ಸೋಮವಾರದಿಂದ ಮಹಾರಾಷ್ಟ್ರದ ಧಾರ್ಮಿಕ ಕೇಂದ್ರಗಳು ಭಕ್ತರಿಗೆ ಮುಕ್ತ! ನಿಯಮ ಪಾಲಿಸಲು ಸೂಚನೆ
Team Udayavani, Nov 14, 2020, 7:09 PM IST
ಮುಂಬೈ: ದೀಪಾವಳಿ ಹೊತ್ತಿನಲ್ಲೇ ಸೋಮವಾರದಿಂದ ಮಹಾರಾಷ್ಟ್ರದಲ್ಲಿನ ಎಲ್ಲಾ ಧಾರ್ಮಿಕ ಕೇಂದ್ರಗಳು ತೆರೆಯಲಿವೆ. ದೇಗುಲಗಳ ತೆರೆಯುವ ವಿಚಾರದಲ್ಲಿ ರಾಜ್ಯಪಾಲರು ಮತ್ತು ಬಿಜೆಪಿ ಪಕ್ಷಗಳು ಉದ್ಧವ್ ಠಾಕ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದವು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರದ ಈ ನಿರ್ಧಾರ ಮಹತ್ವ ಪಡೆದುಕೊಂಡಿದೆ.
ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಘೋಷಣೆಯಾದ ಬಳಿಕ, ಅಂದರೆ ಮಾ.17ರಂದು ಧಾರ್ಮಿಕ ಕೇಂದ್ರಗಳನ್ನು ಮುಚ್ಚಲಾಗಿತ್ತು. ದೇಶದ ಬೇರೆ ಬೇರೆ ದೇಶಗಳಲ್ಲಿ ಎರಡು ತಿಂಗಳ ಹಿಂದೆಯೇ ಓಪನ್ ಮಾಡಲಾಗಿತ್ತಾದರೂ, ಮಹಾರಾಷ್ಟ್ರದಲ್ಲಿ ಮಾತ್ರ ಇನ್ನೂ ಬಾಗಿಲು ತೆಗೆದಿರಲಿಲ್ಲ.
ಇದನ್ನೂ ಓದಿ:ಪ್ರಧಾನಿ ಮೋದಿ ಈವರೆಗೆ ಯಾವ ಗಡಿಭಾಗದ ಯೋಧರ ಜತೆ ದೀಪಾವಳಿ ಆಚರಿಸಿದ್ದಾರೆ ಗೊತ್ತಾ?
ಈಗ ಮಹಾರಾಷ್ಟ್ರ ಸರ್ಕಾರವೂ ದೇಗುಲಗಳನ್ನು ತೆರೆಯಲು ನಿರ್ಧರಿಸಿದ್ದು, ಭಕ್ತರು, ಮಾಸ್ಕ್, ಸಾಮಾಜಿಕ ಅಂತರ, ಸ್ಯಾನಿಟೈಸರ್ ಹಾಕಿಕೊಂಡು ಹೋಗಬೇಕು ಎಂದು ಸೂಚಿಸಿದೆ.