ಆರೋಪಿಗಳ ಕಾರು ಮಾರಾಟ ಪ್ರಕರಣ : ಇಬ್ಬರು ಪೊಲೀಸ್‌ ಅಧಿಕಾರಿಗಳ ಅಮಾನತು


Team Udayavani, Feb 28, 2021, 6:45 AM IST

ಆರೋಪಿಗಳ ಕಾರು ಮಾರಾಟ ಪ್ರಕರಣ : ಇಬ್ಬರು ಪೊಲೀಸ್‌ ಅಧಿಕಾರಿಗಳ ಅಮಾನತು

ಮಂಗಳೂರು: ವಂಚನೆ ಪ್ರಕರಣ ವೊಂದರ ಆರೋಪಿಗಳ ಐಷಾರಾಮಿ ಕಾರನ್ನು ಮಂಗಳೂರು ಸಿಸಿಬಿ ಪೊಲೀಸರು ಮಾರಾಟ ಮಾಡಿದ್ದಾರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್‌ಐ ಕಬ್ಬಳ್‌ರಾಜ್‌ ಮತ್ತು ಎಕನಾಮಿಕ್‌ ಆ್ಯಂಡ್‌ ನಾರ್ಕೊಟಿಕ್‌ ಕ್ರೈಂ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ರಾಮಕೃಷ್ಣ ಅವರನ್ನು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಶನಿವಾರ ಅಮಾನತುಗೊಳಿಸಿದ್ದಾರೆ.

ಪ್ರಕರಣದ ತನಿಖೆಯನ್ನು ಸಿಐಡಿ ಆರಂಭಿಸಿದೆ. ಅಮಾನತಾದ ಪೊಲೀಸ್‌ ಅಧಿಕಾರಿಗಳ ಜತೆಗೆ ಇತರ ಇಬ್ಬರ ಮೇಲೆ ಕೂಡ ಆರೋಪಗಳಿದ್ದು ವಿಚಾರಣೆ ತೀವ್ರಗೊಂಡಿದೆ ಎಂದು ತಿಳಿದುಬಂದಿದೆ. ರಾಮಕೃಷ್ಣ ಮಂಗಳೂರಿನಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರಕರಣ ನಡೆಯುವ ವೇಳೆ ಕಬ್ಬಳ್‌ರಾಜ್‌ ಮಂಗಳೂರು ಸಿಸಿಬಿ ಎಸ್‌ಐ ಆಗಿದ್ದು ಅನಂತರ ಚಿಕ್ಕಮಗಳೂರಿನಲ್ಲಿ ಡಿಸಿಆರ್‌ಬಿ ಪಿಎಸ್‌ಐ ಆಗಿದ್ದರು. ಕಾರು ಮಾರಾಟ ಪ್ರಕರಣಕ್ಕೆ ಮೂಲ ಪ್ರಕರಣವಾದ ಎಲಿಯಾ ಕನ್‌ಸ್ಟ್ರಕ್ಷನ್‌ ಆ್ಯಂಡ್‌ ಬಿಲ್ಡರ್‌ ಪ್ರೈ.ಲಿ. ಕಾರ್ಪೊರೆಟ್‌ ಸಂಸ್ಥೆಯ ವಂಚನೆ ಪ್ರಕರಣವನ್ನು ಕೂಡ ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ.

ವಂಚನೆಯ ನಡುವೆ ವಂಚನೆ?
ಎಲಿಯಾ ಕನ್‌ಸ್ಟ್ರಕ್ಷನ್ಸ್‌ ಕಂಪೆನಿ ದ.ಕ. ಜಿಲ್ಲೆಯ ಕಡಬದಲ್ಲಿ ಹಣ ದ್ವಿಗುಣಗೊಳಿಸುವ ವ್ಯವಹಾರ ನಡೆಸಿ ಹಲವರಿಂದ ಹಣ ಸಂಗ್ರಹಿಸಿ ಸುಮಾರು 30 ಕೋ.ರೂ. ವಂಚಿಸಿತ್ತು. ಅನಂತರ ಈ ಸಂಸ್ಥೆ ಮಂಗಳೂರು ನಗರದಲ್ಲಿ ಕಚೇರಿ ತೆರೆದಿತ್ತು. ಈ ವೇಳೆ ಶಕ್ತಿನಗರದ ಮಹಿಳೆ ಅದರಲ್ಲಿ ಹಣ ಹೂಡಿದ್ದರು. ಸಂಸ್ಥೆ ಆಕೆಗೂ ವಂಚಿಸಿದ್ದು, ಎಕನಾಮಿಕ್‌ ಆ್ಯಂಡ್‌ ನಾರ್ಕೊಟಿಕ್‌ ಅಪರಾಧ ವಿಭಾಗಕ್ಕೆ ದೂರು ನೀಡಿದ್ದರು. ಎಲಿಯಾ ಸಂಸ್ಥೆಯ ಕೇರಳ ಮೂಲದ ಮ್ಯಾಥ್ಯೂ ಮತ್ತು ಟಿ. ರಾಜ®ರನ್ನು ಬಂಧಿಸಲಾಗಿತ್ತು. ಈ ವೇಳೆ ಅವರಿಗೆ ಸೇರಿದ್ದ ಮೂರು ಕಾರುಗಳ ಪೈಕಿ ಎರಡು ಕಾರುಗಳನ್ನು ಸಿಸಿಬಿ ಪೊಲೀಸರು ಕೆಲವು ದಿನಗಳ ಕಾಲ ತಮ್ಮ ಉಪಯೋಗಕ್ಕೆ ಬಳಸಿಕೊಂಡಿದ್ದರು ಹಾಗೂ ಒಂದು ಕಾರನ್ನು ಮಾರಾಟ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಡಿಸಿಪಿಯವರು ಪ್ರಾಥಮಿಕ ತನಿಖೆ ನಡೆಸಿದ ಅನಂತರ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು.

ವೀಡಿಯೋ ಕಳುಹಿಸಿದ ಮಹಿಳೆ
ಹಣ ಕಳೆದುಕೊಂಡಿರುವ ಶಕ್ತಿನಗರದ ಮಹಿಳೆಯೋರ್ವರು ಎರಡು ದಿನಗಳ ಹಿಂದೆ ಮಾಧ್ಯಮಗಳಿಗೆ ತನ್ನ ಹೇಳಿಕೆಯನ್ನೊಳಗೊಂಡ ವೀಡಿಯೋ ಕಳುಹಿಸಿದ್ದಾರೆ. ಅದರಲ್ಲಿ ಆಕೆ ಕಾರು ಮಾರಾಟ ಮಾಡಿರುವುದು ಎಲಿಯಾ ಕನ್‌ಸ್ಟ್ರಕ್ಷನ್‌ನವರು ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.