಗ್ ಮೂಲಕ ಮಾತ್ರ ಕೈಗೊಳ್ಳುವಂತೆ ಸ್ಪಷ್ಟ ಆದೇಶವಿದೆ. ಈ ಕಾಯ್ದೆಯ ಕಲಂ 5 ರಲ್ಲಿ ಆಡಳಿತಾತ್ಮಕ ಹುದ್ದೆಗಳಿಗೆ ಕೌನ್ಸಿಲಿಂಗ್ ನಿಂದ ವಿನಾಯಿತಿ ನೀಡಲಾಗಿದೆ. ಅಂತಹ ಪ್ರಸ್ತಾವಗಳನ್ನು ಸಚಿವರಿಗೆ ಕಳುಹಿಸಲಾಗುತ್ತದೆ.

ಆದರೆ ಇತರೆ ವರ್ಗಾವಣೆ ಪ್ರಸ್ತಾವಗಳನ್ನು ಕಳುಹಿಸಬಾರದು. ಒಂದು ವೇಳೆ ಹಾಗೆ ಮಾಡಿದರೆ ಕಡತ ನಿರ್ವಹಿಸುವ ವಿಷಯ ನಿರ್ವಹಕರು ಸೇರಿದಂತೆ ಸಂಬಂಧಿಸಿದ ಎಲ್ಲರ ವಿರುದ್ಧ ಇಲಾಖಾ ಶಿಸ್ತು ಕ್ರಮ ಜರುಗಿಸಬೇಕೆಂದು ಸಚಿವ ಡಾ.ಕೆ.ಸುಧಾಕರ್ ಸೂಚಿಸಿದ್ದಾರೆ.

ಗಂಭೀರ ಹಾಗೂ ಮಾರಣಾಂತಿಕ ರೋಗದಿಂದ ಬಳಲುತ್ತಿರುವವರು, ವಯೋ ನಿವೃತ್ತಿ ಅಂಚಿನಲ್ಲಿದ್ದು, ಇನ್ನು ಎರಡು ವರ್ಷ ಮಾತ್ರ ಸೇವೆ ಬಾಕಿ, ಶೇ.40 ಕ್ಕೂ ಹೆಚ್ಚು ಅಂಗವೈಕಲ್ಯ ಹೊಂದಿರುವವರು, ವಿಧವೆಯರು, ಪತಿ-ಪತ್ನಿ ಪ್ರಕರಣಕ್ಕೆ ಮಾತ್ರ ಕೌನ್ಸಿಲಿಂಗ್ ನಿಂದ ವಿನಾಯಿತಿ ನೀಡಬೇಕು. ಇಂತಹ ಪ್ರಸ್ತಾವಗಳನ್ನು ಅಪರ ಮುಖ್ಯ ಕಾರ್ಯದರ್ಶಿಯವರ ಸ್ಪಷ್ಟ ಶಿಫಾರಸಿನೊಂದಿಗೆ ಕಡತವನ್ನು ಎರಡು ತಿಂಗಳಿಗೊಮ್ಮೆ ಮಾತ್ರ ಸಚಿವರ ಅನುಮೋದನೆಗೆ ಸಲ್ಲಿಸಬೇಕು. ಈ ಕುರಿತು ಕಾಯ್ದೆಯಲ್ಲಿ ಅವಶ್ಯ ತಿದ್ದುಪಡಿ ತರಲು ಮುಂದಿನ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚನೆ ನೀಡಿದ್ದಾರೆ.

ವರ್ಗಾವಣೆ ಸಂಬಂಧ 2011 ರಲ್ಲಿ ಕಾನೂನು ರೂಪಿಸಿ, ನಿಯಮ ರಚಿಸಲಾಗಿದೆ. 2017 ರಲ್ಲಿ ಕಾನೂನಿಗೆ ತಿದ್ದುಪಡಿ ತಂದು ಜಾರಿಗೊಳಿಸಲಾಗಿದೆ. ಇನ್ನು ಮುಂದೆ ಈ ಕಾನೂನು ಅನ್ವಯ ವರ್ಗಾವಣೆ ನಡೆಯಲಿದೆ.

“ನಿಯಮ ಉಲ್ಲಂಘಿಸಿ ವರ್ಗಾವಣೆ ಪ್ರಸ್ತಾವನೆ, ಶಿಫಾರಸು ತಂದರೆ ಸಂಬಂಧಪಟ್ಟ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಈ ನಿರ್ಧಾರದ ಮೂಲಕ ಅನಿಯಮಿತ ವರ್ಗಾವಣೆ, ಭ್ರಷ್ಟಾಚಾರಕ್ಕೆ ತಡೆ ಬೀಳಲಿದ್ದು, ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಶಿಸ್ತು ಹಾಗೂ ಆರೋಗ್ಯ ಸೇವೆ ಒದಗಿಸುವಲ್ಲಿ ದಕ್ಷತೆ ಬರಲಿದೆ” ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಇದನ್ನೂ ಓದಿ :ಜಮೀನು ಖಾತೆ ವಿಚಾರ: ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಗ್ರಾಮ‌ಲೆಕ್ಕಿಗ

ನಿಯಮದಲ್ಲೇನಿದೆ?

ಹಿರಿಯ ತಜ್ಞರು, ತಜ್ಞರು, ಉಪಮುಖ್ಯ ವೈದ್ಯಾಧಿಕಾರಿ, ಹಿರಿಯ ವೈದ್ಯಾಧಿಕಾರಿ, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ, ಮುಖ್ಯ ದಂತ ವೈದ್ಯಾಧಿಕಾರಿ, ಹಿರಿಯ ದಂತ ವೈದ್ಯಾಧಿಕಾರಿ, ದಂತ ವೈದ್ಯಾಧಿಕಾರಿಗಳ ವರ್ಗಾವಣೆಯನ್ನು ಇಲಾಖೆಯ ಆಯುಕ್ತರು ಮಾಡಬಹುದು. ಗ್ರೂಪ್ ಬಿ, ಸಿ, ಡಿ ನೌಕರರನ್ನು ಇಲಾಖೆಯ ನಿರ್ದೇಶಕರು ವರ್ಗಾವಣೆ ಮಾಡಬಹುದು. ಆಯುಷ್ ಇಲಾಖೆಯಡಿಯ ಫಿಸಿಶಿಯನ್ ಗ್ರೇಡ್ 1, ಗೇಡ್ 2 ಗೆ ಆಯುಷ್ ಇಲಾಖೆಯ ನಿರ್ದೇಶಕರು, ಆಯುಷ್ ಇಲಾಖೆಯ ಗ್ರೂಪ್ ಬಿ, ಸಿ, ಡಿ, ನೌಕರರಿಗೆ ಇಲಾಖೆಯ ನಿರ್ದೇಶಕರು ವರ್ಗಾವಣೆ ಮಾಡಬಹುದು.

ಗ್ರೂಪ್-ಎ ಗೆ ಮೂರು ವರ್ಷ, ಗ್ರೂಪ್-ಬಿ ಗೆ ನಾಲ್ಕು ವರ್ಷ, ಗ್ರೂಪ್-ಸಿ ಗೆ ಐದು ವರ್ಷ, ಗ್ರೂಪ್-ಡಿ ಗೆ ಏಳು ವರ್ಷ ಒಂದು ಕಡೆ ಕಡ್ಡಾಯವಾಗಿ ಸೇವೆ ಸಲ್ಲಿಸಲು ನಿಯಮದಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.