ಉಡುಪಿಯಲ್ಲಿ ಸಂಭ್ರಮದ ಲಕ್ಷದೀಪೋತ್ಸವ ಆರಂಭ


Team Udayavani, Nov 27, 2020, 8:46 PM IST

lakshadeepa2

ಉಡುಪಿ: ಶ್ರೀಕೃಷ್ಣಮಠದಲ್ಲಿ ಶುಕ್ರವಾರ ಉತ್ಥಾನದ್ವಾದಶಿಯಂದು ಬೆಳಗ್ಗೆ ತುಳಸೀಪೂಜೆ ನಡೆದರೆ, ಸಂಜೆ ಕ್ಷೀರಾಬ್ದಿ ಪೂಜೆ ನಡೆದ ಬಳಿಕ ತೆಪ್ಪೋತ್ಸವ ಸಹಿತ ಲಕ್ಷದೀಪೋತ್ಸವ, ವಾರ್ಷಿಕ ರಥೋತ್ಸವ ಆರಂಭಗೊಂಡಿತು.

ದ್ವಾದಶಿಯಾದ ಕಾರಣ ಮುಂಜಾವದಿಂದ ಮಹಾಪೂಜೆಯನ್ನು, ಬಳಿಕ ತುಳಸೀ ಪೂಜೆಯನ್ನು ಪರ್ಯಾಯ ಶ್ರೀಈಶಪ್ರಿಯತೀರ್ಥ ಶ್ರೀಪಾದರು ನೆರವೇರಿಸಿದರು. ಇದಕ್ಕೂ ಮುನ್ನ ಒಂದು ತಿಂಗಳಿಂದ ನಡೆಯುತ್ತಿದ್ದ ಪಶ್ಚಿಮಜಾಗರ ಪೂಜೆಯನ್ನು ಸಮಾಪನಗೊಳಿಸಿದರು. ಸಂಜೆ ಮಧ್ವಸರೋವರದ ಮಧ್ಯದ ಮಂಟಪದಲ್ಲಿ ಕ್ಷೀರಾಬ್ಧಿ ಅರ್ಘ್ಯವನ್ನು ನೀಡಲಾಯಿತು. ಪೂಜೆಯಲ್ಲಿ ಪರ್ಯಾಯ ಅದಮಾರು ಮಠದ ಹಿರಿಯ, ಕಿರಿಯ, ಕೃಷ್ಣಾಪುರ, ಪಲಿಮಾರು ಹಿರಿಯ, ಕಿರಿಯ, ಪೇಜಾವರ ಸ್ವಾಮೀಜಿಯವರು ಅರ್ಘ್ಯವನ್ನು ನೀಡಿದರು.

ಅಪರಾಹ್ನ ರಥಬೀದಿಯಲ್ಲಿ ಅಳವಡಿಸಿದ ದಳಿಗಳ ಮೇಲೆ ಗೋಮಯವನ್ನು ಇಟ್ಟು ಅದರ ಮೇಲೆ ಹಣತೆ ಇಡುವ ಮುಹೂರ್ತವನ್ನು ವಿವಿಧ ಸ್ವಾಮೀಜಿಯವರು ನೆರವೇರಿಸಿದರು. ಸಂಜೆ ಕ್ಷೀರಾಬ್ಧಿ ಬಳಿಕ ರಾತ್ರಿ ಪೂಜೆ ನಡೆಯಿತು. ಪೂಜೆಯ ಬಳಿಕ ಚಾತುರ್ಮಾಸ್ಯವ್ರತ ಕಾಲದಲ್ಲಿ ಒಳಗಿದ್ದ ಉತ್ಸವ ಮೂರ್ತಿಯನ್ನು ಬಿರುದಾವಲಿಗಳಲ್ಲಿ ಹೊರಗೆ ತಂದು ರಾತ್ರಿ ಆಕರ್ಷಕ ತೆಪ್ಪೋತ್ಸವ ನಡೆಯಿತು. ಇದೇ ವೇಳೆ ರಥಬೀದಿ, ಮಧ್ವಸರೋವರದಲ್ಲಿ ಸಾವಿರಾರು ಹಣತೆಗಳ ದೀಪಗಳು ಕಂಗೊಳಿಸಿದವು. ಮಧ್ವಸರೋವರದಲ್ಲಿ ಭಕ್ತಿ ಗೀತೆಗಳನ್ನು ಏರ್ಪಡಿಸಲಾಗಿತ್ತು. ತೆಪ್ಪೋತ್ಸವದ ಬಳಿಕ ರಥೋತ್ಸವ ನಡೆಯಿತು.

ಶ್ರೀಕೃಷ್ಣಮುಖ್ಯಪ್ರಾಣ, ಶ್ರೀಅನಂತೇಶ್ವರ, ಶ್ರೀಚಂದ್ರಮೌಳೀಶ್ವರ ಉತ್ಸವ ಮೂರ್ತಿಗಳನ್ನು ಗರುಡರಥ ಮತ್ತು ಮಹಾಪೂಜಾ ರಥಗಳಲ್ಲಿರಿಸಿ ಉತ್ಸವ ನಡೆಸಲಾಯಿತು. ಪರ್ಯಾಯ ಅದಮಾರು ಹಿರಿಯ, ಕಿರಿಯ, ಕೃಷ್ಣಾಪುರ, ಪಲಿಮಾರು ಹಿರಿಯ, ಕಿರಿಯ, ಪೇಜಾವರ, ಕಾಣಿಯೂರು ಸ್ವಾಮೀಜಿಯವರು ಉತ್ಸವದಲ್ಲಿ ಪಾಲ್ಗೊಂಡರು.

ವಿರಳ ಜನಸ್ತೋಮ
ಕೊರೊನಾ ಕಾರಣದಿಂದ ಸೀಮಿತ ಭಕ್ತರಿಗೆ ಮಾತ್ರ ಅವಕಾಶವಿದ್ದ ಕಾರಣ ಆಯ್ದ ಕಾರ್ಯಕರ್ತರು ಹಣತೆಗಳನ್ನು ಬೆಳಗಿದರು. ರಥಬೀದಿ ಪ್ರವೇಶಿಸದಂತೆ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದರು. ಈ ಕಾರಣದಿಂದ ರಥಬೀದಿಯಲ್ಲಿ ದೊಡ್ಡ ಪ್ರಮಾಣದ ಭಕ್ತ ವರ್ಗ ಇದ್ದಿರಲಿಲ್ಲ.

ಪರಿಶುದ್ಧ ಎಳ್ಳೆಣ್ಣೆಯಲ್ಲಿ ಉತ್ಸವ
ಪರಿಶುದ್ಧವಾಗಿ ಮಾಡಿಸಿದ ಎಳ್ಳೆಣ್ಣೆಯಲ್ಲಿ ಲಕ್ಷದೀಪೋತ್ಸವವನ್ನು ಆಚರಿಸಲಾಯಿತು. ನ. 30ರ ವರೆಗೆ ನಿತ್ಯ ಲಕ್ಷದೀಪೋತ್ಸವ ನಡೆಯಲಿದೆ. ನಾಲ್ಕು ದಿನಗಳ ಕಾಲ ಸುಮಾರು 600 ಲೀ. ಎಳ್ಳೆಣ್ಣೆಯಲ್ಲಿ ದೀಪಗಳನ್ನು ಉರಿಸಲಾಗುತ್ತದೆ.

ಶುಚಿಗೊಳಿಸುವವರಿಗೂ ಸೇವಾವಕಾಶ
ನಿತ್ಯ ರಥಬೀದಿಯನ್ನು ಶುಚಿಗೊಳಿಸುವ ಪೌರಕಾರ್ಮಿಕರಿಗೂ ಲಕ್ಷದೀಪೋತ್ಸವದಲ್ಲಿ ಇತರ ಕಾರ್ಯಕರ್ತರ ಜತೆ ದೀಪಗಳನ್ನು ಬೆಳಗಿಸಲು ಅವಕಾಶ ಕಲ್ಪಿಸಲಾಗಿತ್ತು.

4,000 ಗೋಮಯ ಹಣತೆ
ದೀಪಾವಳಿ ಸಂದರ್ಭ ಝಾರ್ಖಂಡ್‌ನಿಂದ ತರಿಸಿ ವಿತರಿಸಿದ ಕಡಿಯಾಳಿ ಗಣೇಶೋತ್ಸವ ಸಮಿತಿಯವರು ಲಕ್ಷ ದೀಪೋತ್ಸವಕ್ಕೆ ಸುಮಾರು 4,000 ಗೋಮಯ ಹಣತೆಯನ್ನು ಲಕ್ಷದೀಪೋತ್ಸವದಲ್ಲಿ ದೀಪಗಳನ್ನು ಬೆಳಗಿಸಲು ನೀಡಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.