ಟರ್ಕಿ-ಸಿರಿಯಾದಲ್ಲಿ ಭಾರತದ ಆಪರೇಶನ್ ದೋಸ್ತ್; ಮಹಿಳಾ ಅಧಿಕಾರಿಗೆ ಟರ್ಕಿಶ್ ಮಹಿಳೆಯ ಕೃತಜ್ಞತೆ
ಟರ್ಕಿ-ಸಿರಿಯಾದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 21,000ಕ್ಕೂ ಅಧಿಕ ಜನರ ಸಾವು
Team Udayavani, Feb 10, 2023, 11:06 AM IST
ಜಕಾರ್ತಾ: ಪ್ರಬಲ ಭೂಕಂಪದಿಂದ ನಲುಗಿ ಹೋಗಿರುವ ಟರ್ಕಿ-ಸಿರಿಯಾದಲ್ಲಿ ಭಾರತದ ರಕ್ಷಣಾ ತಂಡ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಏತನ್ಮಧ್ಯೆ ಟರ್ಕಿಯ ಅಂಕಾರದಲ್ಲಿ ಭಾರತದ ರಕ್ಷಣಾ ತಂಡದ ಮಹಿಳಾ ಅಧಿಕಾರಿಯನ್ನು ಟರ್ಕಿಶ್ ಮಹಿಳೆ ಆತ್ಮೀಯವಾಗಿ ಆಲಿಂಗಿಸಿಕೊಂಡು ಕೃತಜ್ಞತೆ ಅರ್ಪಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:ದೇಶಸೇವೆ ಮಾಡಿದ ಅಧಿಕಾರಿಗೆ ರಕ್ಷಣೆ ಕೊಡದಷ್ಟು ಅಮಾನವೀಯವೇ? ಸರ್ಕಾರ ವಿರುದ್ಧ JDS ಆಕ್ರೋಶ
ಟರ್ಕಿ ಸಿರಿಯಾದಲ್ಲಿನ ಭಾರತದ ಸೇನೆಯ ರಕ್ಷಣಾ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದೊಂದು ಯುದ್ಧವಲ್ಲ, ಆದರೆ ಅವರು ತಮ್ಮದೇ ದೇಶದ ಜನರನ್ನು ರಕ್ಷಿಸಬೇಕಾಗಿದೆ. ಇದಕ್ಕಾಗಿ ಆಪರೇಶನ್ ದೋಸ್ತ್ ತಂಡಕ್ಕೆ ಅಭಿನಂದನೆಗಳು ಎಂದು ಟ್ವೀಟರ್ ಬಳಕೆದಾರರೊಬ್ಬರು ಪ್ರತಿಕ್ರಿಯೆ ನೀಡಿದ್ದಾರೆ.
“ಮಾನವತೆಯೇ ವಿಶ್ವದ ಅತೀ ದೊಡ್ಡ ಧರ್ಮ ಮತ್ತು ಸತ್ಯ, ಭಾರತೀಯ ಸಂಸ್ಕೃತಿಯ ಆತ್ಮದ ತಿರುಳಾಗಿದೆ ಎಂದು ಮತ್ತೊಬ್ಬ ಬಳಕೆದಾರರು ಕಮೆಂಟ್ ಮಾಡಿದ್ದಾರೆ. ಟರ್ಕಿ-ಸಿರಿಯಾಕ್ಕೆ ಭಾರತದ ಸೇನೆ ಈಗಾಗಲೇ ಆಪರೇಶನ್ ದೋಸ್ತ್ ಭಾಗದ ಅಂಗವಾಗಿ ಔಷಧ, ಮೊಬೈಲ್ ಹಾಸ್ಪಿಟಲ್, ವೈದ್ಯರು ಮತ್ತು ಶೋಧ ಹಾಗೂ ರಕ್ಷಣಾ ತಂಡವನ್ನು ಕಳುಹಿಸಿದೆ.
ನಿದ್ದೆಯ ಮಂಪರಿನಲ್ಲಿದ್ದ ವೇಳೆ ಸೋಮವಾರ ಟರ್ಕಿ-ಸಿರಿಯಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಇದರ ಪರಿಣಾಮ ಸಾವಿರಾರು ಕಟ್ಟಡಗಳು ನೆಲಸಮಗೊಂಡಿವೆ. ಸಾವಿರಾರು ಮಂದಿ ಅವಶೇಷಗಳಡಿ ಸಿಲುಕಿಕೊಂಡು ರಕ್ಷಣೆಗಾಗಿ ಅಂಗಲಾಚುತ್ತಿರುವುದು ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.
ಟರ್ಕಿ-ಸಿರಿಯಾದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 21,000ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಅಧಿಕಾರಿಗಳ ವರದಿ ಪ್ರಕಾರ, ಸಿರಿಯಾದಲ್ಲಿ 3,377 ಮಂದಿ ಹಾಗೂ ಟರ್ಕಿಯಲ್ಲಿ 17,674 ಜನರು ಸಾವನ್ನಪ್ಪಿದ್ದಾರೆ. ಸಾರ್ವಜನಿಕ ಆಸ್ಪತ್ರೆಗಳು, ಏಳು ನಗರಗಳು ಸೇರಿದಂತೆ ಸುಮಾರು 4,000ಕ್ಕೂ ಅಧಿಕ ಕಟ್ಟಡಗಳು ನೆಲಸಮವಾಗಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ