ಬಿಜೆಪಿಗೆ ದ್ರೋಹ ಎಸಗಿದ ಉದ್ಧವ್ ಠಾಕ್ರೆಗೆ ಪಾಠ ಕಲಿಸಬೇಕು: ಅಮಿತ್ ಶಾ
ಶಿವಸೇನಾ ಪಕ್ಷ ಇಬ್ಭಾಗವಾಗಲು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೊಣೆ
Team Udayavani, Sep 5, 2022, 3:58 PM IST
ಮುಂಬೈ: ಶಿವಸೇನಾ ವರಿಷ್ಠ ಉದ್ಧವ್ ಠಾಕ್ರೆ ಬಿಜೆಪಿಗೆ ದ್ರೋಹ ಬಗೆದಿದ್ದು, ಅವರಿಗೆ ಪಾಠ ಕಲಿಸಬೇಕಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ (ಸೆ.05) ಮುಂಬೈನಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ತಿಳಿಸಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:ಮತಬ್ಯಾಂಕ್ ರಾಜಕಾರಣವಿಲ್ಲ; ಇಸ್ರೇಲ್ ವಿಚಾರದಲ್ಲಿ ನಮ್ಮ ನಿಲುವು ಸಾಕ್ಷಿ: ಜೈಶಂಕರ್
“ರಾಜಕೀಯದಲ್ಲಿ ನಾವು ಏನು ಬೇಕಾದರೂ ಸಹಿಸಿಕೊಳ್ಳಬಹುದು, ಆದರೆ ದ್ರೋಹವನ್ನಲ್ಲ ಎಂದು ಶಾ ಹೇಳಿದ್ದಾರೆ”. ಶಿವಸೇನಾ ಪಕ್ಷ ಇಬ್ಭಾಗವಾಗಲು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೊಣೆಗಾರರಾಗಿದ್ದಾರೆ ಎಂದು ಶಾ ಆರೋಪಿಸಿದರು.
ಠಾಕ್ರೆಯ ದುರಾಸೆಯಿಂದಾಗಿ ಅವರ ಪಕ್ಷದ ಮುಖಂಡರು ಬಂಡಾಯ ಏಳುವಂತೆ ಮಾಡಿದೆ. ಏಕನಾಥ್ ಶಿಂಧೆ ಬಂಡಾಯ ಸಾರಲು ಬಿಜೆಪಿಯ ಕೈವಾಡವಿಲ್ಲ ಎಂದ ಶಾ, ಠಾಕ್ರೆಯ ನಿರ್ಧಾರಗಳಿಂದಾಗಿ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಗೊಂಡಿರುವುದಾಗಿ ತಿಳಿಸಿದರು.
ಉದ್ಧವ್ ಠಾಕ್ರೆ ಕೇವಲ ಭಾರತೀಯ ಜನತಾ ಪಕ್ಷಕ್ಕೆ ಮಾತ್ರ ದ್ರೋಹವೆಸಗಿಲ್ಲ, ಸಿದ್ದಾಂತಕ್ಕೂ ದ್ರೋಹ ಎಸಗಿದ್ದಾರೆ. ಅಲ್ಲದೇ ಮಹಾರಾಷ್ಟ್ರದ ಜನರು ನೀಡಿದ ಜನಾದೇಶವನ್ನು ಅವಮಾನಿಸಿದ್ದಾರೆ ಎಂದು ಶಾ ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ