ಕಾಫಿನಾಡಿನ ಕೆಸರು ಗದ್ದೆ ಸ್ಪರ್ಧೆಗೆ ವಿಶ್ವದ ವೇಗದ ಓಟಗಾರ ಉಸೇನ್ ಬೋಲ್ಟ್..!


Team Udayavani, Sep 14, 2021, 2:54 PM IST

ಕಾಫಿನಾಡಿನ ಕೆಸರು ಗದ್ದೆ ಸ್ಪರ್ಧೆಗೆ ವಿಶ್ವದ ವೇಗದ ಓಟಗಾರ ಉಸೇನ್ ಬೋಲ್ಟ್..!

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುಳ್ಳೋಡಿಯಲ್ಲಿ ಕೆಸರು ಗದ್ದೆ ಓಟದ ಸ್ಪರ್ಧೆ ಇದ್ದು ವಿಶ್ವದ ಪ್ರಸಿದ್ದ ಓಟಗಾರ ಉಸೇನ್ ಬೋಲ್ಟ್ ಸ್ಪರ್ಧಿಸುತ್ತಿದ್ದು, ಈಗಾಗಲೇ ತರಬೇತಿ ಶುರು ಮಾಡಿದ್ದಾರೆ. ಹೀಗೊಂದು ಪೋಸ್ಟ್ ಕಾಫಿನಾಡಿಗರ ಮೊಬೈಲ್​ನ ವಾಟ್ಸಾಫ್, ಫೇಸ್ಬುಕ್​ಗಳಲ್ಲಿ ಹರಿದಾಡುತ್ತಿದ್ದು ಜನರು ಅಚ್ಚರಿಗೊಂಡಿದ್ದಾರೆ. ನಿಜಕ್ಕೂ ವಿಶ್ವದ ವೇಗದ ಓಟಗಾರ ಚಿಕ್ಕಮಗಳೂರಿಗೆ ಬರ್ತಾರಾ..? ಅಂತಾ ಆಶ್ಚರ್ಯ ಚಕಿತರಾಗಿದ್ದಾರೆ. ಅಷ್ಟಕ್ಕೂ ಏನಿದು ಪೋಸ್ಟ್..? ಏನಿದರ ಮರ್ಮ ಅಂತೀರಾ..?

ಉಸೇನ್ ಬೋಲ್ಟ್ ಭಾವಚಿತ್ರವಿಟ್ಟು ಜನಪ್ರತಿನಿಧಿಗಳ ಕಾಲೆಳೆದ ಜನರು..!
ವಿಶ್ವದ ವೇಗದ ಓಟಗಾರ ಉಸೇನ್ ಬೋಲ್ಟ್ ಹೆಸರನ್ನ ಯಾರು ಕೇಳಿಲ್ಲ ಹೇಳಿ. ಚಿರತೆ ವೇಗವನ್ನೇ ಮೀರಿಸೋ ರೀತಿಯಲ್ಲಿ ಓಡಿ ಎಲ್ಲರನ್ನ ಹುಬ್ಬೇರಿಸುವ ಹಾಗೆ ಮಾಡಿದ ಖ್ಯಾತಿ ಉಸೇನ್ ಬೋಲ್ಟ್ ಅವರದ್ದು. ಅಂತಹ ಉಸೇನ್ ಬೋಲ್ಟ್ ಕಾಫಿನಾಡಿನ ಕುಗ್ರಾಮವೊಂದಕ್ಕೆ ಬರ್ತಾರೆ ಅನ್ನೋದು ಸತ್ಯಕ್ಕೆ ದೂರವಾದ ಮಾತು. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುಳ್ಳೋಡಿ ರಸ್ತೆ ಸ್ಥಿತಿಯಂತೂ ಕೇಳೋದೇ ಬೇಡ. ಆ ರಸ್ತೆಯನ್ನ ನೋಡಿದ್ರೆ ಯಾರೂ ಕೂಡ ಇದು ರಸ್ತೆ ಅಂತಾ ಹೇಳೋದಿಲ್ಲ, ರಸ್ತೆ ತುಂಬಾ ಗುಂಡಿಗಳೇ, ಕೆಸರು ಗದ್ದೆಯ ರೀತಿ ಬದಲಾಗಿರೋ ರಸ್ತೆಯಲ್ಲಿ ಓಡಾಡಬೇಕು ಅಂದ್ರೆ ಧಮ್, ತಾಕತ್ತು ಇರ್ಲೇ ಬೇಕು.

ಯಾಕಂದ್ರೆ ಸಾಮಾನ್ಯ ವ್ಯಕ್ತಿಗಳು ಈ ರಸ್ತೆಯಲ್ಲಿ ಓಡಾಡೋಕೆ ಸಾಧ್ಯವೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಬೈಕ್​ನಲ್ಲಿ ಓಡಾಡಿದ್ರೆ ಬೈಕ್ ಸಮೇತ ಬೀಳೋದು ಗ್ಯಾರಂಟಿ. ನಡೆದುಕೊಂಡು ಹೋಗಲು ಕೂಡ ಅಸಾಧ್ಯ. ಈ ಬೆಳವಣಿಗೆಗಳಿಂದ ರೋಸಿಹೋಗಿರುವ ಸ್ಥಳೀಯರು, ಹಲವಾರು ವರ್ಷಗಳಿಂದ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಮನವಿ ಮಾಡಿ ಸೋತು ಹೋಗಿದ್ದಾರೆ. ಕೊನೆಗೆ ಯಾರು ಸ್ಪಂದಿಸದಿದ್ದಾಗ ವಿಶ್ವದ ವೇಗದ ಓಟಗಾರ ಉಸೇನ್ ಬೋಲ್ಟ್ ಭಾವಚಿತ್ರವನ್ನ ಹದೆಗೆಟ್ಟ ರಸ್ತೆ ಪೋಟೋಗೆ ಜೋಡಿಸಿ ವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಳ್ಳೋಡಿಯಲ್ಲಿ ಕೆಸರುಗದ್ದೆ ಸ್ಪರ್ಧೆ ಇದೆ, ಉಸೇನ್ ಬೋಲ್ಟ್ ಬರ್ತಿದ್ದಾರೆ. ಉಳಿದ ಸ್ಪರ್ಧಿಗಳಾದ ಗ್ರಾಮ ಪಂಚಾಯತ್ ಸದಸ್ಯರು, ತಾಲೂಕ್ ಪಂಚಾಯತ್ ಸದಸ್ಯರು, ಎಂಪಿ, ಎಂಎಲ್​ಎಗಳಿಗೋಸ್ಕರ ಕಾಯುತ್ತಿದ್ದೇವೆ ಅಂತಾ ಕೆಲಸ ಮಾಡಿಕೊಡದ ಜನಪ್ರತಿನಿಧಿಗಳು, ಅಧಿಕಾರಿಗಳ ಕಾಲೆಳೆಯುವ ಕೆಲಸ ಮಾಡಿದ್ದಾರೆ.

40 ವರ್ಷಗಳಿಂದ ದುರಸ್ತಿ ಕಾಣದ ರಸ್ತೆ.! ಕಣ್ಣಿದ್ರೂ ಕುರುಡಾದ ಜನಪ್ರತಿನಿಧಿಗಳು..!
ಸದ್ಯ ಕಳಸ ತಾಲೂಕಿನ ಮುಳ್ಳೋಡಿ ಗ್ರಾಮದ ರಸ್ತೆಯ ಈ ಕಥೆ-ವ್ಯಥೆ ಇಂದು ನಿನ್ನೆಯದಲ್ಲ. ಸುಮಾರು 40 ವರ್ಷಗಳಿಂದ ಈ ರಸ್ತೆಗೆ ದುರಸ್ತಿ ಭಾಗ್ಯವೇ ಸಿಕ್ಕಿಲ್ಲ. ಅದರಲ್ಲೂ ಮಳೆಗಾಲ ಬಂತಂದ್ರೆ ಸಂಪೂರ್ಣ ಕೆಸರುಮಯವಾಗಿ ಬದಲಾಗುವ ಈ ರಸ್ತೆಯಲ್ಲಿ ಓಡಾಡೋಕೆ ಸಾಧ್ಯವೇ ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿ ಬಿಡುತ್ತೆ. ಮಳೆಗಾಲದಲ್ಲಿ ಕೆಸರುಮಯ ಆಗೋ ರಸ್ತೆ, ಬೇಸಿಗೆ ಕಾಲದಲ್ಲಿ ಕಂಪ್ಲೀಟ್ ಧೂಳುಮಯವಾಗಿ ಬಿಡುತ್ತೆ. ಹೀಗೆ ವರ್ಷವಿಡೀ ಒಂದಿಲ್ಲೊಂದು ಸಮಸ್ಯೆಯಲ್ಲಿ ಸಿಲುಕಿಕೊಂಡು ಜನರು ನರಕಯಾತನೆ ಅನುಭವಿಸುತ್ತಲೇ ಇದ್ದಾರೆ. ನೂರಕ್ಕೂ ಹೆಚ್ಚು ಮನೆಗಳಿರೋ ಈ ಗ್ರಾಮದಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಶಾಲಾ ಕಾಲೇಜುಗಳಿಗೆ ತೆರಳಲು ಪರದಾಟ ನಡೆಸುವಂತಾಗಿದೆ. ಅಲ್ಲದೇ ಆನ್ ಲೈನ್ ಕ್ಲಾಸ್ ಗೆ ನೆಟ್ವರ್ಕ್ ಹುಡುಕಿಕೊಂಡು ಒಂದೆಡೆಯಿಂದ ಮತ್ತೊಂದೆಡೆಗೆ ಹೋಗಲು ಚಿಕ್ಕ ಚಿಕ್ಕ ಪುಟಾಣಿಗಳು ಹರಸಾಹಸ ಪಡುತ್ತಿದ್ದಾರೆ.

ವೃದ್ಧರು ಆಸ್ಪತ್ರೆಗೆ ತೆರಳಲು ಸಂಕಟ ಅನುಭವಿಸುತ್ತಿದ್ದಾರೆ. ಸದ್ಯ ಸಂಸೆಯಿಂದ ಮುಳ್ಳೋಡಿಗೆ ಸಂಪರ್ಕ ಕಲ್ಪಿಸುವ 7 ಕೀಮೀ ರಸ್ತೆ ಸಂಪೂರ್ಣ ಕೆಸರು ರಾಡಿಯಾಗಿದೆ. ಹೀಗೆ ಸಮಸ್ಯೆಯ ಸುಳಿಯಲ್ಲಿ ಸಿಲುಕಿಕೊಂಡು ಜನರು ಪರಿತಪಿಸುತ್ತಿದ್ರೂ ಜನಪ್ರತಿನಿಧಿಗಳು, ಅಧಿಕಾರಿಗಳು ಮಾತ್ರ ತಲೆಕೆಡಿಸಿಕೊಳ್ಳುತ್ತಿಲ್ಲ. ಹೀಗಾಗಿ ಹದೆಗೆಟ್ಟ ರಸ್ತೆಗೆ ಉಸೇನ್ ಬೋಲ್ಟ್ ಭಾವಚಿತ್ರ ಜೋಡಿಸಿ ಜನಪ್ರತಿನಿಧಿಗಳು, ಅಧಿಕಾರಿಗಳ ಮಾನ-ಮರ್ಯಾದೆಯನ್ನ ಕಳೆದಿದ್ದಾರೆ. ಇನ್ನಾದ್ರೂ ಸಂಬಂಧಪಟ್ಟವರು ಇತ್ತ ಗಮನಹರಿಸ್ತಾರ..? ಕಾಲವೇ ಉತ್ತರ ಕೊಡಬೇಕು.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.