ಶೀಘ್ರದಲ್ಲಿ ಏಕ ರೂಪ ವಿದ್ಯುತ್ ದರ ಜಾರಿ: ಸಚಿವ ಸುನಿಲ್ ಕುಮಾರ್
Team Udayavani, Jul 17, 2022, 9:57 PM IST
ಬೆಂಗಳೂರು: ರಾಜ್ಯದಲ್ಲಿ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಈ ಹಿಂದೆ ಕಾಂಗ್ರೆಸ್ ಅವಧಿಯಲ್ಲಿ ಜಾರಿಗೊಳಿಸಲಾಗಿದ್ದ ಗ್ರಾಮ ಪಂಚಾಯತ್ ಅನುಮತಿ ಕಡ್ಡಾಯ ಎಂಬುದನ್ನು “100 ದಿನ ವಿಶೇಷ ಯೋಜನೆ’ಯಡಿ ರದ್ದುಪಡಿಸುವ ಮೂಲಕ ಅನೇಕರ ಮನೆ ಬೆಳಗಿವೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದರು.
ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ರವಿವಾರ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ವಿದ್ಯುತ್ ಗುತ್ತಿಗೆದಾರರ ಸಮಾವೇಶ ಹಾಗೂ ಅಭಿನಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ ಸಂಘದ ವೆಬ್ಸೈಟ್ ಮತ್ತು ಲಾಂಛನ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಸಿ.ರಮೇಶ್ ಮಾತನಾಡಿ, ನಮ್ಮ ಸಂಘಕ್ಕೆ 100 ವರ್ಷದ ಇತಿಹಾಸವಿದೆ. ಗುತ್ತಿಗೆದಾರರ ಸಮಸ್ಯೆಗಳಿಗೆ ಸಂಘವು ಸದಕಾಲ ಶ್ರಮಿಸುತ್ತಿದೆ. ರಾಜ್ಯದಲ್ಲಿ 30 ಸಾವಿರ ವಿದ್ಯುತ್ ಗುತ್ತಿಗೆದಾರರಿದ್ದಾರೆ. ಅವರನ್ನು ನಂಬಿಕೊಂಡು 10 ಲಕ್ಷ ಜನರು ಕೆಲಸ ಮಾಡುತ್ತಿ¨ªಾರೆ ಎಂದು ಹೇಳಿದರು.
ಇಂಧನ ಸಚಿವ ಸುನಿಲ್ ಕುಮಾರ್ ಅವರನ್ನು ಸಮ್ಮಾನಿಸಲಾಯಿತು. ಸಂಘದ ಪದಾಧಿಕಾರಿಗಳಾದ ಎಂ.ಎನ್.ರಮೇಶ್, ಊರ್ಬನ್ ಪಿಂಟೊ, ಚಂದ್ರಬಾಬು, ಅನ್ವರ್ ಮಿಯಾ, ಶಿವಾನಂದ್ ಬಾಲಪ್ಪ, ಚಂದ್ರಬಾಬು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ