ನಗರ ನಕ್ಸಲರು ಈಗಲೂ ಸಕ್ರಿಯವಾಗಿದ್ದಾರೆ…ಎಚ್ಚರ ವಹಿಸಿ: ಪರಿಸರ ಖಾತೆ ಸಚಿವರಿಗೆ ಪ್ರಧಾನಿ ಮೋದಿ
ಗುಜರಾತ್ ನ ನರ್ಮದಾ ಜಿಲ್ಲೆಯ ಏಕತಾ ನಗರದಲ್ಲಿ ಪರಿಸರ ಖಾತೆ ಸಚಿವರ ರಾಷ್ಟ್ರೀಯ ಸಮ್ಮೇಳನ
Team Udayavani, Sep 23, 2022, 3:01 PM IST
ನವದೆಹಲಿ: ರಾಜಕೀಯ ಬೆಂಬಲ ಹೊಂದಿರುವ ನಗರ ನಕ್ಸಲರು ಮತ್ತು ಅಭಿವೃದ್ಧಿ ವಿರೋಧಿ ಶಕ್ತಿಗಳು ಗುಜರಾತ್ ನ ನರ್ಮದಾ ನದಿಯ ಸರ್ದಾರ್ ಸರೋವರ್ ಅಣೆಕಟ್ಟು ನಿರ್ಮಾಣ ಯೋಜನೆಯನ್ನು ಹಲವು ವರ್ಷಗಳ ಕಾಲ ಸ್ಥಗಿತಗೊಳಿಸಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಇದನ್ನೂ ಓದಿ:ಹೀರೋ ಆದ್ರು ಕೆಜಿಎಫ್ ತಾತ..! ನ್ಯಾನೋದಲ್ಲಿ ನಾರಾಯಣಪ್ಪ ಎಂಟ್ರಿ
ಸರ್ದಾರ್ ಸರೋವರ್ ಅಣೆಕಟ್ಟು ನಿರ್ಮಿಸುವುದರಿಂದ ಪರಿಸರಕ್ಕೆ ಹಾನಿಯಾಗಲಿದೆ ಎಂಬುದಾಗಿ ನಗರ ನಕ್ಸಲರು ಪ್ರಚಾರ ಮಾಡಿರುವುದಾಗಿ ಹೇಳಿದರು.
ಗುಜರಾತ್ ನ ನರ್ಮದಾ ಜಿಲ್ಲೆಯ ಏಕತಾ ನಗರದಲ್ಲಿ ಪರಿಸರ ಖಾತೆ ಸಚಿವರ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡುತ್ತ, ನಗರ ನಕ್ಸಲೀಯರು ಮತ್ತು ಅಭಿವೃದ್ಧಿ ವಿರೋಧಿ ಶಕ್ತಿಗಳಿಂದಾಗಿ ನರ್ಮದಾ ಅಣೆಕಟ್ಟು ನಿರ್ಮಾಣ ವಿಳಂಬವಾಗುವ ಮೂಲಕ ಬೃಹತ್ ಪ್ರಮಾಣದ ಹಣ ನಷ್ಟವಾಗುವಂತಾಗಿತ್ತು. ಇದೀಗ ಅಣೆಕಟ್ಟು ನಿರ್ಮಾಣಗೊಂಡಿದ್ದು, ಈಗ ನಗರ ನಕ್ಸಲೀಯರ ಆರೋಪದ ಬಗ್ಗೆ ನೀವೇ ಚೆನ್ನಾಗಿ ವಿಶ್ಲೇಷಿಸಬಹುದಾಗಿದೆ ಎಂದು ಹೇಳಿದರು.
ಈ ನಗರ ನಕ್ಸಲೀಯರು ಈಗಲೂ ಸಕ್ರಿಯರಾಗಿದ್ದಾರೆ. ಅಭಿವೃದ್ಧಿ ಹಾಗೂ ಜೀವನ ಸುಗಮಗೊಳಿಸಲು ಉದ್ದೇಶಿಸಿರುವ ಯೋಜನೆಗಳನ್ನು ಪರಿಸರದ ಹೆಸರಿನಲ್ಲಿ ಅನಗತ್ಯವಾಗಿ ಸ್ಥಗಿತಗೊಳ್ಳದಂತೆ ಎಚ್ಚರವಹಿಸಬೇಕೆಂದು ನಾನು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದ ಪ್ರಧಾನಿ ಮೋದಿ, ಅಂತಹ ಜನರ ಪಿತೂರಿಯನ್ನು ಸಮತೋಲನದಿಂದ ಎದುರಿಸಬೇಕಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು