ದೇಶದ ಮಾಹಿತಿ ಕದಿಯಲು ಐಫೋನ್‌ ಆಮಿಷ

ದಿಲ್ಲಿಯ ಪಾಕ್‌ ಹೈಕಮಿಷನ್‌ನ ಇಬ್ಬರು ಅಧಿಕಾರಿಗಳ ಕರಾಳ ಚರಿತ್ರೆ

Team Udayavani, Jun 2, 2020, 5:40 AM IST

ದೇಶದ ಮಾಹಿತಿ ಕದಿಯಲು ಐಫೋನ್‌ ಆಮಿಷ

ಹೊಸದಿಲ್ಲಿ: ಭಾರತದ ಮಾಹಿತಿ ಒದಗಿಸಿದರೆ ಉಚಿತ ಐಫೋನ್‌,ಕೈತುಂಬಾ ಹಣ…
-ಇದು ಹೊಸದಿಲ್ಲಿಯಲ್ಲಿದ್ದ ಪಾಕ್‌ ಹೈಕಮಿಷನ್‌ನ ಇಬ್ಬರು ಅಧಿಕಾರಿಗಳ ಗೂಢಚಾರಿಕೆಯ ಕುತಂತ್ರ. ಈ ಆರೋಪದ ಹಿನ್ನೆಲೆಯಲ್ಲಿ ಅಬೀದ್‌ ಹುಸೇನ್‌ (42) ಮತ್ತು ಮೊಹಮ್ಮದ್‌ ತಾಹಿರ್‌ ಖಾನ್‌ (44) ಎಂಬ ಈ ಇಬ್ಬರನ್ನು ದೇಶದಿಂದ ಹೊರಹಾಕಲಾಗಿದೆ. ಇವರಿಬ್ಬರು ಪಾಕ್‌ ಗುಪ್ತಚರ ಸಂಸ್ಥೆ ಐಎಸ್‌ಐ ಬೆಂಬಲದಡಿ ಕೆಲಸ ಮಾಡುತ್ತಿದ್ದರು.

ಈ ಇಬ್ಬರೂ ಸೇನೆಗೆ ಸಂಬಂಧಿಸಿದ ರಹಸ್ಯ ದಾಖಲೆಗಳನ್ನು ಕಲೆಹಾಕುತ್ತಿರುವ ಬಗ್ಗೆ ಸೇನೆಯ ಗುಪ್ತಚರ ಇಲಾಖೆ ವಾರದ ಹಿಂದೆಯೇ ಮಾಹಿತಿ ಸಂಗ್ರಹಿಸಿತ್ತು. ತಮ್ಮ ಕಾರ್ಯಕ್ಕೆ ಸೇನೆಯ ಸಿಬಂದಿಯನ್ನೇ ಇವರು ಬಳಸಿಕೊಳ್ಳುತ್ತಿದ್ದರು. ಅವರನ್ನು ಸಂಪರ್ಕಿಸಿ, ಭಾರತೀಯರೆಂದು ಪರಿಚಯಿಸಿಕೊಂಡು ಬಳಿಕ ಅವರಿಂದ ಸೇನೆಗೆ ಸಂಬಂಧಿಸಿದ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದರು. ಅವರು ಯಾರನ್ನು ಸ್ನೇಹಿತರನ್ನಾಗಿಸಿಕೊಳ್ಳಬೇಕು ಎಂಬುದನ್ನು  ಐಎಸ್‌ಐ ನಿರ್ಧರಿಸುತ್ತಿತ್ತು!

ತೋರಿಸಿದ್ದು ನಕಲಿ ಆಧಾರ್‌!
ವಶಕ್ಕೆ ಒಳಗಾದ ಅನಂತರವೂ ಈ ಇಬ್ಬರೂ ತಾವು ದಿಲ್ಲಿ ನಿವಾಸಿಗಳು ಎಂದಿದ್ದಾರೆ. ಪೂರಕ ದಾಖಲೆಯಾಗಿ ಆಧಾರ್‌ ಕಾರ್ಡ್‌ ನೀàಡಿದ್ದ! ಅದರಲ್ಲಿ ಆತನ ಹೆಸರು ತಪ್ಪಾಗಿ ಮುದ್ರಿತವಾಗಿದ್ದು, ಅದೂ ನಕಲಿ ಎಂಬುದು ಪತ್ತೆಯಾಗಿದೆ.

ಸಾಕ್ಷ್ಯ ಸಹಿತ ಹಿಡಿದರು!
ಇವರಿಬ್ಬರ ಮೇಲೆ ಕೆಲವು ದಿನಗಳಿಂದ ನಿಗಾ ಇಡಲಾಗಿತ್ತಲ್ಲದೆ, ಸಾಕ್ಷ್ಯಸಹಿತ ಹಿಡಿದುಹಾಕಲು ವಿಶೇಷ ತಂಡ ರಚಿಸಲಾಗಿತ್ತು. ಇತ್ತೀಚೆಗೆ ಸೇನೆಯ ರಹಸ್ಯ ದಾಖಲೆಗಳನ್ನು ತರುವುದಾಗಿ ಹೇಳಿದ್ದ ಭಾರತೀಯನೊಬ್ಬನನ್ನು ಭೇಟಿ ಮಾಡಲು ಇವರು ತೆರಳಿದ್ದರು. ಆ ವ್ಯಕ್ತಿಯಿಂದ ದಾಖಲೆ ಪಡೆದು ಹಣ ಮತ್ತು ಐಫೋನ್‌ ಉಡುಗೊರೆಯಾಗಿ ನೀಡಿದರು. ತತ್‌ಕ್ಷಣವೇ ಮರೆಯಲ್ಲಿ ಅವಿತಿದ್ದ ಸೇನಾ ಗುಪ್ತಚರ ಇಲಾಖೆ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿ ಮೂವರನ್ನು ಮತ್ತು ಆ ಅಧಿಕಾರಿಗಳನ್ನು ಕರೆದೊಯ್ದಿದ್ದ ಜಾವೇದ್‌ ಹುಸೇನ್‌ (36) ಎಂಬ ಕಾರು ಚಾಲಕನನ್ನು ವಶಕ್ಕೆ ಪಡೆದರು. ಜಾವೇದ್‌ ಹುಸೇನ್‌ ಪಾಕಿಸ್ಥಾನದ ಭಕ್ಕಾರ್‌ ಎಂಬ ಊರಿನವನಾಗಿದ್ದು , ಇಂಥ ಕೆಲಸಗಳಿದ್ದಾಗ ಈ ಅಧಿಕಾರಿಗಳನ್ನು ನಿಗದಿತ ಸ್ಥಳಕ್ಕೆ ಕರೆದೊಯ್ದು ಮತ್ತೆ ಅವರನ್ನು ಹೈಕಮಿಷನ್‌ ಕಚೇರಿಗೆ ತಲುಪಿಸುತ್ತಿದ್ದ.

ಟಾಪ್ ನ್ಯೂಸ್

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.