ಪಾರ್ಕ್ನಲ್ಲಿ ಧರೆಗುರುಳಿದ ಬೃಹತ್ ಮರಗಳು: ಕಾರ್ಗಳು ಸಂಪೂರ್ಣ ಜಖಂ
Team Udayavani, Nov 12, 2021, 1:55 PM IST
ಮೈಸೂರು: ನಗರದ ರಾಜ್ಕುಮಾರ್ ಪಾರ್ಕ್ನಲ್ಲಿ ಮಳೆಯಿಂದಾಗಿ ಎರಡು ಬೃಹತ್ ಮರಗಳು ಧರೆಗುರುಳಿದ್ದು, ಎರಡು ಕಾರ್ಗಳು ಸಂಪೂರ್ಣ ಜಖಂಗೊಂಡ ಘಟನೆ ಶುಕ್ರವಾರ ನಡೆದಿದ್ದು, ಅದ್ರಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಮೈಸೂರಿನ ಶ್ರೀ ಹರ್ಷ ರಸ್ತೆಯಲ್ಲಿ ಘಟನೆ ನಡೆದಿದ್ದು, ಬೃಹತ್ ಮರ ಉರುಳಿದ ಪರಿಣಾಮ ಎರಡು ಕಾರು, 5 ವಿದ್ಯುತ್ ಕಂಬಗಳು ಜಖಂಗೊಂಡಿವೆ.
ಸಂಪೂರ್ಣವಾಗಿ ರಸ್ತೆಗೆ ಮರ ಬಿದ್ದ ಪರಿಣಾಮ ಹರ್ಷ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ.
ಪಾಲಿಕೆ ಹಾಗೂ ಸೆಸ್ಕ್ ಸಿಬ್ಬಂದಿ ಮರವನ್ನು ತೆರವು ಮಾಡುತ್ತಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮೈಸೂರಿನಲ್ಲೂ ಸೈಕ್ಲೋನ್ ಎಫೆಕ್ಟ್ ಕಂಡು ಬಂದಿದ್ದು, ಸತತ ಮಳೆ ಬಿದ್ದ ಪರಿಣಾಮ ಅವಘಡ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ