ಲಕ್ನೋ: ಊಟದ ಜತೆ ಸಲಾಡ್ ಕೊಡಲಿಲ್ಲ ಎಂದು ಕುಡಿದ ಅಮಲಿನಲ್ಲಿ ಪತ್ನಿಯನ್ನೇ ಕೊಂದ ಪತಿ!
ಘಟನೆಗೆ ಸಂಬಂಧಿಸಿದಂತೆ ಬಾಬರಿ ಪೊಲೀಸ್ ಠಾಣೆಯಲ್ಲಿ ಮುರಳಿ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ
Team Udayavani, Jun 5, 2021, 11:51 AM IST
ಲಕ್ನೋ: ಊಟದ ಜತೆ ಸಲಾಡ್ (ಹಸಿ ತರಕಾರಿ ಮಿಶ್ರಣ) ಕೊಡಲಿಲ್ಲ ಎಂದು ಆಕ್ರೋಶಗೊಂಡ ಪತಿ ಪತ್ನಿಯನ್ನು ಹತ್ಯೆಗೈದಿರುವ ಘಟನೆ ಉತ್ತರಪ್ರದೇಶದ ಶಾಮ್ಲಿ ಪ್ರದೇಶದಲ್ಲಿ ನಡೆದಿದೆ. ಕುಡಿದ ಅಮಲಿನಲ್ಲಿದ್ದ ಪತಿ ಈ ಕೃತ್ಯ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಮೈಸೂರಿನಲ್ಲಿ ಐಎಎಸ್ ಅಧಿಕಾರಿಗಳ ಕಿತ್ತಾಟ: ಶಿಲ್ಪಾ ನಾಗ್ ಪರ ಬ್ಯಾಟ್ ಬೀಸಿದ ಸಚಿವ ಈಶ್ವರಪ್ಪ.
ಟೈಮ್ಸ್ ಆಫ್ ಇಂಡಿಯಾದ ವರದಿ ಪ್ರಕಾರ, ಆರೋಪಿಯನ್ನು ಮುರಳಿ ಕುಮಾರ್ ಎಂದು ಗುರುತಿಸಲಾಗಿದೆ. ಮಂಗಳವಾರ ರಾತ್ರಿ ವಿಪರೀತ ಮದ್ಯಪಾನ ಮಾಡಿ ಮನೆಗೆ ಸಂದರ್ಭದಲ್ಲಿ ಊಟ ಮತ್ತು ಸಲಾಡ್ ಕೊಡುವಂತೆ ಪತ್ನಿಗೆ ತಿಳಿಸಿದ್ದ. ಆದರೆ ಪತ್ನಿ ಊಟ ಮಾತ್ರ ನೀಡಿದ್ದು, ಸಲಾಡ್ ಕೊಟ್ಟಿರಲಿಲ್ಲವಾಗಿತ್ತು. ಇದರಿಂದ ಕೋಪಗೊಂಡ ಕುಮಾರ್ ಪತ್ನಿಗೆ ಅವಾಚ್ಯ ಶಬ್ದಗಳಿಂದ ಬೈದು ಮನೆಯಿಂದ ಹೊರಟು ಹೋಗಿರುವುದಾಗಿ ವರದಿ ವಿವರಿಸಿದೆ.
ತಡರಾತ್ರಿ ಮತ್ತೆ ಮನೆಗೆ ವಾಪಸ್ ಆದ ಕುಮಾರ್ ನಿದ್ರಿಸುತ್ತಿದ್ದ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದ. ಅಷ್ಟೇ ಅಲ್ಲ 22 ವರ್ಷದ ಮಗನ ಮೇಲೂ ಹಲ್ಲೆ ನಡೆಸಿದ್ದ. ಪತ್ನಿ ಹಾಗೂ ಮಗನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪತ್ನಿ ಸುದೇಶ್ ದೇವಿ ಕೊನೆಯುಸಿರೆಳೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಬಾಬರಿ ಪೊಲೀಸ್ ಠಾಣೆಯಲ್ಲಿ ಮುರಳಿ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ದೇವಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ವರದಿ ಹೇಳಿದೆ. ಮಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ವರದಿ ತಿಳಿಸಿದೆ.