ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ಹೊಟೇಲ್ ನಲ್ಲಿ ವೇಶ್ಯಾವಾಟಿಕೆ: ಆರೋಪಿಗಳು ವಶಕ್ಕೆ
Team Udayavani, Mar 17, 2021, 11:49 PM IST
ಉಡುಪಿ: ವೇಶ್ಯಾವಾಟಿಕೆ ನಡೆಸುತ್ತಿದ್ದ ಹೊಟೇಲ್ ಗೆ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಬುಧವಾರ ನಗರದ ಸಿಟಿ ಬಸ್ ನಿಲ್ದಾಣದ ಬಳಿಯ ಹೋಟೆಲ್ ನಲ್ಲಿ ನಡೆದಿದೆ.
ಶೇಖರ ಶೆಟ್ಟಿ, ಮನು, ರಾಜು, ಜೋನ್ಸನ್ ಡಿ’ಅಲ್ಮೇಡ, ರಾಜೇಶ್ವರಿ ಶೆಟ್ಟಿ ಆರೋಪಿಗಳಾಗಿದ್ದು ಹೊಟೇಲ್ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಈ ಕುರಿತು ಖಚಿತ ವರ್ತಮಾನದ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ 4 ಮೊಬೈಲ್ ಫೋನ್, 6,730 ರೂ. ವಶ ಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ :ನವದೆಹಲಿ ಜಗತ್ತಿನ ನಂ.1 ಕಲುಷಿತ ರಾಜಧಾನಿ! ಸತತ 3ನೇ ಬಾರಿಗೆ ಈ ಅಪಖ್ಯಾತಿ