Rakhi Festival Gift: ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ 200 ರೂ. ಇಳಿಕೆ: ಕೇಂದ್ರ
ಉಜ್ವಲಾ ಸ್ಕೀಮ್ ಫಲಾನುಭವಿಗಳಿಗೆ ಪ್ರತಿ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 400 ರೂಪಾಯಿ ಇಳಿಕೆ
Team Udayavani, Aug 29, 2023, 4:40 PM IST
ನವದೆಹಲಿ: ರಕ್ಷಾ ಬಂಧನ ಹಬ್ಬದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಬಿಗ್ ರಿಲೀಫ್ ಎನ್ನುವಂತೆ ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಿದ್ದು, ಇದರಿಂದಾಗಿ ಪ್ರಧಾನಮಂತ್ರಿ ಉಜ್ವಲಾ ಸ್ಕೀಮ್ ಫಲಾನುಭವಿಗಳಿಗೆ ಪ್ರತಿ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 400 ರೂಪಾಯಿ ಇಳಿಕೆ ಮಾಡಿರುವುದಾಗಿ ಘೋಷಿಸಿದೆ.
ಇದನ್ನೂ ಓದಿ:Chandan Shetty; ಟ್ರೆಂಡಿಗ್’ನಲ್ಲಿರಬೇಕಾದ್ರೆ ಏನ್ ಮಾಡೋಣ..: ಸೂತ್ರಧಾರಿ ಹಾಡು ಬಂತು
ಪ್ರಧಾನಮಂತ್ರಿ ಉಜ್ವಲಾ ಯೋಜನೆಯಡಿ ಪ್ರತಿ ಎಲ್ ಪಿಜಿ ಸಿಲಿಂಡರ್ ಗೆ ಹೆಚ್ಚುವರಿಯಾಗಿ 200 ರೂಪಾಯಿ ಸಬ್ಸಿಡಿ ನೀಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿರುವುದಾಗಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಂಗಳವಾರ (ಆಗಸ್ಟ್ 29) ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.
ಪ್ರಧಾನಮಂತ್ರಿ ಉಜ್ವಲಾ ಯೋಜನೇತರ ಗ್ರಾಹಕರಿಗೆ 14ಕೆಜಿಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 200 ರೂಪಾಯಿ ಇಳಿಕೆಯಾಗಲಿದ್ದು,ಪ್ರತಿ ಸಿಲಿಂಡರ್ ಬೆಲೆ 900 ರೂಪಾಯಿ ಆಗಲಿದೆ.
ಉಜ್ವಲಾ ಸ್ಕೀಮ್ ನ ನೋಂದಾಯಿತ ಗ್ರಾಹಕರಿಗೆ ಒಟ್ಟು 400 ರೂಪಾಯಿ ಸಬ್ಸಿಡಿ ದೊರೆಯುವ ಮೂಲಕ ಪ್ರತಿ ಸಿಲಿಂಡರ್ ಬೆಲೆ 700 ರೂಪಾಯಿ ಆಗಲಿದೆ. ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಗೆ 200 ರೂಪಾಯಿ ಸಬ್ಸಿಡಿ ನೀಡುವ ನಿರ್ಧಾರದಿಂದ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ಒಟ್ಟು 7,500 ಕೋಟಿ ರೂಪಾಯಿ ಹೊರೆಯಾಗಲಿದೆ ಎಂದು ಠಾಕೂರ್ ತಿಳಿಸಿದ್ದಾರೆ.
ರಕ್ಷಾ ಬಂಧನ್, ಓಣಂ ಹಬ್ಬದ ಸಂದರ್ಭದಲ್ಲಿ ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ಇಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಸುಮಾರು 73 ಲಕ್ಷ ಮಹಿಳಾ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಉಜ್ವಲಾ ಸ್ಕೀಮ್ ಸಬ್ಸಿಡಿಯನ್ನು ಮುಂದುವರಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಸಚಿವ ಠಾಕೂರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ