ಸೋಂಕಿತರಿಗೆ ಏಕರೂಪ ಚಿಕಿತ್ಸೆ: ಆನ್‌ಲೈನ್‌ ತರಬೇತಿ

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ ವಿನೂತನ ಉಪಕ್ರಮ

Team Udayavani, Mar 29, 2020, 6:15 AM IST

ಸೋಂಕಿತರಿಗೆ ಏಕರೂಪ ಚಿಕಿತ್ಸೆ: ಆನ್‌ಲೈನ್‌ ತರಬೇತಿ

ಬೆಂಗಳೂರು: ಕೋವಿಡ್‌ 19 ಸೋಂಕಿತರಿಗೆ ರಾಜ್ಯವ್ಯಾಪಿ ಏಕರೂಪ ಚಿಕಿತ್ಸೆ ನೀಡಲು ಮತ್ತು ಅವರ ಆರೈಕೆಗೆ ಅನುಕೂಲ ಆಗುವಂತೆ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯವು ವೈದ್ಯರಿಗೆ, ನರ್ಸ್‌ಗಳಿಗೆ ಮತ್ತು ಪ್ಯಾರಾಮೆಡಿಕಲ್‌ ಸಿಬಂದಿ ವರ್ಗಕ್ಕೆ ಆನ್‌ಲೈನ್‌ ಮೂಲಕ ತರಬೇತಿ ನೀಡಲು ನಿರ್ಧರಿಸಿದೆ.

ಕೋವಿಡ್‌ 19 ಸೋಂಕಿತರಿಗೆ ಏಕರೂಪದ ಚಿಕಿತ್ಸೆ ಇರಬೇಕು ಮತ್ತು ಅದನ್ನು ಎಲ್ಲರೂ ಪಾಲಿಸಲೇಬೇಕಾಗಿರುತ್ತದೆ. ಅತ್ಯಂತ ಸೂಕ್ಷ್ಮ ರೀತಿಯಲ್ಲಿ ಚಿಕಿತ್ಸಾ ವಿಧಾನ ಮತ್ತು ಆರೈಕೆಗಳು ಅಗತ್ಯ ಇರುವುದರಿಂದ ಎಲ್ಲ ಜಿಲ್ಲೆಗಳ ವೈದ್ಯರಿಗೆ, ನರ್ಸ್‌ಗಳಿಗೆ ಮಾತ್ತು ಪ್ಯಾರಾಮೆಡಿಕಲ್‌ ಸಿಬಂದಿ ವರ್ಗಕ್ಕೆ ಆನ್‌ಲೈನ್‌ ಮೂಲಕ ತರಬೇತಿ ನೀಡಲು ಎಲ್ಲ ರೀತಿಯ ತಯಾರಿ ಮಾಡಿಕೊಂಡಿದ್ದೇವೆ. ಆಯಾ ಜಿಲ್ಲೆಗಳಲ್ಲಿಯೇ ವೈದ್ಯರು, ನರ್ಸ್‌ಗಳು ಮತ್ತು ಪ್ಯಾರಾಮೆಡಿಕಲ್‌ ಸಿಬಂದಿ ಲಭ್ಯತೆಯ ಆಧಾರದಲ್ಲಿ ತರಬೇತಿ ನೀಡಲಾಗುತ್ತದೆ ಎಂದು ವಿವಿಯ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಖಚಿತಪಡಿಸಿದ್ದಾರೆ.

ತಜ್ಞರ ಮೂಲಕ ತರಬೇತಿ
ಈ ವಿಚಾರದಲ್ಲಿ ವೈದ್ಯರಿಗೆ ಅಥವಾ ನರ್ಸ್‌ಗಳಿಗೆ ತರಬೇತಿ ನೀಡುವವರೂ ಕೂಡ ತುಂಬ ವಿಚಾರವನ್ನು ತಿಳಿದವರಾಗಿರಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ವಿವಿಯು ವೈದ್ಯಕೀಯ ತಜ್ಞರ ಮೂಲಕ ತರಬೇತಿ ನೀಡಲಿದೆ. ಸರಕಾರದ ಒಪ್ಪಿಗೆಯಲ್ಲೇ ಈ ತರಬೇತಿ ಕಾರ್ಯ ನಡೆಯಲಿದೆ ಎಂದು ವಿವರಿಸಿದರು.

ಏನೇನು ತರಬೇತಿ?
ಕೋವಿಡ್‌ 19 ವೈರಸ್‌ ತಡೆಯುವ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಸರಕಾರ ಈಗಾಗಲೇ ಜಾರಿಗೊಳಿಸಿದೆ. ಆದರೆ ಸೋಂಕಿತರನ್ನು ಮಾತ್ರ ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದವರು ಮಾತ್ರ ನೋಡಿಕೊಳ್ಳಬೇಕು. ಹೀಗಾಗಿ ವೈದ್ಯರಿಗೆ, ನರ್ಸ್‌ ಗಳಿಗೆ ಮತ್ತು ಪ್ಯಾರಾಮೆಡಿಕಲ್‌ ಸಿಬಂದಿ ವರ್ಗಕ್ಕೆ ಅತ್ಯಾಧುನಿಕ ಸೌಲಭ್ಯವನ್ನು ವೈದ್ಯಕೀಯ ಸೌಲಭ್ಯ ಬಳಸಿ, ಯಾವುದೇ ರೀತಿಯಲ್ಲೂ ಅಪಾಯವಿಲ್ಲದ ರೀತಿಯಲ್ಲಿ ಆರೈಕೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತದೆ. ತರಬೇತಿ ಆನ್‌ಲೈನ್‌ ಮೂಲಕ ಇರುವುದರಿಂದ ವೈದ್ಯರು ಅಥವಾ ವೈದ್ಯಕೀಯ ಸಿಬಂದಿ ತಾವು ಇರುವ ಜಾಗಳಿಂದಲೇ ತರಬೇತಿ ಪಡೆಯಬಹುದಾಗಿದೆ ಎಂದು ವಿವಿಯ ಹಿರಿಯ ಅಧಿಕಾರಿ ಮಾಹಿತಿ ನೀಡಿದರು.

ಕೋವಿಡ್‌ 19 ಚಿಕಿತ್ಸೆ ಮತ್ತು ಆರೈಕೆ ಸಂಬಂಧಿಸಿದಂತೆ ಇಡೀ ದೇಶದಲ್ಲೇ ಏಕರೂಪ ಕ್ರಮ ಅಳವಡಿಸಿಕೊಳ್ಳಬೇಕು. ಹೀಗಾಗಿ ರಾಜ್ಯದ ಎಲ್ಲಡೇ ಏಕರೂಪ ಚಿಕಿತ್ಸೆ ಮತ್ತು ಆರೈಕೆ ಕ್ರಮಕ್ಕಾಗಿ ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರದ ಸಿಬಂದಿಗೆ ತರಬೇತಿ ನೀಡಲಿದ್ದೇವೆ. ಇದು ಚಿಕಿತ್ಸೆಗೆ ಅನುಕೂಲ ಆಗುವ ಜತೆಗೆ ಆಧುನಿಕ ಉಪ ಕರಣಗಳ ಸರಳ ಬಳಕೆಗೆ ಉಪಯೋಗ ಆಗಲಿದೆ.
-ಡಾ|ಎಸ್‌.ಸಚ್ಚಿದಾನಂದ, ಕುಲಪತಿ,
ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿ.ವಿ.

ಸಿಬಂದಿಗೆ ತರಬೇತಿ
ರಾಜ್ಯದಲ್ಲಿರುವ ಬಹುತೇಕ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ನರ್ಸಿಂಗ್‌ ಕಾಲೇಜುಗಳು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ ಅಧೀನದಲ್ಲಿ ಬರುತ್ತದೆ. ಕೋವಿಡ್‌ 19 ತಡೆಯುವ ನಿಟ್ಟಿನಲ್ಲಿ ವಿವಿಯೂ ಈಗಾಗಲೇ ಕಾರ್ಯೋನ್ಮುಖವಾಗಿದ್ದು ವೈದ್ಯಕೀಯ ವಿದ್ಯಾರ್ಥಿಗಳಿಗೆ ಈ ಸಂಬಂಧ ಅಗತ್ಯ ಸೂಚನೆಯನ್ನು ನೀಡಿದ್ದು, ಈಗ ವೈದ್ಯರು ಮತ್ತು ವೈದ್ಯಕೀಯ ಸೇವೆಯ ಸಿಬಂದಿಗೆ ತರಬೇತಿ ನೀಡಲು ಮುಂದಾಗಿದೆ.

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.