MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು
Team Udayavani, May 21, 2024, 11:12 PM IST
ಬೆಂಗಳೂರು: ಚುನಾವಣೆಯಲ್ಲಿ ಸೋತ ಘಟಾನುಘಟಿಗಳೂ ಸೇರಿ ಪ್ರಭಾವಿಗಳು ಮೇಲ್ಮನೆ ಪ್ರವೇಶಕ್ಕೆ ನಡೆಸುತ್ತಿರುವ ಲಾಬಿ ಬಿಜೆಪಿ ನಾಯಕರಿಗೆ ತಲೆಬಿಸಿ ಸೃಷ್ಟಿಸಿದ್ದು, ಮೂರು ಸ್ಥಾನಕ್ಕಾಗಿ ಮೂವತ್ತಕ್ಕೂ ಹೆಚ್ಚು ಜನರು ಆಕಾಂಕ್ಷಿಗಳಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಸಂಭಾವ್ಯರ ಪಟ್ಟಿಯನ್ನು ದೆಹಲಿಗೆ ಕಳುಹಿಸುವುದಕ್ಕಾಗಿ ಬುಧವಾರ ಬಿಜೆಪಿಯ ಪ್ರಮುಖರ ಸಭೆ ನಡೆಯಲಿದ್ದು, ಆಕಾಂಕ್ಷಿಗಳೆಲ್ಲರ ಹೆಸರನ್ನು ದಿಲ್ಲಿ ವರಿಷ್ಠರಿಗೆ ಕಳುಹಿಸಲು ನಿರ್ಧರಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ಸಂಘಟನ ಪ್ರಧಾನ ಕಾರ್ಯದರ್ಶಿ ರಾಜೇಶ್ ನೇತೃತ್ವದಲ್ಲಿ ಪಕ್ಷದ ಪ್ರಮುಖರ ಸಭೆಯಲ್ಲಿ ಸಂಭಾವ್ಯರ ಪಟ್ಟಿ ತಯಾರಿಸಲಾಗುತ್ತದೆ. ಮುರುಗೇಶ್ ನಿರಾಣಿ, ಮಾಧುಸ್ವಾಮಿ, ಸಿ.ಟಿ. ರವಿ, ನಳಿನ್ ಕುಮಾರ್ ಕಟೀಲು ಅವರನ್ನೂ ಒಳಗೊಂಡಂತೆ ಮಾಜಿ ಶಾಸಕರು ಹಾಗೂ ಸಂಸದರು ವಿಧಾನ ಪರಿಷತ್ತಿಗೆ ಆಕಾಂಕ್ಷಿಗಳಾಗಿದ್ದಾರೆ.
ಯಾರಿಗೆ ಅವಕಾಶ ನೀಡಿದರೂ ಉಳಿದವರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಹೊಣೆಗಾರಿಕೆಯನ್ನು ಹೈಕಮಾಂಡ್ಗೆ ವರ್ಗಾಯಿಸಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
MUST WATCH
ಹೊಸ ಸೇರ್ಪಡೆ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.