ಆದ್ಯತೆ ಮೇಲೆ ಅನುದಾನ ಬಳಸಿ: ಸಚಿವ ಕೋಟ

ಸಾಮಾಜಿಕ ಸಾಮರಸ್ಯ ಮೂಡಿಸಲು ದೀನದಯಾಳ್‌ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯ

Team Udayavani, Dec 17, 2022, 7:30 AM IST

ಆದ್ಯತೆ ಮೇಲೆ ಅನುದಾನ ಬಳಸಿ: ಸಚಿವ ಕೋಟ

ಬೆಂಗಳೂರು: ಎಸ್‌ಸಿ/ಎಸ್‌ಪಿ-ಟಿಎಸ್‌ಪಿ ಯೋಜನೆಯಡಿ 2022-23ನೇ ಸಾಲಿನಲ್ಲಿ ಒಟ್ಟು 29,165.81 ಕೋಟಿ ರೂ.ಅನುದಾನ ಒದಗಿಸಲಾಗಿದೆ. ಇದುವರೆಗೆ 19,009.71 ಕೋಟಿ ರೂ. ಬಿಡುಗಡೆ ಯಾಗಿದ್ದು, 14,166.72 ಕೋಟಿ ರೂ. ವ್ಯಯಿಸಲಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಪ್ರಸಕ್ತ ಸಾಲಿನಲ್ಲಿ ಎಸ್‌ಸಿಎಸ್‌ಪಿ ಯೋಜನೆ ಯಡಿ 20,843.03 ಕೋಟಿ ಹಾಗೂ ಟಿಎಸ್‌ಪಿ ಯೋಜನೆಯಡಿ 8,322.78 ಕೋಟಿ ರೂ. ಸೇರಿ ಒಟ್ಟು 29,165.81 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಇದರಲ್ಲಿ ಎಸ್‌ಸಿಎಸ್‌ಪಿ ಅಡಿ 13,483.79 ಕೋಟಿ ರೂ. ಬಿಡುಗಡೆಯಾಗಿದ್ದು, 10,783.47 ಕೋಟಿ ರೂ. ವೆಚ್ಚ ವಾಗಿದೆ. ಇದು ಹಂಚಿಕೆಯ ಶೇ.52ರಷ್ಟು ಮತ್ತು ಬಿಡುಗಡೆಯ ಶೇ.80ರಷ್ಟು ಆಗಿದೆ ಎಂದರು.

ಅದೇ ರೀತಿ ಟಿಎಸ್‌ಪಿ ಅಡಿ ಯಲ್ಲಿ 5,165.92 ಕೋಟಿ ರೂ. ಬಿಡು ಗಡೆಯಾಗಿದ್ದು, 3,383.25 ಕೋಟಿ ವೆಚ್ಚವಾಗಿದೆ. ಇದು ಹಂಚಿಕೆಯ ಶೇ.41 ಹಾಗೂ ಬಿಡು ಗಡೆಯ ಶೇ.65ರಷ್ಟು ಆಗಿದೆ. ಎಸ್‌ಸಿ/ಎಸ್‌ಪಿ ಹಾಗೂ ಟಿಎಸ್‌ಪಿ ಯೋಜನೆಯ ಅನುದಾನವನ್ನು ಆದ್ಯತೆ ಮೇಲೆ ಬಳಕೆ ಮಾಡುವಂತೆ ವಿವಿಧ ಇಲಾ ಖೆಗಳ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದು ತಿಳಿಸಿದರು.

ಎಸ್ಸಿ, ಎಸ್ಟಿ, ಹಿಂದುಳಿದ ಮತ್ತು ಅಲ್ಪಸಂಖ್ಯಾಕ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸಾಮರಸ್ಯ ಮೂಡಿಸಲು ದೀನದಯಾಳ್‌ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯ ಎಂಬ ಹೊಸ ಯೋಜನೆಯಡಿ ಬೆಳಗಾವಿ, ಹುಬ್ಬಳ್ಳಿ – ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ತಲಾ ಒಂದು ಸಾವಿರ ಸಾಮರ್ಥ್ಯದ ಬಹುಮ ಹಡಿಯ ವಿದ್ಯಾರ್ಥಿ ನಿಲಯ ಸಮುಚ್ಚಯಗಳನ್ನು 250 ಕೋಟಿ ರೂಪಾಯಿ ಮೊತ್ತದಲ್ಲಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಾಡಿಗೆ ಕಟ್ಟಡಗಳಲ್ಲಿ ವಿದ್ಯಾರ್ಥಿ  ನಿಲಯಗಳನ್ನು ಪ್ರಾರಂಭಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಇ-ಕಾಮರ್ಸ್‌ ಅಡಿ ಉದ್ಯೋಗ
ಎಸ್ಸಿ, ಎಸ್ಟಿ ನಿರುದ್ಯೋಗಿಗಳು ಇ-ಕಾಮರ್ಸ್‌ ಅಡಿ ಆಹಾರ ಮತ್ತು ಇತರ ವಸ್ತುಗಳನ್ನು ಗ್ರಾಹಕರಿಗೆ ತಲುಪಿ ಸಲು ವಾಹನ ಸೌಲಭ್ಯಕ್ಕಾಗಿ ವಿದ್ಯುತ್‌, ಇತರ ದ್ವಿಚಕ್ರ ವಾಹನಗಳಿಗೆ ಗರಿಷ್ಠ 50 ಸಾ. ರೂ.ಸಹಾಯಧನ ಮತ್ತು 20 ಸಾ.ರೂ. ಸಾಲ ನೀಡ ಲಾಗುತ್ತಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ರಂತೆ ಒಟ್ಟು 22,400 ಫ‌ಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ಬಾಕಿ ಪಾವತಿಗೆ ಕ್ರಮ
ರಾಜ್ಯ ಅಕ್ಕಿ ಗಿರಣಿ ಮಾಲಕರಿಗೆ ಸರಕಾರದಿಂದ ಬಾಕಿ ಇರುವ 7 ಕೋಟಿ ರೂ. ಪಾವತಿ ವಿಷಯ ಕುರಿತು ಮೂರ್‍ನಾಲ್ಕು ದಿನಗಳಲ್ಲಿ ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ವಿಕಾಸಸೌಧದಲ್ಲಿ ಶುಕ್ರವಾರ ಅಕ್ಕಿ ಗಿರಣಿ ಮಾಲಿಕರ ಸಂಘದ ವಿವಿಧ ಜಿಲ್ಲೆಗಳ ಅಧ್ಯಕ್ಷರ ಜತೆ ಪಡಿತರದಾರರಿಗೆ ಕುಚಲಕ್ಕಿ ವಿತರಣೆ ಹಾಗೂ ಇನ್ನಿತರ ಸಮಸ್ಯೆಗಳ ಕುರಿತು ನಡೆದ ಸಭೆಯಲ್ಲಿ ಅವರು ಈ ಭರವಸೆ ನೀಡಿದರು.

33 ಸಾವಿರ ಅರ್ಜಿಗಳು
2022-23ನೆ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಗಂಗಾಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆ ಬಾವಿಗಾಗಿ 17 ಸಾವಿರ ಅರ್ಜಿಗಳು, ಹಿಂದು ಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ 15-16 ಸಾವಿರ ಅರ್ಜಿಗಳು ಬಂದಿವೆ. ಅವುಗಳನ್ನು ಶಾಸಕರ ಅಧ್ಯಕ್ಷತೆಯ ಸಮಿತಿಗಳಿಗೆ ಕಳು ಹಿಸಿಕೊಡಲಾಗಿದ್ದು, ಅವರು ಆಯ್ಕೆ ಮಾಡಿ ಕಳುಹಿಸಿದ ಬಳಿಕ ಕೊಳವೆ ಬಾವಿ ಕೊರೆಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

23 ಲಕ್ಷ ಕುಟುಂಬಗಳಿಗೆ ಉಚಿತ ವಿದ್ಯುತ್‌
2022-23ನೆ ಸಾಲಿನಿಂದ ಎಸ್ಸಿ, ಎಸ್ಟಿ ಬಿಪಿಎಲ್‌ ಕುಟುಂಬಗಳಿಗೆ 75 ಯುನಿಟ್‌ ವರೆಗೆ ಉಚಿತ ವಿದ್ಯುತ್‌ ಒದಗಿಸಲಾಗುತ್ತಿದೆ. ಇದರಿಂದ ರಾಜ್ಯದ 23 ಲಕ್ಷ ಕುಟುಂಬಗಳಿಗೆ 75 ಯುನಿಟ್‌ ಉಚಿತ ವಿದ್ಯುತ್‌ ಸಿಗಲಿದೆ. ಎಸ್ಸಿ-ಎಸ್ಟಿ ಒಟ್ಟು ಜನಸಂಖ್ಯೆಯ ಶೇ.82ರಷ್ಟು ಮಂದಿಗೆ 75 ಯುನಿಟ್‌ ವಿದ್ಯುತ್‌ ಸೌಲಭ್ಯ ದೊರಕಲಿದೆ ಎಂದು ಸಚಿವರು ಮಾಹಿತಿ ನೀಡಿದರು.

ಡಾ| ಬಿ.ಆರ್‌. ಅಂಬೇಡ್ಕರ್‌ ಅವರು ಕರ್ನಾಟಕದಲ್ಲಿ ಭೇಟಿ ನೀಡಿರುವ 10 ಪ್ರಮುಖ ಸ್ಥಳಗಳನ್ನು ಗುರುತಿಸಿ ಅವುಗಳನ್ನು ಅಭಿವೃದ್ಧಿಪಡಿಸಲು ಪ್ರಸಕ್ತ ಸಾಲಿನಲ್ಲಿ 20 ಕೋಟಿ ರೂ. ಅನುದಾನ ಒದಗಿಸಲಾಗುತ್ತಿದೆ.
- ಕೋಟ ಶ್ರೀನಿವಾಸ ಪೂಜಾರಿ, ಸಚಿವರು

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.