ಬಳ್ಳಾರಿ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ ನ ತ್ರಿವೇಣಿ ಆಯ್ಕೆ,ಜಾನಕಿ ಉಪಮೇಯರ್

ರಾಜ್ಯದಲ್ಲೇ ಅತ್ಯಂತ ಚಿಕ್ಕ ವಯಸ್ಸಿನ ಮೇಯರ್ !

Team Udayavani, Mar 29, 2023, 4:30 PM IST

1-wwqewqewqewqe

ಬಳ್ಳಾರಿ: ಮಹಾನಗರ ಪಾಲಿಕೆಯ 22 ನೇ ಅವಧಿಯ ನೂತನ ಮೇಯರ್ ಆಗಿ ಕಾಂಗ್ರೆಸ್ ಪಕ್ಷದ 4 ನೇ ವಾರ್ಡ್ ನ ಡಿ.ತ್ರಿವೇಣಿ, ಉಪ ಮೇಯರ್ ಆಗಿ 33 ನೇ ವಾರ್ಡ್ ನ ಬಿ.ಜಾನಕಿ ಆಯ್ಕೆಯಾಗಿದ್ದಾರೆ.

ಪಾಲಿಕೆಯ ಸಭಾಂಗಣದಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಪರಿಶಿಷ್ಟ ಜಾತಿಗೆ(ಸಾಮಾನ್ಯ) ಮೀಸಲಾಗಿದ್ದ ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ 4 ನೇ ವಾರ್ಡ್ ನ ಡಿ.ತ್ರಿವೇಣಿ, 7 ನೇ ವಾರ್ಡ್ ನ ಉಮಾದೇವಿ ಶಿವರಾಜ್, 38 ನೇ ವಾರ್ಡ್ ನ ಕುಬೇರ ಮತ್ತು 16 ನೇ ವಾರ್ಡ್ ಬಿಜೆಪಿ ಸದಸ್ಯೆ ನಾಗರತ್ನಮ್ಮ ನಾಮಪತ್ರ ಸಲ್ಲಿಸಿದ್ದರು.

ಕಾಂಗ್ರೆಸ್‌ನ ವಿ.ಕುಬೇರ, ಉಮಾದೇವಿ ಶಿವರಾಜ್ ನಾಮಪತ್ರ ಹಿಂಪಡೆದರು. ಬಳಿಕ ಕಾಂಗ್ರೆಸ್ ಡಿ.ತ್ರಿವೇಣಿ, ಬಿಜೆಪಿಯ ನಾಗರತ್ನಮ್ಮ ನಡುವೆ ಚುನಾವಣೆ ನಡೆಯಿತು.39 ಪಾಲಿಕೆ ಸದಸ್ಯರು, ಇಬ್ಬರು ಸಂಸದರು, ಮೂವರು ಶಾಸಕರು ಸೇರಿ ಒಟ್ಟು 44 ಮತಗಳ ಪೈಕಿ ಡಿ.ತ್ರಿವೇಣಿ ಅವರ ಪರವಾಗಿ 28 , ವಿರೋಧವಾಗಿ 16 ಮತಗಳು ಬಿದ್ದಿದ್ದವು. ಅದೇ ರೀತಿ ಬಿಜೆಪಿಯ ನಾಗರತ್ನಮ್ಮರ ಪರವಾಗಿ 16, ವಿರುದ್ಧವಾಗಿ 28 ಮತಗಳು ಬಿದ್ದಿದ್ದ ಹಿನ್ನೆಲೆಯಲ್ಲಿ ಅತಿಹೆಚ್ಚು ಮತಗಳನ್ನು ಗಳಿಸಿದ್ದ ನಾಲ್ಕನೇ ವಾರ್ಡ್ ನ ತ್ರಿವೇಣಿ ಡಿ.ಸೂರಿ ಅವರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ ಎಂದು ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪಾಯ್ ಘೋಷಿಸಿದರು.

ಇನ್ನು ಉಪಮೇಯರ್ ಸ್ಥಾನಕ್ಕೆ 33 ನೇ ವಾರ್ಡ್ ಸದಸ್ಯೆ ಬಿ.ಜಾನಕಮ್ಮ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರು ಉಪಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಮೇಯರ್ ತ್ರಿವೇಣಿ ಡಿ.ಸೂರಿ, ಮೇಯರ್ ಆಗಿ ಆಯ್ಕೆಯಾಗಿದ್ದಕ್ಕೆ ತುಂಬ ಖುಷಿಯಾಗಿದೆ. 21 ನೇ ವಯಸ್ಸಿಗೆ ಪಾಲಿಕೆ ಸದಸ್ಯೆಯಾಗಿದ್ದ ನಾನು ಇದೀಗ 23 ನೇ ವಯಸ್ಸಿಗೆ ಪಾಲಿಕೆ ಮೇಯರ್ ಆಗಿ ಆಯ್ಕೆಯಾಗಿದ್ದೇನೆ. ನನ್ನೆಲ್ಲ ಕನಸುಗಳು ನನ್ನ ತಂದೆ ಈಡೇರಿಸಿದ್ದಾರೆ. ಆರೋಗ್ಯ ನಿರೀಕ್ಷಕರ ಕೋರ್ಸ್ ವ್ಯಾಸಂಗ ಮಾಡಿದ್ದೇನೆ. ಪಾಲಿಕೆಯ ಎಲ್ಲ ಸದಸ್ಯರನ್ನು ಗಣನೆಗೆ ತೆಗೆದುಕೊಂಡು ಅವರೊಂದಿಗೆ ಸೇರಿ ಕೆಲಸ ಮಾಡುವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-scsad

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ

police crime

Shivamogga ಬಂಧಿಸಲು ತೆರಳಿದ್ದ ವೇಳೆ ದಾಳಿ; ಆರೋಪಿಗೆ ಪೊಲೀಸರ ಗುಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-sdasdasd

ಗೋಹತ್ಯೆ ನಿಷೇಧ ಕಾಯ್ದೆ ಚರ್ಚೆಗೆ ಬಂದಿಲ್ಲ: ಸಚಿವ ತಂಗಡಗಿ

ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ

Gruha Jyoti ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ

1wqrrwrwrwerwr

Umesh Karajola ವಿನೂತನ ಪ್ರತಿಭಟನೆ: ಕೈಗೆ ಬೇಡಿ-ಕೊರಳಲ್ಲಿ ಸಾಲದ ಫಲಕ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ