ನಿಯಮ ಉಲ್ಲಂಘಿಸಿ ಸನ್ಮಾನ, ಸಭೆ ನಡೆಸಿದರೆ ಕಠಿನ ಕ್ರಮ : ಉಡುಪಿ ಜಿಲ್ಲಾಧಿಕಾರಿ ಎಚ್ಚರಿಕೆ
Team Udayavani, Jun 13, 2021, 7:54 PM IST
ಉಡುಪಿ : ಜಿಲ್ಲೆಯಲ್ಲಿ ಕೊರೊನಾ ದೃಢಪಡುವ ಪಾಸಿಟಿವಿಟಿ ರೇಟ್ ಶೇ. 6ಕ್ಕೆ ಇಳಿಕೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕೆಲವು ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರಿದರೂ ಉಡುಪಿಯಲ್ಲಿ ಜೂ.14ರಿಂದ ಹಲವಾರು ವಿನಾಯಿತಿ ಘೋಷಣೆ ಮಾಡಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಅಗತ್ಯ ವಸ್ತುಗಳ ಖರೀದಿ ಸಮಯವನ್ನು 6ರಿಂದ 2 ಗಂಟೆಯವರೆಗೂ ವಿಸ್ತರಿಸಲಾಗಿದೆ. 40 ಜನರಿಗೆ ಸೀಮಿತಗೊಳಿಸಿ ಮದುವೆ ನಡೆಸಲು ಅವಕಾಶ ನೀಡಿದೆ. ಜಿಲ್ಲೆಯಲ್ಲಿ ಈ ನಡುವೆ ಅನೇಕ ಸಂಘ ಸಂಸ್ಥೆಗಳು ಮಾರ್ಗಸೂಚಿ ಉಲ್ಲಂ ಸಿ ಸಮ್ಮಾನ ಹಾಗೂ ಇತರೆ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಕಂಡು ಬಂದಿದೆ. ಇದರಿಂದ ಕೋವಿಡ್ ಹೆಚ್ಚಳವಾಗಲಿದೆ. ಈ ನಿಟ್ಟಿನಲ್ಲಿ ಸಮ್ಮಾನ ಹಾಗೂ ಇತರೆ ಯಾವುದೇ ಕಾರ್ಯಕ್ರಮ ಆಯೋಜಿಸಬಾರದು ಎಂದು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಮುಂಗಾರು ಮಳೆಯ ಅಬ್ಬರ : ಮತ್ತೆ ಜೀವ ಪಡೆದುಕೊಂಡ ಜೋಗ ಜಲಪಾತ
ಆಹಾರ ಕಿಟ್, ಮಾಸ್ಕ್ ಮೊದಲಾದ ವೈದ್ಯಕೀಯ ಪರಿಕರಗಳನ್ನು ವಿತರಿಸುವ ಸಂಘ ಸಂಸ್ಥೆಗಳು ಕೂಡ ಯಾವುದೇ ಸಮಾರಂಭ ನಡೆಸದೆ, ಅವುಗಳನ್ನು ನೇರವಾಗಿ ಫಲಾನುಭವಿಗಳಿಗೆ ನೀಡಬೇಕು. ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಕಂಡುಬಂದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.