ನಾಲ್ವರ ಸಾವು: ಮಂಗಳೂರಿನಲ್ಲಿ ಮತಾಂತರ ಮಾಡಲು ಯತ್ನಿಸಿದ್ದು ದೃಢ
Team Udayavani, Dec 11, 2021, 11:45 AM IST
ಮಂಗಳೂರು: ಒಂದೇ ಕುಟುಂಬದ ನಾಲ್ವರ ಸಾವು ಪ್ರಕರಣದಲ್ಲಿ ನೂರ್ ಜಹಾನ್ ಎಂಬ ಮಹಿಳೆ ಮತಾಂತರ ಮಾಡಲು ಯತ್ನಿಸಿದ್ದು ದೃಢವಾಗಿದ್ದು ಆಕೆಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಶನಿವಾರ ತಿಳಿಸಿದ್ದಾರೆ.
ನಾಗೇಶ್ ಗೆ ಡೈವೋರ್ಸ್ ಕೊಡು, ನಾನು ಮುಸ್ಲಿಂ ಹುಡುಗನ ಜತೆ ನಿನ್ನ ಮದುವೆ ಮಾಡುತ್ತೇನೆ ಎಂದು ಕೂಡ ನೂರ್ ಜಹಾನ್ ಹೇಳಿದ್ದಳು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಹಿನ್ನೆಲೆಯಲ್ಲಿ ನೂರ್ ಜಹಾನ್ ಳನ್ನು ಬಂಧನ ಮಾಡಲಾಗಿದೆ. ನೂರ್ ಜಹಾನ್ ಮುಸ್ಲಿಮರ ಮದುವೆ ಬ್ರೋಕರ್ ಆಗಿ ಕೆಲಸ ಮಾಡತ್ತಿದ್ದಳು ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ವಿಜಯಲಕ್ಷ್ಮೀ ತನ್ನ ಗಂಡ ನಾಗೇಶ್ ಗೆ ಡೈವೋರ್ಸ್ ನೀಡಲು ನಿರ್ಧರಿಸಿದ್ದಳು ಎಂದು ಕಮಿಷನರ್ ತಿಳಿಸಿದರು.
ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮೋರ್ಗನ್ಸ್ ಗೇಟ್ನ ಜೆಪ್ಪು ಮಾರ್ಕೆಟ್ ಬಳಿಯ ಮನೆಯಲ್ಲಿ ಪತಿ ನಾಗೇಶ್ ಶಿರಗುಪ್ಪಿ (30) ಪತ್ನಿ ಪತ್ನಿ ವಿಜಯಲಕ್ಷ್ಮೀ(26), ಮಕ್ಕಳಾದ ಸಪ್ನಾ (8) ಮತ್ತು ಸಮರ್ಥ್ (4) ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದರು.
ಇದನ್ನೂ ಓದಿ : ಮಂಗಳೂರು:ಬಸ್ನಲ್ಲಿ ಅನ್ಯಕೋಮಿನ ಜೋಡಿಗೆ ಗದರಿಸಿದ ಇಬ್ಬರು ವಶಕ್ಕೆ
ಮೂಲತಃ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಸುನಗ ಗ್ರಾಮದ ನಿವಾಸಿಗಳಾಗಿದ್ದು, ಮಂಗಳೂರಿನಲ್ಲಿ 8 ವರ್ಷಗಳಿಂದ ವಾಸವಿದ್ದರು. ಬುಧವಾರ ಬೆಳಗ್ಗೆ 11 ಗಂಟೆ ವೇಳೆಗೆ ನಾಗೇಶ್ ಪಕ್ಕಾಸಿಗೆ ನೇಣುಬಿಗಿದ ಸ್ಥಿತಿಯಲ್ಲಿದ್ದರು. ವಿಜಯಲಕ್ಷ್ಮೀ ಮತ್ತು ಇನ್ನೊಂದು ಮಗು ಹಾಸಿಗೆ ಮೇಲೆ ಹಾಗೂ ಮತ್ತೊಂದು ಮಗು ನೆಲದ ಮೇಲೆ ಬಿದ್ದುಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ