Tumkur; ಕಲ್ಪತರು ನಾಡಿನಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬಿಜೆಪಿ, ಜೆಡಿಎಸ್‌ ಸೆಡ್ಡು


Team Udayavani, Mar 25, 2024, 7:45 AM IST

Tumkur; ಕಲ್ಪತರು ನಾಡಿನಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬಿಜೆಪಿ, ಜೆಡಿಎಸ್‌ ಸೆಡ್ಡು

ಕಾಂಗ್ರೆಸ್‌ನ ಬಲಿಷ್ಠ ಜಾಗದಲ್ಲಿ ಕಮಲ ಪ್ರಾಬಲ್ಯ, ಕಳೆದ 8 ಚುನಾವಣೆಯಲ್ಲಿ 5 ಬಾರಿ ಬಿಜೆಪಿಗೇ ಗೆಲುವು

ತುಮಕೂರು: ಕಲ್ಪತರು ನಾಡು, ಶೈಕ್ಷಣಿಕ-ಧಾರ್ಮಿಕ ಜಿಲ್ಲೆ ಎಂದೇ ಹೆಸರು ಪಡೆದು, ರಾಜಧಾನಿ ಬೆಂಗಳೂರಿಗೆ ಉಪನಗರವಾಗಿ ಬೆಳವಣಿಗೆಯಾಗುತ್ತಾ ರಾಜ್ಯದಲ್ಲಿ 2ನೇ ಅತೀ ದೊಡ್ಡ ಜಿಲ್ಲೆ ಎಂದು ಹೆಸರು ಪಡೆದಿರುವ ತುಮಕೂರು ಲೋಕಸಭಾ ಕ್ಷೇತ್ರ ರಾಜಕೀಯವಾಗಿ ತನ್ನದೇ ಆದ ಇತಿಹಾಸ ಹೊಂದಿದೆ.

ಒಂದು ಕಾಲದಲ್ಲಿ ಕಾಂಗ್ರೆಸ್‌ ಪಕ್ಷದ ಭದ್ರ ಕೋಟೆಯಾಗಿದ್ದ, ತುಮಕೂರು ಕ್ಷೇತ್ರ 1991ರಲ್ಲಿ ಎಸ್‌. ಮಲ್ಲಿಕಾರ್ಜುನಯ್ಯ ಬಿಜೆಪಿಯಿಂದ ಗೆಲ್ಲುವ ಮೂಲಕ ಇಲ್ಲಿ ಬಿಜೆಪಿಗೆ ಬುನಾದಿ ಹಾಕಿದರು. ಅಲ್ಲಿಂದ ಈ ಕ್ಷೇತ್ರದಲ್ಲಿ ಬಿಜೆಪಿಯ ಕಮಲ ಅರಳಲಾರಂಭಿಸಿತ್ತು. ಅನಂತರ ಆಗಾಗ್ಗೆ ಕಾಂಗ್ರೆಸ್‌ ಗೆಲುವು ಸಾಧಿಸಿದರಾದರೂ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಬೇರು ಬಿಟ್ಟಿದೆ. ಕ್ಷೇತ್ರದಲ್ಲಿ ಬಿಜೆಪಿಯ ಒಬ್ಬರು ಶಾಸಕರು ಇದ್ದಾಗಲೂ ಇಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಲಿಂಗಾಯತರು, ಒಕ್ಕಲಿಗರೇ ಗೆಲ್ಲುತ್ತಿದ್ದ ಈ ಕ್ಷೇತ್ರದಲ್ಲಿ 1996ರಲ್ಲಿ ಜೆಡಿಎಸ್‌ನಿಂದ ಹಿಂದುಳಿದ ವರ್ಗದ ಸಿ.ಎನ್‌. ಭಾಸ್ಕರಪ್ಪ ಗೆಲುವು ಸಾಧಿಸಿದ್ದರು. ಈ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಎಸ್‌. ಮಲ್ಲಿಕಾರ್ಜುನಯ್ಯ ಅವರು ಲೋಕಸಭೆಯ ಉಪಸಭಾಪತಿಗಳಾಗಿ ಕಾರ್ಯನಿರ್ವಹಿಸಿದ್ದರು.

ದೇವೇಗೌಡರೇ ಸೋತಿದ್ದ ಕ್ಷೇತ್ರವಿದು
ಐದು ಸಲ ಸಂಸದರಾಗಿದ್ದ ಜಿ.ಎಸ್‌. ಬಸವರಾಜು, ದಿಲ್ಲಿಯಲ್ಲಿ ಪ್ರಭಾವಿ ಎನ್ನಿಸಿದ್ದ ಕೆ. ಲಕ್ಕಪ್ಪ ಸೇರಿ ಘಟಾನುಘಟಿ ಮುಖಂಡರನ್ನು ನೀಡಿದ ಹೆಗ್ಗಳಿಕೆ ಜಿಲ್ಲೆಯದ್ದು. ಎಚ್‌.ಡಿ. ದೇವೇಗೌಡರನ್ನೇ ಸೋಲಿಸಿದ್ದ ಹಾಲಿ ಸಂಸದ ಜಿ.ಎಸ್‌. ಬಸವರಾಜು ವಯಸ್ಸಿನ ಕಾರಣದಿಂದ ರಾಜಕೀಯ ನಿವೃತ್ತಿ ಘೋಷಿಸಿದ್ದು ಅವರ ಜಾಗಕ್ಕೆ ಲಿಂಗಾಯತ ಸಮುದಾಯದ ಮಾಜಿ ಸಚಿವ ವಿ. ಸೋಮಣ್ಣರಿಗೆ ಬಿಜೆಪಿ ಟಿಕೆಟ್‌ ನೀಡಿದೆ.

ರಾಜಕೀಯ ಪ್ರಾಬಲ್ಯ
ತುಮಕೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ 8 ತಾಲೂಕುಗಳು ಬರುತ್ತದೆ. ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಪ್ರಾಬಲ್ಯ ಹೊಂದಿದ್ದವು. 4 ಕ್ಷೇತ್ರದಲ್ಲಿ ಬಿಜೆಪಿ, 3 ಕ್ಷೇತ್ರದಲ್ಲಿ ಜೆಡಿಎಸ್‌, 1 ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್‌ ಗೆಲುವು ಸಾಧಿಸಿದ್ದವು. ಆದರೆ 2023ರ ಚುನಾವಣೆಯಲ್ಲಿ ಕಾಂಗ್ರೆಸ್‌ 4, ಬಿಜೆಪಿ 2, ಜೆಡಿಎಸ್‌ 2 ಕ್ಷೇತ್ರದಲ್ಲಿ ಶಾಸಕರು ಇದ್ದಾರೆ. ಈಗ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರು ಹೆಚ್ಚಿದ್ದಾರೆ.
ಬದಲಾಗಿದೆ ರಾಜಕೀಯ ಟ್ರೆಂಡ್‌
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯ ಟ್ರೆಂಡ್‌ ಬದಲಾಗಿದೆ. 1952ರಿಂದ 18 ಸಾರ್ವತ್ರಿಕ ಚುನಾವಣೆ ನಡೆದಿವೆ. ಒಮ್ಮೆ 1962ರಲ್ಲಿ ಉಪಚುನಾವಣೆ ನಡೆದಿದೆ. 11 ಬಾರಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿ ತುಮಕೂರು ಕ್ಷೇತ್ರ ಕಾಂಗ್ರೆಸ್‌ ಭದ್ರ ಕೋಟೆ ಆಗಿತ್ತು. ಆದರೆ 1991ರಿಂದ ಬಿಜೆಪಿ ಭದ್ರ ಕೋಟೆ ಆಗಿದೆ. ಅಲ್ಲಿಂದ 5 ಬಾರಿ ಬಿಜೆಪಿ ಅಭ್ಯರ್ಥಿ ಗೆದ್ದಿದ್ದಾರೆ. 3 ಬಾರಿ ಎಸ್‌. ಮಲ್ಲಿಕಾರ್ಜುನಯ್ಯ, ಎರಡು ಬಾರಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದಿದ್ದ ಜಿ.ಎಸ್‌. ಬಸವರಾಜು ಗೆಲುವು ಸಾಧಿಸಿದ್ದಾರೆ. ಒಂದು ಬಾರಿ ಜೆಡಿಎಸ್‌ ಗೆಲುವು ಸಾಧಿಸಿದೆ. ಇತ್ತೀಚಿನ ದಿನಗಳಲ್ಲಿ ರಾಜಕೀಯದಲ್ಲಿ ಬದಲಾವಣೆಯ ಗಾಳಿ ಬೀಸಿದೆ.

ಲಿಂಗಾಯತರು , ಒಕ್ಕಲಿಗರೇ ಅಧಿಕ
ತುಮಕೂರು ಕ್ಷೇತ್ರದಲ್ಲಿ ಬರುವ 8 ವಿಧಾನಸಭಾ ಕ್ಷೇತ್ರದಲ್ಲಿ ಲಿಂಗಾಯತರು ಮತ್ತು ಒಕ್ಕಲಿಗರೇ ಪ್ರಬಲರು. ತಿಪಟೂರು, ಚಿಕ್ಕನಾಯಕನಹಳ್ಳಿ, ಗುಬ್ಬಿ, ತುಮಕೂರು ಲಿಂಗಾಯತ ಸಮುದಾಯ ಪ್ರಾಬಲ್ಯ. ತುರುವೇಕೆರೆ, ತುಮಕೂರು ಗ್ರಾಮಾಂತರ, ಕೊರಟಗೆರೆ, ಮಧುಗಿರಿಯಲ್ಲಿ ಒಕ್ಕಲಿಗರೇ ಪ್ರಾಬಲ್ಯ ಹೊಂದಿದ್ದಾರೆ. ಒಟ್ಟಾರೆ ಅಹಿಂದ ಮತದಾರರು ಇಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಾರೆ.

ಮತದಾರರ ಸಂಖ್ಯೆ
ಮತದಾರರು 2024 2019
ಪುರುಷರು 8,11,120 8,03,006
ಮಹಿಳೆಯರು 8,32,206 8,04,874
ಇತರ 91 120
ಒಟ್ಟು 16,43,417 16,08,000

ಹಾಲಿ ಸಂಸದ:
ಜಿ.ಎಸ್‌. ಬಸವರಾಜು – ಬಿಜೆಪಿ
ಪಡೆದ ಮತಗಳು: 5,96,127
ಗೆಲುವಿನ ಅಂತರ: 13,339

ಚಿ.ನಿ. ಪುರುಷೋತ್ತಮ್‌

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.