ಅರುಣಾಚಲದಲ್ಲಿ ಸೇನಾ ದಾಳಿಯ ಬೆದರಿಕೆ : ಭಾರತೀಯ ಸೇನೆ ಹೈ ಅಲರ್ಟ್‌


Team Udayavani, Nov 8, 2021, 9:00 PM IST

ಅರುಣಾಚಲದಲ್ಲಿ ಸೇನಾ ದಾಳಿಯ ಬೆದರಿಕೆ : ಭಾರತೀಯ ಸೇನೆ ಹೈ ಅಲರ್ಟ್‌

ಬೀಜಿಂಗ್‌: ತನ್ನ ದೇಶ ಎದುರಿಸುತ್ತಿರುವ “ಆಹಾರ ಬಿಕ್ಕಟ್ಟನ್ನು’ ಪರಿಹರಿಸುವ ಬದಲು ಚೀನಾ, ಭಾರತದ ವಿರುದ್ಧ ಟ್ವಿಟರ್‌ ವಾರ್‌ ಆರಂಭಿಸಿದೆ. ಅರುಣಾಚಲ ಪ್ರದೇಶದಲ್ಲಿ ಸೇನಾ ದಾಳಿ ನಡೆಸುವುದಾಗಿ ಬೆದರಿಕೆ ಹಾಕುತ್ತಾ ಸಾಮಾಜಿಕ ಮಾಧ್ಯಮಗಳ ಮೂಲಕ ಆಕ್ರಮಣಕಾರಿ ಅಭಿಯಾನ ಶುರುವಿಟ್ಟುಕೊಂಡಿದೆ.

ಟ್ವಿಟರ್‌ನಲ್ಲಿ ದೃಢೀಕೃತ ಹಾಗೂ ದೃಢೀಕೃತವಲ್ಲದ ಖಾತೆಗಳ ಮೂಲಕ ಭಾರತದ ಗಡಿಪ್ರದೇಶಗಳಲ್ಲಿನ ಪೀಪಲ್ಸ್‌ ಲಿಬರೇಷನ್‌ ಆರ್ಮಿಯ ಫೋಟೋಗಳು ಹಾಗೂ ವಿಡಿಯೋಗಳನ್ನು ಅಪ್‌ಲೋಡ್‌ ಮಾಡಲಾಗುತ್ತಿದೆ. ಚೀನಾದಲ್ಲಿ ಟ್ವಿಟರ್‌ಗೆ ನಿಷೇಧವಿದ್ದರೂ, ಟ್ವಿಟರ್‌ನಲ್ಲಿ ಇಂಥ ಫೋಟೋಗಳ ಮಹಾಪೂರವೇ ಹರಿದುಬರುತ್ತಿವೆ.

ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾವು 100 ಮನೆಗಳಿರುವ ಹಳ್ಳಿಯನ್ನು ನಿರ್ಮಿಸಿದೆ ಎಂದು ಅಮೆರಿಕದ ಪೆಂಟಗನ್‌ ವರದಿ ಬಹಿರಂಗಗೊಂಡ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಈ ಹಿನ್ನೆಲೆಯಲ್ಲಿ ಲಡಾಖ್‌ ಮತ್ತು ಅರುಣಾಚಲದಲ್ಲಿ ಭಾರತೀಯ ಸೇನೆಯು ಹೈಅಲರ್ಟ್‌ ಘೋಷಿಸಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದೆ. ಜತೆಗೆ, ಗಡಿ ಪ್ರದೇಶದಲ್ಲಿ ಚೀನಾ ಯಾವ ತಂತ್ರವನ್ನು ಹೂಡಿದೆ ಮತ್ತು ಟ್ವಿಟರ್‌ ವಾರ್‌ ನಡೆಸುತ್ತಿರುವ ಹಿಂದಿನ ಉದ್ದೇಶವೇನು ಎಂಬ ಬಗ್ಗೆ ಅರಿಯಲು ಗುಪ್ತಚರ ಮಾಹಿತಿಯ ಮೊರೆ ಹೋಗಲಾಗಿದೆ.

ಯಾವ ರೀತಿಯ ಪೋಸ್ಟ್‌ಗಳು?
ಕಳೆದ ವರ್ಷ ಗಾಲ್ವಾನ್‌ನಲ್ಲಿ ನಡೆದ ಭಾರತ-ಚೀನಾ ಸಂಘರ್ಷದ ಚಿತ್ರಗಳು, ಅರುಣಾಲಚದ ತವಾಂಗ್‌ನ ಗಡಿಯತ್ತ ಚೀನಾ ಸೇನೆಯ ಸಂಚಾರದ ಚಿತ್ರಗಳನ್ನು ಟ್ವಿಟರ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದೆ. ಜತೆಗೆ, ಪೂರ್ವ ಲಡಾಖ್‌ನ ದೌಲತಾಬಾಗ್‌ ಓಲ್ಡಿಯಲ್ಲಿ ದೀರ್ಘ‌ ವ್ಯಾಪ್ತಿಯ ಪಿಸಿಎಲ್‌ 191 ರಾಕೆಟ್‌ಗಳನ್ನು ನಿಯೋಜನೆ ಮಾಡಿರುವ ಫೋಟೋಗಳನ್ನೂ ಹಾಕಲಾಗಿದೆ.

ಇದನ್ನೂ ಓದಿ :  ಶಿರಸಿ: ಬ್ಯಾಗದ್ದೆಯಲ್ಲಿ ಅಡಿಕೆ ಕದ್ದ ಕಳ್ಳರು ಪೊಲೀಸ್ ಬಲೆಗೆ

ಅಮೆರಿಕ ಯುದ್ಧನೌಕೆಯ ಮಾದರಿ ನಿರ್ಮಾಣ
ಅಮೆರಿಕದ ನೌಕಾಪಡೆಯ ವಿಮಾನವಾಹಕ ನೌಕೆಗಳು ಮತ್ತು ಇತರೆ ಯುದ್ಧನೌಕೆಗಳ ಮಾದರಿಗಳನ್ನು ಚೀನಾ ಸೇನೆ ಅಭಿವೃದ್ಧಿಪಡಿಸಿದೆ. ಕ್ಸಿನ್‌ಜಿಯಾಂಗ್‌ ಮರುಭೂಮಿಯಲ್ಲಿ ಇವುಗಳನ್ನು ನಿರ್ಮಿಸಲಾಗಿದ್ದು, ಅಮೆರಿಕದ ಯುದ್ಧನೌಕೆಗಳಿಗೆ ಪ್ರತಿರೋಧವಾಗಿ ಶಕ್ತಿಶಾಲಿ ಯುದ್ಧನೌಕೆಗಳ ನಿರ್ಮಾಣ ಹಾಗೂ ವಿಮಾನವಾಹಕ ನಿಗ್ರಹ ವ್ಯವಸ್ಥೆಯನ್ನು ಸಿದ್ಧಪಡಿಸುವುದೇ ಇದರ ಉದ್ದೇಶವಾಗಿದೆ. ತೈವಾನ್‌ ಮತ್ತು ದಕ್ಷಿಣ ಚೀನಾ ಸಮುದ್ರಕ್ಕೆ ಸಂಬಂಧಿಸಿ ಅಮೆರಿಕದೊಂದಿಗೆ ಮನಸ್ತಾಪ ಹೆಚ್ಚಿರುವಂತೆಯೇ ಈ ಬೆಳವಣಿಗೆ ನಡೆದಿದೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.