ಕೃಷಿ ಕಾಯ್ದೆ ರದ್ದುಗೊಳಿಸುವ ನಿರ್ಣಯ ಅಂಗೀಕರಿಸಿದ ಕೇಂದ್ರ ಸಂಪುಟ; ಅಧಿವೇಶನದಲ್ಲಿ ಮಂಡನೆ
ಈ ಮಸೂದೆಯನ್ನು ರದ್ದುಗೊಳಿಸುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿತ್ತು
Team Udayavani, Nov 24, 2021, 1:28 PM IST
ನವದೆಹಲಿ: ವಿವಾದಿತ ಮೂರು ಕೃಷಿ ಕಾಯ್ದೆಯನ್ನು ರದ್ದು ಮಾಡುವ ಮಸೂದೆಗೆ ಬುಧವಾರ (ನವೆಂಬರ್ 24) ನಡೆದ ಕೇಂದ್ರ ಸಂಪುಟ ಸಭೆ ನಿರ್ಣಯ ಅಂಗೀಕರಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:#What’s App: ಸಂದೇಶಗಳನ್ನು ಕಳುಹಿಸಿದ 7 ದಿನಗಳ ಬಳಿಕವೂ ಅಳಿಸುವ ಆಯ್ಕೆ..!
ಕೃಷಿ ಕಾಯ್ದೆ ಮಸೂದೆ 2021 ರದ್ದುಗೊಳಿಸುವ ಪ್ರಸ್ತಾಪಕ್ಕೆ ಇಂದು ಬೆಳಗ್ಗೆ ನಡೆದ ಕೇಂದ್ರ ಸಂಪುಟ ಸಭೆ ಅಂಕಿತ ನೀಡಿದೆ. ಪ್ರಧಾನಮಂತ್ರಿ ಕಚೇರಿಯನ್ನು ಸಂಪರ್ಕಿಸಿ ಈ ಮಸೂದೆಯನ್ನು ರದ್ದುಗೊಳಿಸುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿತ್ತು ಎಂದು ಕೇಂದ್ರ ಕೃಷಿ ಸಚಿವಾಲಯ ತಿಳಿಸಿದೆ.
ಮೂರು ಕಾಯ್ದೆಗಳನ್ನು ರದ್ದು ಮಾಡುವ ಬಗ್ಗೆ ಒಂದೇ ಮಸೂದೆ ಮಂಡಿಸುವ ಮೂಲಕ ಕಾಯ್ದೆಗಳನ್ನು ವಾಪಸ್ ಪಡೆಯಲು ನಿರ್ಣಯ ತೆಗೆದುಕೊಳ್ಳಲಾಗಿತ್ತು. ಕಳೆದ ವರ್ಷ ಲೋಕಸಭೆಯಲ್ಲಿ ಮೂರು ಕೃಷಿ ಕಾಯ್ದೆಗಳ ಮಸೂದೆಯನ್ನು ಜಾರಿ ಮಾಡಲಾಗಿತ್ತು. ಆದರೆ ರೈತ ಸಂಘಟನೆಗಳು ಮೂರು ಕೃಷಿ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಒಂದು ವರ್ಷಗಳ ಕಾಲ ತೀವ್ರ ಪ್ರತಿಭಟನೆ ನಡೆಸಿವೆ.
ಇದೀಗ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ನಿರ್ಣಯಕ್ಕೆ ಕೇಂದ್ರ ಸಚಿವ ಸಂಪುಟ ಅಂಗೀಕಾರ ನೀಡಿದ್ದು, ಮುಂಬರುವ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಾಗುವುದು. ನವೆಂಬರ್ 29ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಡಿಸೆಂಬರ್ 23ರವರೆಗೆ ಅಧಿವೇಶನ ನಡೆಯಲಿದೆ.
ಗುರು ನಾನಕ್ ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿ ಅವರು ಮೂರು ಕೃಷಿ ಕಾಯ್ದೆಗಳನ್ನು ಸಾಂವಿಧಾನಿಕ ಪ್ರಕ್ರಿಯೆ ಮೂಲಕ ರದ್ದುಗೊಳಿಸಲಾಗುವುದು ಎಂದು ಘೋಷಿಸಿದ್ದರು. ಅಲ್ಲದೇ ಈ ಬಗ್ಗೆ ದೇಶದ ಕ್ಷಮೆಯಾಚಿಸಿದ ಪ್ರಧಾನಿ, ರೈತರು ಪ್ರತಿಭಟನೆಯನ್ನು ಕೈಬಿಟ್ಟು ಮನೆಗಳಿಗೆ ತೆರಳುವಂತೆ ಮನವಿ ಮಾಡಿದ್ದರು. ಆದರೆ ಮೂರು ಕೃಷಿ ಕಾಯ್ದೆ ಸಂಸತ್ ಅಧಿವೇಶನದಲ್ಲಿ ರದ್ದುಗೊಂಡ ನಂತರವೇ ಪ್ರತಿಭಟನೆ ಸ್ಥಗಿತಗೊಳಿಸುವುದಾಗಿ ರೈತ ಸಂಘಟನೆ ಮುಖಂಡ ರಾಕೇಶ್ ಟಿಕಾಯತ್ ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ