ಉದಯವಾಣಿ- ಎಂಐಸಿ ”ನಮ್ಮ ಸಂತೆ” ; ಗ್ರಾಹಕರಿಂದ ಭರ್ಜರಿ ಪ್ರತಿಕ್ರಿಯೆ

ಗಮನಸೆಳೆದ ಚನ್ನಪಟ್ಟಣದ ಗೊಂಬೆಗಳು, ರಾಗಿ ಬೋಟಿ, ತೆಂಗಿನ ನಾರಿನ ಕುಂಡಗಳು, ದೇಸಿ ಗೋ ಆಧಾರಿತ ಉತ್ಪನ್ನಗಳು

Team Udayavani, Feb 11, 2023, 8:28 PM IST

1-aa-1

ಮಣಿಪಾಲ: ಉದಯವಾಣಿ- ಮಣಿಪಾಲ ಇನ್‌ಸ್ಟಿಟ್ಯೂಟ್‌ ಆಫ್ ಕಮ್ಯೂನಿಕೇಶನ್‌ (ಎಂಐಸಿ) ಸಹಯೋಗದಲ್ಲಿ ಎಂಐಸಿ ಕ್ಯಾಂಪಸ್‌ನಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾಗಿರುವ “ನಮ್ಮ ಸಂತೆ’ ಗೆ ಶನಿವಾರ ಗ್ರಾಹಕರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಮ್ಮ ಸಂತೆಯಲ್ಲಿ ಕರಕುಶಲ, ಮಣ್ಣಿನ ಉತ್ಪನ್ನಗಳು, ನಾನಾ ಬಗೆಯ ಅಲಂಕಾರಿಕ ವಸ್ತುಗಳು, ಖಾದಿ ದಿರಿಸುಗಳು, ಸ್ಥಳೀಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯುತ್ತಿದೆ.

ಚನ್ನಪಟ್ಟಣ ಗೊಂಬೆ, ಇಳಕಲ್ ಸೀರೆ, ಕಾಂಚಿಪುರಂ, ಪೈತಾನಿ, ಮಹೇಶ್ವರಿ, ಪ್ಯೂರ್ ಸಿಲ್ಕ್, ಕ್ರಾಫ್ಟ್, ಗ್ರೀಟಿಂಗ್ಸ್, ಹ್ಯಾಂಡ್ ಮೇಡ್ ಬ್ಯಾಗ್ಸ್, ಹತ್ತಿಯ ಕೈಮಗ್ಗದ ಸೀರೆಗಳಿಗೆ ಬಹು ಬೇಡಿಕೆ ಕಂಡು ಬಂತು.

ವಿದ್ಯಾರ್ಥಿಗಳೇ ತಯಾರಿಸಿದ ಆಕರ್ಷಕ ಗೋಡೆ ಗಡಿಯಾರ, ಬನಿಯನ್, ಕನ್ನಡಕ, ಸ್ವದೇಶಿ ಪರಿಕಲ್ಪನೆಯಲ್ಲಿ ದೇಸಿ ಗೋ ಆಧಾರಿತ ಉತ್ಪನ್ನಗಳ ಮಾರಾಟಕ್ಕೂ ಉತ್ತಮ ಸ್ಪಂದನೆ ದೊರಕಿತು. ರಾಗಿ ಬೋಟಿ, ತೆಂಗಿನ ನಾರಿನ ಕುಂಡಗಳು ಗಮನ ಸೆಳೆದವು.

ಚನ್ನಪಟ್ಟಣದ ಗೊಂಬೆ ಮಾರಾಟ ಮಾಡಲು ಬಂದಿರುವ ರವಿರಾಜ್ ಅವರು ಮಾತನಾಡಿ ವ್ಯಾಪಾರ ಚನ್ನಾಗಿ ನಡೆದಿದೆ. ನಮ್ಮ ಉತ್ಪನ್ನಗಳಲ್ಲಿ ಪರಿಸರ ಸ್ನೇಹಿ ಬಣ್ಣಗಳನ್ನು ಮಾತ್ರ ಬಳಸಿದ್ದೇವೆ. ಎಂದರು. ಅವರು ತಂದಿದ್ದ ಪಾಂಡಿಚೇರಿಯಲ್ಲಿ ತಯಾರಿಸಿದ ನೀರು ತುಂಬಿ ಗಾಳಿ ಊದಿದಾಗ ದಾಗ ಸದ್ದು ಮಾಡುವ ಮಣ್ಣಿನ ಹಕ್ಕಿ ಎಲ್ಲರಿಗೂ ಇಷ್ಟವಾಯಿತು.

ತೆಂಗಿನ ನಾರಿನ ಕುಂಡಗಳನ್ನು ಮಾರಾಟ ಮಾಡಲು ಬಂದಿದ್ದ ಮಂಗಳೂರಿನ ನವೀನ್ ಕುಮಾರ್ ಅವರು, ನಮಗೆ ಉತ್ತಮ ಪ್ರತಿಕ್ರಿಯೆ ದೊರಕಿದೆ. ಪರಿಸರ ಸ್ನೇಹಿ ಉತ್ಪನ್ನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನರು ಖರೀದಿಸಿರುವುದು ಸಂತಸ ತಂದಿದೆ ಎಂದರು.

ಗೋ ಜನನಿ ಸಂಸ್ಥೆಯ ದೇಸಿ ಗೋವಿನ ಗೋಮಯ, ಗೋಮೂತ್ರ, ಹಾಲು ಬಳಸಿ ತಯಾರಿಸಿರುವ ಧೂಪ, ಆರೋಗ್ಯವರ್ಧಕ ಉತ್ಪನ್ನಗಳಿಗೆ ಉತ್ತಮ ಬೇಡಿಕೆ ಕಂಡು ಬಂದಿತು.

ಶಿವಮೊಗ್ಗದಿಂದ ಬಂದಿದ್ದ ಯೋಗೀಶ್ ಅವರು ಮಾರುತ್ತಿದ್ದ ರಾಗಿ ಬೋಟಿ ಎಲ್ಲರಿಗೂ ಇಷ್ಟವಾಯಿತು. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಮಕ್ಕಳಿಗಾಗಿ ಖರೀದಿ ಮಾಡಿದ್ದಾರೆ ಎಂದು ಅವರು ಸಂತಸ ಹಂಚಿಕೊಂಡರು.

ನಿವೃತ್ತ ಶಿಕ್ಷಕಿ ಚೇರ್ಕಾಡಿ ಗ್ರಾಮದ ಹುತ್ತಿ ಗೀತಾ ಸಾಮಂತ್ ಅವರು ಬೆಳೆಸಿರುವ ಸಾವಯುವ ಕುಚ್ಚಲಕ್ಕಿಯನ್ನೂ ಕೂಡ ಗ್ರಾಹಕರು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.