ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಲು ಸರಕಾರಕ್ಕೆ ಯುಗಾದಿ ಗಡುವು: ಕೋಡಿಹಳ್ಳಿ
Team Udayavani, Apr 11, 2021, 10:10 PM IST
ಬೆಂಗಳೂರು: ಮುಷ್ಕರ ನಿರತ ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಲು ಸರಕಾರಕ್ಕೆ ಯುಗಾದಿ ಹಬ್ಬದ ಗಡುವು ನೀಡಿರುವ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಮುಖ್ಯಮಂತ್ರಿಗಳು ತಮ್ಮ ಜವಾಬ್ದಾರಿ ಅರಿತು ಮುಷ್ಕರ ನಿರತರನ್ನು ಮಾತುಕತೆಗೆ ಕರೆದು ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ.
ರವಿವಾರ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ಚರ್ಚಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಮುಷ್ಕರ ನಿರತರೊಂದಿಗೆ ಮಾತನಾಡುವುದಿಲ್ಲ ಎಂದು ಪದೇಪದೆ ಹೇಳುತ್ತಿದೆ. ಈ ಹಿಂದೆ ಆರನೇ ವೇತನ ಆಯೋಗ ಜಾರಿಗೆ ಒಪ್ಪಿರುವ ಸರಕಾರ ಈಗ ಮಾತಿಗೆ ತಪ್ಪಿದೆ ಎಂದರು.
ಇದನ್ನೂ ಓದಿ :ಸಿದ್ದರಾಮಯ್ಯ ಕಾಂಗ್ರೆಸ್ಗೆ ಬರಲು ಎಷ್ಟು ಹಣ ಪಡೆದಿದ್ದಾರೆ : ಈಶ್ವರಪ್ಪ ಪ್ರಶ್ನೆ
ಮಾ.16ರಂದು ಮುಷ್ಕರದ ನೋಟಿಸ್ ನೀಡಿದ ಬಳಿಕ ಬೇಡಿಕೆ ಈಡೇರಿಸಲು 22 ದಿನಗಳ ಕಾಲಾವಕಾಶವಿತ್ತು. ಈ ಅವಧಿಯಲ್ಲಿ ಮುಖ್ಯಮಂತ್ರಿ ಅಥವಾ ಸಾರಿಗೆ ಸಚಿವರೊಂದಿಗೆ ಒಂದೇ ಒಂದು ಮಹತ್ವದ ಮಾತುಕತೆ ನಡೆದಿಲ್ಲ. ಆದರೆ, ಕಾರ್ಮಿಕ ಇಲಾಖೆಯು ಸರಕಾರದ ಒತ್ತಡಕ್ಕೆ ಮಣಿದು ಮುಷ್ಕರದ ನಾಲ್ಕನೇ ದಿನ ಈ ಮುಷ್ಕರ ಊರ್ಜಿತವಲ್ಲ ಎಂದು ಆದೇಶಿಸಿದೆ. ಈ ಮೂಲಕ ಕಾರ್ಮಿಕ ಇಲಾಖೆ ಬೇಜವಾಬ್ದಾರಿಯಿಂದ ನಡೆದುಕೊಂಡಿದೆ. ಮುಖ್ಯಮಂತ್ರಿಯವರು ನೆಪ ಹೇಳದೆ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು. .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ