ನೀರ್ಗಲ್ಲುಗಳ ಸ್ಫೋಟ ಇನ್ನೂ ಸಿಗುತ್ತಿಲ್ಲ ಸರಿಯಾದ ಕಾರಣ


Team Udayavani, Feb 9, 2021, 6:15 AM IST

ನೀರ್ಗಲ್ಲುಗಳ ಸ್ಫೋಟ ಇನ್ನೂ ಸಿಗುತ್ತಿಲ್ಲ ಸರಿಯಾದ ಕಾರಣ

ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿ ಮಠದಲ್ಲಿ ಸಂಭವಿಸಿದ ನೀರ್ಗಲ್ಲುಗಳ ಸ್ಫೋಟ 20ಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದಿರುವುದು, ಹಾಗೆಯೇ ಇನ್ನೂ 200ಕ್ಕೂ ಹೆಚ್ಚು ಮಂದಿ ಕಾಣೆಯಾಗಿರುವುದು ದುಃಖಕರ ಸಂಗತಿ. ಪರಿಸರ ಮತ್ತು ಮಾನವನ ನಡುವಿನ ಘರ್ಷಣೆ, ಹಾಗೆಯೇ ಜಾಗತಿಕ ತಾಪಮಾನ ಏರಿಕೆಯ ಪರಿಣಾಮದಿಂದಾಗಿ ಈ ಘಟನೆ ನಡೆದಿದೆ ಎಂಬುದು ಕಟು ಸತ್ಯ.

2013ರಲ್ಲಿ ರುದ್ರಪ್ರಯಾಗ್‌ನಲ್ಲಿ ನಡೆದಿದ್ದ ಭಾರೀ ಪ್ರವಾಹದ ಕಹಿ ನೆನಪು ಇನ್ನೂ ಜನರ ಮನಸ್ಸಲ್ಲಿ ಹಾಗೆಯೇ ಇದೆ. ಅಂದು ಕೂಡ ಭಾರೀ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ಸಾವಿರಾರು ಮಂದಿ ಸಾವನ್ನಪ್ಪಿದ್ದರು. ಅದೇ ರೀತಿ ರವಿವಾರ‌ ಜೋಶಿ ಮಠದಲ್ಲಿ ಸಂಭವಿಸಿದ ಘಟನೆ ಕೂಡ ಭಾರೀ ಸಾವು ನೋವಿಗೂ ಕಾರಣವಾಗಿದೆ. ಸದ್ಯಕ್ಕೆ 20 ಮಂದಿಯ ಶವಗಳಷ್ಟೇ ಸಿಕ್ಕಿದ್ದು, ಇನ್ನೂ 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಹೇಳುತ್ತಿದೆ ಉತ್ತರಾಖಂಡ ಸರಕಾರದ ವರದಿಗಳು.

ಹವಾಮಾನ ತಜ್ಞರು ಘಟನೆಗೆ ಜಾಗತಿಕ ತಾಪಮಾನದಲ್ಲಿ ಆಗುತ್ತಿರುವ ಬದಲಾವಣೆಯೇ ಕಾರಣ ಎಂದು ಹೇಳಿದ್ದಾರೆ. ಆದರೆ, ಚಳಿಗಾಲದಲ್ಲಿ ನೀರ್ಗಲ್ಲುಗಳು ಕರಗಿದ್ದೇಗೆ ಎಂಬ ಬಗ್ಗೆ ಯಾರ ಬಳಿಯೂ ಉತ್ತರವಿಲ್ಲ. ಒಂದು ಮೂಲಗಳ ಪ್ರಕಾರ, ಭೂಕುಸಿತ ಮತ್ತು ಹಿಮಪಾತದಿಂದಾಗಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಅಂದರೆ, ತಾತ್ಕಾಲಿಕವಾಗಿ ಕೆರೆಯೊಂದು ರೂಪಿತವಾಗಿದ್ದು, ಒಂದೇ ಬಾರಿಗೆ ಸ್ಫೋಟಗೊಂಡ ಕಾರಣದಿಂದಾಗಿ ಈ ಘಟನೆ ನಡೆದಿರಬಹುದು ಎಂಬುದೂ ವಿಜ್ಞಾನಿಗಳ ಅಭಿಪ್ರಾಯ.

ಆದರೂ ಹವಾಮಾನ ಇಲಾಖೆಗೂ ಕಿಂಚಿತ್ತೂ ಮುನ್ಸೂಚನೆ ಸಿಗದೇ ಆಗಿರುವ ಈ ಘಟನೆ ಎಂಥವರ ಎದೆಯನ್ನೂ ನಡುಗಿಸುವುದು ಸಹಜ. ಹೀಗಾಗಿಯೇ ಉತ್ತರಾಖಂಡ ಸರಕಾರ, ಘಟನೆಗೆ ನಿಜವಾದ ಕಾರಣವೇನು ಎಂಬ ಬಗ್ಗೆ ತಿಳಿಯಲು ಅಧ್ಯಯನ ನಡೆಸಲು ಮುಂದಾಗಿದೆ. ಇದಕ್ಕಾಗಿ ಇಸ್ರೋ, ಡಿಆರ್‌ಡಿಒದ ಸಹಾಯ ಪಡೆಯಲು ಮುಂದಾಗಿರುವುದು ಉತ್ತಮ ಸಂಗತಿ. ಇದರಿಂದ ಮುಂದಿನ ದಿನಗಳಲ್ಲಿ ಇಂಥ ಪ್ರಕೃತಿ ವಿಕೋಪಗಳು ನಡೆಯದಂತೆ ಅಥವಾ ಮೊದಲೇ ಮುನ್ಸೂಚನೆ ಸಿಕ್ಕರೆ ಅಪಾರ ಹಾನಿ ತಪ್ಪಿಸಬಹುದು ಎಂಬುದು ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್‌ ಅವರ ಅಭಿಪ್ರಾಯ.

ಈಗಾಗಲೇ ಡಿಆರ್‌ಡಿಒ ಘಟನೆಗೆ ಕಾರಣವೇನಿರಬಹುದು ಎಂಬ ಅಧ್ಯಯನ ಶುರು ಮಾಡಿದೆ. ಇಸ್ರೋ ವಿಜ್ಞಾನಿಗಳನ್ನೂ ಸಂಪರ್ಕಿಸಿದ್ದು, ಈ ಕುರಿತಂತೆ ಅವರೂ ಅಧ್ಯಯನ ನಡೆಸಲಿದ್ದಾರೆ. ಈ ಎರಡೂ ಸಂಸ್ಥೆಗಳ ವರದಿ ಬಂದ ಬಳಿಕ ಅಧ್ಯಯನ ನಡೆಸಿ ಘಟನೆಗೆ ಕಾರಣವೇನಿರಬಹುದು ಎಂಬ ನಿರ್ಧಾರಕ್ಕೆ ಬರುತ್ತೇವೆ ಎಂದೂ ಸಿಂಗ್‌ ಹೇಳಿದ್ದಾರೆ.

ಇನ್ನೂ ಕೆಲವು ತಜ್ಞರು ಸರಕಾರ ಇಂಥ ಘಟನೆಗಳ ಬಗ್ಗೆ ಅಧ್ಯಯ ನಕ್ಕೆ ಹೆಚ್ಚು ಅನುದಾನ ನೀಡಬೇಕು. ಈ ಪ್ರದೇಶದ ಬಗ್ಗೆ ಸಂಪೂರ್ಣವಾಗಿ ನಿಗಾ ಇಡುವ ಸಲುವಾಗಿಯೂ ಅಧ್ಯಯನ ನಡೆಯಬೇಕು. ಇದರಿಂದಾಗಿ ತಾಪಮಾನ ಬದಲಾವಣೆಯ ಪ್ರಭಾವ ಅಥವಾ ನೀರ್ಗಲ್ಲುಗಳ ಸರಿದಾಟದ ಬಗ್ಗೆ ಹೆಚ್ಚಿನ ಮಾಹಿತಿ ಸಿಗುತ್ತದೆ. ಆಗ ಹೆಚ್ಚಿನ ಹಾನಿ ತಪ್ಪಿಸಬಹುದು ಎನ್ನುತ್ತಾರೆ.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.