Live Update: 2021ರ ಕೇಂದ್ರ ಬಜೆಟ್ ಮಂಡನೆ: ರೈಲ್ವೆಗೆ 1,10,055 ಕೋಟಿ
Team Udayavani, Feb 1, 2021, 9:48 AM IST
ನವದೆಹಲಿ:ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ (ಫೆ.1, 2021) ಕೇಂದ್ರ ಬಜೆಟ್ ಮಂಡಿಸಲಿದ್ದು, ಇದು ಹಿಂದೆಂದೂ ಕಂಡರಿಯದಂಥ ಬಜೆಟ್ ಇದಾಗಿರಲಿದೆ ಎಂದು ಘೋಷಿಸಿದ್ದು, ಕಂಗಾಲಾದ ಆರ್ಥಿಕತೆಗೆ “ಲಸಿಕೆ” ನೀಡುವ ನಿರೀಕ್ಷೆ ಹುಟ್ಟಿಸಿದ್ದಾರೆ.
ಸಚಿವಾಲಯದಿಂದ ನಿರ್ಮಲಾ ಸೀತಾರಾಮನ್ ನಿರ್ಗಮಿಸಿದ್ದು, ಅವರು 11ಗಂಟೆಗೆ ಲೋಕಸಭೆಯಲ್ಲಿ 2021-22ರ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಪ್ರಥಮ ಬಾರಿಗೆ ಬಜೆಟ್ ಅನ್ನು ಕಾಗದ ರಹಿತವಾಗಿ ಮಂಡಿಸಲಾಗುತ್ತಿದೆ.
*ಇಂದು ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆ
*ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ
ಸತತ 3ನೇ ಬಜೆಟ್
*ಇದು ಮೋದಿ ನೇತೃತ್ವದ ಸರ್ಕಾರದ 9ನೇ ಬಜೆಟ್
#WATCH Delhi: Finance Minister Nirmala Sitharaman and MoS Finance & Corporate Affairs Anurag Thakur arrive at the Parliament. #Budget2021 pic.twitter.com/7j3ippMsPm
— ANI (@ANI) February 1, 2021
ನಿರೀಕ್ಷೆಗಳೇನು?
*ಉದ್ಯೋಗಾವಕಾಶ ಸೃಷ್ಟಿಗೆ ಒತ್ತು, ಗ್ರಾಮೀಣಾಭಿವೃದ್ಧಿಗೆ ಆದ್ಯತೆ
*ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಅನುದಾನ. ವಿದೇಶಿ ಹೂಡಿಕೆ ಆಕರ್ಷಿಸುವ ನಿಟ್ಟಿನಲ್ಲಿ ಈಗಿರುವ ನಿಯಮಗಳ ಸಡಿಲಿಕೆ
*ತೆರಿಗೆದಾರರ ಖರೀದಿ ಸಾಮರ್ಥ್ಯ ಹೆಚ್ಚಳಕ್ಕೆ ಕ್ರಮ
ಈ ಬಾರಿಯ ವೈಶಿಷ್ಟ್ಯ?
*ಮೊದಲ ಬಾರಿಗೆ ಬಜೆಟ್ ಪ್ರತಿಗಳ ಮುದ್ರಣವಿಲ್ಲ.
*ಮುಂಗಡ ಪತ್ರದ ಎಲ್ಲ ಅಂಶಗಳೂ “ಯೂನಿಯನ್ ಬಜೆಟ್ ಆ್ಯಪ್’ನಲ್ಲಿ ಲಭ್ಯ.
2021-22ನೇ ಸಾಲಿನ ಕೇಂದ್ರ ಬಜೆಟ್ ನ ಕ್ಷಣ, ಕ್ಷಣದ ಮಾಹಿತಿ ಇಲ್ಲಿದೆ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ