ಸಂಕಷ್ಟದಲ್ಲಿರುವ ನೇಕಾರರಿಗೆ ನೆರವಾಗಿ : ರಾಜ್ಯ ಸರಕಾರಕ್ಕೆ ಮಾಜಿ ಸಚಿವೆ ಉಮಾಶ್ರೀ ಮನವಿ


Team Udayavani, May 28, 2021, 7:03 PM IST

ಸಂಕಷ್ಟದಲ್ಲಿರುವ ನೇಕಾರರಿಗೆ ನೆರವಾಗಿ : ರಾಜ್ಯ ಸರಕಾರಕ್ಕೆ ಮಾಜಿ ಸಚಿವೆ ಉಮಾಶ್ರೀ ಮನವಿ

ಮಹಾಲಿಂಗಪುರ : ಕಾರ್ಮಿಕ ಇಲಾಖೆಯಲ್ಲಿ ನೇಕಾರರನ್ನು ಕಾರ್ಮಿಕರು ಅಂತಾ ಸೇರಿಸಿ. ಪಾವರ್‌ ಲೂಮ್ ನೇಕಾರರಿಗೆ ಕನಿಷ್ಠ ಮೂರು ವರ್ಷ ನಿರಂತರ ಉಚಿತ ವಿದ್ಯುತ್ ನೀಡಬೇಕು. ಆ ನಿಟ್ಟಿನಲ್ಲಿ ಸಂಕಷ್ಟದಲ್ಲಿರುವ ನೇಕಾರರಿಗೆ ನೆರವಾಗಿ ಎಂದು ಮಾಜಿ ಸಚಿವೆ ಉಮಾಶ್ರೀ ಸರಕಾರಕ್ಕೆ ಮನವಿ ಮಾಡಿದರು.

ಶುಕ್ರವಾರ ಪಟ್ಟಣದ ಬನಶಂಕರಿ ದೇವಸ್ಥಾನದ ಆವರಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬೃಹತ್ ಕೈಗಾರಿಕೆ ಹೊರತುಪಡಿಸಿ ಸಣ್ಣ ಮತ್ತು ಗುಡಿ ಕೈಗಾರಿಕೆಗಳು ನಿರ್ಜೀವವಾಗಿವೆ. ಅನೇಕರು ನೇಣಿಗೆ ಶರಣಾಗಿದ್ದಾರೆ. ಮಾಧ್ಯಮಗಳ ಮುಖಾಂತರ ಕೆಲವು ಮಾತ್ರ ಬೆಳಕಿಗೆ ಬಂದಿವೆ. ಆರ್ಥಿಕ ಹಿನ್ನೆಡೆ ದೇಶ ಮಾತ್ರ ಆನುಭವಿಸುತ್ತಿಲ್ಲ. ಜನಸಾಮಾನ್ಯರೂ ಅನುಭವಿಸುತ್ತಿದ್ದು ಅದರಲ್ಲಿ ವಿವಿಧ ನೇಕಾರರೂ ಕೂಡಾ ಇದ್ದಾರೆ. ನೇಕಾರಿಕೆ ಉದ್ಯಮ ಪುನಶ್ಚೇತನಕ್ಕೆ ಸರ್ಕಾರ ಮುಂದೆ ಬರಲಿಲ್ಲ ಎಂದು ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ವಿದ್ಯುತ್ ಚಾಲಿತ ಮಗ್ಗಗಳ ಮಾಲಿಕರು ಹಾಕಿದ ಬಂಡವಾಳ ತುಕ್ಕು ಹಿಡಿದಿದೆ. ಈಗಾಗಲೇ ನೇಯ್ದ ಬಟ್ಟೆಯನ್ನು ಯಾರೂ ಖರೀದಿಸುತ್ತಿಲ್ಲ. ಮೊದಲು ಪವರಲೂಮ್‌ನಲ್ಲಿ ದಿನಕ್ಕೆ 3 ಸೀರೆ ನೇಯುತ್ತಿದ್ದ ನೇಕಾರನಿಗೆ ಗಂಜಿಯಾದರೂ ಸಿಗಲಿ ಎಂದು ಮಾಲಿಕರು 1 ಸೀರೆಯನ್ನಾದರೂ ನೇಯಲಿ ಎಂದು ಹೇಳಬೇಕೆಂದರೆ ನೂಲು, ಚಮಕಾ, ಬಣ್ಣ ಸಿಗುತ್ತಿಲ್ಲಾ. ಇದನ್ನೇ ನಂಬಿ ಬದುಕುವ ನೇಕಾರ ಏನು ಮಾಡಬೇಕು ಎಂದು ಸರಕಾರದ ವಿರುದ್ಧ ಕಿಡಿಕಾರಿದರು.

ಇದನ್ನೂ ಓದಿ :ವೀಡಿಯೋ ಕಾನ್ಫರೆನ್ಸ್ ನಲ್ಲಿ 3ಡಿ ಅನುಭವ ನೀಡಲಿದೆ ಗೂಗಲ್ ಪ್ರಾಜೆಕ್ಟ್ ಸ್ಟಾರ್‌ ಲೈನ್

ಅನೇಕ ಅವಕಾಶಗಳಿದ್ದರೂ ಸರ್ಕಾರ ಉದ್ಯಮವನ್ನು ಪುನ:ಶ್ಚೇತನ ಮಾಡಲು ಮುಂದೆ ಬರಲಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸರ್ಕಾರದಲ್ಲಿ ಬರ, ಅತಿವೃಷ್ಠಿ, ಅನಾವೃಷ್ಠಿ ಇತ್ತಾದರೂ ಅವರು ಸಹಾಯಕ್ಕೆ ಧಾವಿಸಿದರು. ಸಾಲ ಮನ್ನಾ ಮಾಡಿದರು, ಖಾಸಗಿಯವರು ಯಾರೂ ಸಾಲ ವಾಪಸಾತಿಗೆ ಒತ್ತಾಯಿಸಬೇಡಿಯೆಂದು ತಾಕೀತು ಮಾಡಿದರು. ಆದರೆ ಇಂದು ಅದಕ್ಕಿಂತ ಕಠಿಣ ಪರಸ್ಥಿತಿ ರಾಜ್ಯದಲ್ಲಿ ಇದೆ. ಇಂದಿನ ಸರ್ಕಾರ ಏನು ಮಾಡ್ತಿದೆ. ಯಡಿಯೂರಪ್ಪನವರೆ ನೀವು ಮಹಾನ್ ನಾಯಕರು, ನೇಕಾರರ ಬಗ್ಗೆ ಬಹಳಷ್ಟು ಪ್ರೀತಿ ಉಳ್ಳವರು. ಆದರೆ ಪ್ಯಾಕೇಜ್ ಘೋಷಣೆ ಮಾಡುವಾಗ ನೇಕಾರರ ನೆನಪಾಗುವದಿಲ್ಲವೆ ಎಂದು ಸರಕಾರದ ವಿರುದ್ಧ ಗುಡುಗಿದರು. ಕಳೆದ ವರ್ಷವೂ ಹೀಗೆ ಮಾಡಿದ್ದೀರಿ. ಈ ಬಾರಿಯೂ ನೆನಪಾಗಲಿಲ್ಲ. ಶಾಸಕರು ಬಂದು ನಿಮಗೆ ನೆನಪು ಮಾಡಬೇಕು. ನಿಮ್ಮ ಭಾಷಣದಲ್ಲಿ ನೇಕಾರರ ಬಗ್ಗೆ ಎಷ್ಟು ಕನಿಕರ, ಪ್ರೀತಿ ತೋರಿಸುತ್ತೀರಿ ಅದೇ ಪ್ಯಾಕೇಜ್ ಘೋಷಣೆ ಮಾಡುವಾಗ ನೇಕಾರರ ನೆನಪಾಗಲಿಲ್ಲವೆ. ನಿಮ್ಮ ಸುತ್ತಲಿದ್ದವರು ಯಾಕೆ ನೆನಪಿಸಲಿಲ್ಲ. ಇದರ ಅರ್ಥ ಚುನಾವಣೆಯಲ್ಲಿ ಮತ ಗಳಿಸಲಿಲು ಮಾತ್ರ ನೇಕಾರರು ಬೇಕು ಆದರೆ ಕೃತಿಯಲ್ಲಿ ಅಲ್ಲ ಎಂದರು.

ನೇಕಾರರಿಗೆ ಈಗ 2 ಸಾವಿರ ಕೊಡ್ತೀನಿ ಅಂತಿರಿ. ಆದರೆ ಪ್ರತಿ ನೇಕಾರ ಕುಟುಂಬಕ್ಕೆ 10 ಸಾವಿರ ಕೊಡಬೇಕು. ನೇಕಾರರಿಗೆ ಮಾತ್ರ ಅಲ್ಲ. ಟ್ಯಾಕ್ಸಿ, ರಿಕ್ಷಾ ಚಾಲಕರಿಗೆ, ಅಸಂಘಟಿತ ಕಾರ್ಮಿಕರಿಗೆ ,ಸವಿತಾ ಸಮಾಜ, ಕುಂಬಾರ, ಕಮ್ಮಾರ ಸಮಾಜ ಹೀಗೆ ಎಲ್ಲ ಕಾಯಕ ಜೀವಿಗಳಿಗೆ 10 ಸಾವಿರ ರೂ.ಕೊಡಿ. ಕೈ ಮುಗಿದು ಕೇಳುತ್ತೇವೆ ಎಂದು ಮನವಿ ಮಾಡಿದರು.. ಎಲ್ಲ ತರಹದ ನೇಕಾರರಿಗೆ ಅಂದಾಜು ೮೦೦ ರಿಂದ ೯೦೦ ಕೋಟಿ ಘೋಷಣೆ ಮಾಡಿ ಅಥವಾ ಯೋಜನೆಗಳನ್ನು ಸೃಷ್ಠಿ ಮಾಡಿ, ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಬೇಕು, ಬಾಕಿ ಇರುವ ಸಬ್ಸಿಡಿ ಬಿಡುಗಡೆ ಮಾಡಬೇಕು. ಒಂದು ವರ್ಷದ ವರೆಗೆ ಸಾಲದ ಅಸಲು ಬಡ್ಡಿ ಕೇಳಬಾರದು ಎಂದು ಸರ್ಕಾರಕ್ಕೆ ಆಗ್ರಹಿಸಿದರು.

ರಬಕವಿಯ ವಿದ್ಯುತ್ ಚಾಲಿತ ಮಗ್ಗಗಳ ಅಧ್ಯಕ್ಷ ನೀಲಕಂಠ ಮುತ್ತೂರ, ಮಲ್ಲಪ್ಪ ಭಾವಿಕಟ್ಟಿ, ರಾಜೇಂದ್ರ ಭದ್ರನ್ನವರ, ಶಂಕರ ಸೊನ್ನದ, ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಪ್ಪ ಸಿಂಗಾಡಿ,ನಗರ ಘಟಕದ ಅಧ್ಯಕ್ಷ ಈಶ್ವರ ಚಮಕೇರಿ,ಪುರಸಭೆ ಸದಸ್ಯ ಜಾವೇದ ಬಾಗವಾನ, ರಾಜು ಭಾವಿಕಟ್ಟಿ, ಸತ್ಯಪ್ಪ ಮಗದುಮ್, ಹೊಳೆಪ್ಪ ಬಾಡಗಿ,ವಿಠ್ಠಲ ಸಂಶಿ, ಶಿವಾನಂದ ಗಾಳಿ ಮುಂತಾದವರು ಇದ್ದರು.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.