ಜನಪ್ರಿಯ ಘೋಷಣೆಗಳಿಲ್ಲದ ಕೇಂದ್ರ ಬಜೆಟ್ 2022: ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ?
ಪ್ರಧಾನ್ ಮಂತ್ರಿ ಕಿಸಾನ್ ಯೋಜನೆಗೆ 68,000 ಸಾವಿರ ಕೋಟಿ ರೂಪಾಯಿ
Team Udayavani, Feb 1, 2022, 1:27 PM IST
ನವದೆಹಲಿ: ಚುನಾವಣೆ ನಡೆಯಲಿರುವ ಪಂಚರಾಜ್ಯಗಳಿಗೆ ಈ ಬಾರಿಯ ಬಜೆಟ್ ನಲ್ಲಿ ಬಂಪರ್ ಕೊಡುಗೆ ಘೋಷಿಸುವ ಸಾಧ್ಯತೆ ಇದೆ ಎಂಬ ನಿರೀಕ್ಷೆ ಹುಸಿಯಾಗಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ (ಫೆ.02) ಲೋಕಸಭೆಯಲ್ಲಿ ಯಾವುದೇ ಜನಪ್ರಿಯ ಘೋಷಣೆಗಳಿಲ್ಲದ ಬಜೆಟ್ ಮಂಡಿಸಿದ್ದಾರೆ.
ಇದನ್ನೂ ಓದಿ:ಕೇಂದ್ರ ಬಜೆಟ್ 2022-23: ಈ ಬಾರಿ ಯಾವ ವಸ್ತು ದುಬಾರಿ, ಯಾವುದು ಅಗ್ಗ?
ಕಳೆದ ಸಾಲಿನಲ್ಲಿ 34 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದು, 2022-23ನೇ ಸಾಲಿನ ಬಜೆಟ್ ಗಾತ್ರ 39.54 ಲಕ್ಷ ಕೋಟಿಗೆ ಏರಿಕೆಯಾಗಿದೆ. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ…
ರಾಷ್ಟ್ರೀಯ ಆರೋಗ್ಯ ಯೋಜನೆಗೆ 37,800 ಕೋಟಿ ರೂಪಾಯಿ ಅನುದಾನ. ಜಲ್ ಜೀವನ್ ಯೋಜನೆಗೆ 60,000 ಕೋಟಿ ರೂಪಾಯಿ ಮೀಸಲಿಡಲಾಗಿದೆ.ರಾಷ್ಟ್ರೀಯ ಶಿಕ್ಷಣ ಯೋಜನೆಗೆ 39,553 ಕೋಟಿ ರೂಪಾಯಿ.
ಪ್ರಧಾನ್ ಮಂತ್ರಿ ಗ್ರಾಮ ಸಡಖ್ ಯೋಜನೆಗೆ 190 ಕೋಟಿ ರೂಪಾಯಿ, ಪ್ರಧಾನ್ ಮಂತ್ರಿ ಕಿಸಾನ್ ಯೋಜನೆಗೆ 68,000 ಸಾವಿರ ಕೋಟಿ ರೂಪಾಯಿ ಅನುದಾನ.
ಆತ್ಮನಿರ್ಭರ್ ಭಾರತ್ ರೋಜ್ಗಾರ್ ಯೋಜನೆಗೆ 6,400 ಕೋಟಿ ರೂಪಾಯಿ, ಪ್ರಧಾನ್ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಗೆ 10,000 ಕೋಟಿ ರೂಪಾಯಿ.
ದೂರ ಸಂಪರ್ಕ ಇಲಾಖೆಗೆ 10,540.82 ಕೋಟಿ ರೂಪಾಯಿ, ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆಗೆ 107715.38 ಕೋಟಿ ರೂಪಾಯಿ. ಕೃಷಿ ಮತ್ತು ರೈತರ ಅಭಿವೃದ್ಧಿಗೆ 132513.62 ಕೋಟಿ ರೂಪಾಯಿ.
ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ 138203.63 ಕೋಟಿ ರೂಪಾಯಿ, ರೈಲ್ವೆ ಸಚಿವಾಲಯಕ್ಕೆ 140367.13 ಕೋಟಿ, ಗೃಹ ವ್ಯವಹಾರಗಳ ಸಚಿವಾಲಯಕ್ಕೆ 185776.55 ಕೋಟಿ, ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವಾಲಯಕ್ಕೆ 199107.71 ಕೋಟಿ ರೂಪಾಯಿ ಅನುದಾನ. ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯ 217684.46 ಕೋಟಿ ಹಾಗೂ ರಕ್ಷಣಾ ಸಚಿವಾಲಯಕ್ಕೆ 525166.16 ಕೋಟಿ ಅನುದಾನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್