ಗೋರಖ್ ಪುರ: ಮಧ್ಯರಾತ್ರಿ ಹೋಟೆಲ್ ಗೆ ನುಗ್ಗಿದ ಪೊಲೀಸರು, ಹೋಟೆಲ್ ಮಾಲೀಕ ಸಾವು
ಪೊಲೀಸರು ಈ ಸಂದರ್ಭದಲ್ಲಿ ಪಾನಮತ್ತರಾಗಿದ್ದು, ಕೋಪದಲ್ಲಿ ನಾನು ಪೊಲೀಸ್ ಗೆ ಹೊಡೆದುಬಿಟ್ಟಿದ್ದೆ.
Team Udayavani, Sep 29, 2021, 12:50 PM IST
ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತವರು ಜಿಲ್ಲೆ ಗೋರಖ್ ಪುರದಲ್ಲಿ ಮಂಗಳವಾರ(ಸೆಪ್ಟೆಂಬರ್ 29) ತಡರಾತ್ರಿ ಹೋಟೆಲ್ ವೊಂದರ ಮೇಲೆ ದಾಳಿ ನಡೆಸಿದ್ದ ವೇಳೆ ಉದ್ಯಮಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ; ದೀಪಕ್ ರಾವ್ ಕೊಲೆ ಆರೋಪಿಯ ಬಂಧನ
ಪೊಲೀಸರ ಚಿತ್ರಹಿಂಸೆಯಿಂದ ಉದ್ಯಮಿ ಸಾವನ್ನಪ್ಪಿರುವುದಾಗಿ ಕುಟುಂಬ ಸದಸ್ಯರು ಆರೋಪಿಸಿದ್ದು, ಏತನ್ಮಧ್ಯೆ ಪೊಲೀಸರು ತಮ್ಮ ತಪ್ಪನ್ನು ಮುಚ್ಚಿಹಾಕಲು ಇದೊಂದು ಆಕಸ್ಮಿಕ ಘಟನೆ ಎಂದು ಬಿಂಬಿಸಲು ಯತ್ನಿಸುತ್ತಿದ್ದಾರೆ ಎಂದು ದೂರಿದ್ದಾರೆ.
ಹೋಟೆಲ್ ಕೋಣೆಯ ಮೇಲಿಂದ ಕೆಳಕ್ಕೆ ಬಿದ್ದ ಪರಿಣಾಮ ಉದ್ಯಮಿ ಸಾವು ಸಂಭವಿಸಿದೆ ಎಂಬುದು ಪೊಲೀಸರ ವಾದವಾಗಿದೆ. ಉದ್ಯಮಿ ಉತ್ತರಪ್ರದೇಶ ಕಾನ್ಪುರದ ಮನೀಶ್ ಕುಮಾರ್ ಗುಪ್ತಾ ಎಂದು ಗುರುತಿಸಲಾಗಿದೆ.
ಘಟನೆ ವಿವರ: ನಾವು ಮೂವರು ಕೋಣೆಯಲ್ಲಿ ನಿದ್ದೆ ಮಾಡುತ್ತಿದ್ದ ವೇಳೆ ಮಧ್ಯರಾತ್ರಿ 12.30ರ ಸುಮಾರಿಗೆ ಕೋಣೆಯ ಬೆಲ್ ಶಬ್ದ ಕೇಳಿ, ಬಾಗಿಲು ತೆರೆದಾಗ 6-7 ಮಂದಿ ಪೊಲೀಸರು, ರಿಸೆಪ್ಶನ್ ಹುಡುಗ ನಿಂತಿದ್ದ. ಪೊಲೀಸರು ಕೋಣೆಯೊಳಗೆ ಬಂದು, ಗುರುತು ಪತ್ರ ಕೇಳಿದ್ದರು. ನಾನು ಗುರುತು ಪತ್ರ ತೋರಿಸಿದ್ದೆ. ಈ ಗಲಾಟೆ ಕೇಳಿ, ಮನೀಶ್ ಗುಪ್ತಾ ಎದ್ದು ಬಂದಿದ್ದರು. ಆಗ ಗುಪ್ತಾ ಅವರು ಪೊಲೀಸರ ಬಳಿ ಯಾಕೆ ಮಧ್ಯರಾತ್ರಿ ತೊಂದರೆ ಕೊಡುತ್ತಿದ್ದೀರಿ ಎಂದು ಪ್ರಶ್ನಿಸಿರುವುದಾಗಿ ಹರ್ವೀರ್ ಸಿಂಗ್ ಎಂಬಾತ ಸುದ್ದಿಗಾರರಿಗೆ ತಿಳಿಸಿದ್ದಾನೆ.
ಪೊಲೀಸರು ಈ ಸಂದರ್ಭದಲ್ಲಿ ಪಾನಮತ್ತರಾಗಿದ್ದು, ಕೋಪದಲ್ಲಿ ನಾನು ಪೊಲೀಸ್ ಗೆ ಹೊಡೆದುಬಿಟ್ಟಿದ್ದೆ. ಕೆಲವರ ಬಳಿ ಗನ್ ಕೂಡಾ ಇತ್ತು. ನನ್ನನ್ನು ಹೊರಗೆ ಒಯ್ದು ಹೊಡೆಯುತ್ತಿದ್ದಾಗ, ಮನೀಶ್ ಗುಪ್ತಾ ಅವರನ್ನು ಪೊಲೀಸರು ಎಳೆದೊಯ್ಯುತ್ತಿದ್ದು, ಅವರ ಮುಖ, ದೇಹದಿಂದ ರಕ್ತ ಒಸರುತ್ತಿತ್ತು ಎಂದು ಹರ್ವೀರ್ ಸಿಂಗ್ ವಿವರಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ