ಕೋವಿಡ್ ಲಸಿಕೆ ಹೆಚ್ಚಿನ ಪ್ರಮಾಣದಲ್ಲಿ ವ್ಯರ್ಥವಾಗುತ್ತಿದೆ, ಇದನ್ನು ತಡೆಗಟ್ಟಿ:ಪ್ರಧಾನಿ ಮೋದಿ
ಪ್ರಧಾನಿಯವರಿಗೆ ಸಭೆಯಲ್ಲಿ ಮಾಹಿತಿ ನೀಡಲಾಯಿತು ಎಂದು ವರದಿ ತಿಳಿಸಿದೆ.
Team Udayavani, Jun 5, 2021, 12:22 PM IST
ನವದೆಹಲಿ: ಕೋವಿಡ್ 19 ಲಸಿಕೆ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ದೇಶದಲ್ಲಿ ಕೋವಿಡ್ ಲಸಿಕೆ ಇನ್ನೂ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ವ್ಯರ್ಥವಾಗುತ್ತಿದ್ದು, ಇದನ್ನು ತಡೆಯಲು ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಲಕ್ನೋ: ಊಟದ ಜತೆ ಸಲಾಡ್ ಕೊಡಲಿಲ್ಲ ಎಂದು ಕುಡಿದ ಅಮಲಿನಲ್ಲಿ ಪತ್ನಿಯನ್ನೇ ಕೊಂದ ಪತಿ!
ಲಸಿಕೆಯ ರೋಗ-ನಿರೋಧಕ ಗುಣದ ವಿವಿಧ ಅಂಶಗಳ ಬಗ್ಗೆ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಹಿತಿ ನೀಡಿದ್ದರು, ಅಲ್ಲದೇ ಕೋವಿಡ್ ಲಸಿಕೆ ಲಭ್ಯತೆ ಮತ್ತು ಲಸಿಕೆ ಸರಬರಾಜು ಕುರಿತ ಮಾರ್ಗಸೂಚಿಯ ಬಗ್ಗೆ ಅಧಿಕಾರಿಗಳು ವಿವರಣೆ ನೀಡಿರುವುದಾಗಿ ಸರ್ಕಾರ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ವಿವರಿಸಿದೆ.
ಕೋವಿಡ್ ಲಸಿಕೆ ಅಭಿಯಾನ ನಡೆಯುತ್ತಿರುವ ಈ ಸಂದರ್ಭದಲ್ಲಿ ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆ ವ್ಯರ್ಥವಾಗುತ್ತಿದೆ. ಹೀಗೆ ಲಸಿಕೆ ವ್ಯರ್ಥವಾಗದಂತೆ ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಪ್ರಧಾನಿ ಮೋದಿ ಅವರು ಸಭೆಯಲ್ಲಿ ಸೂಚಿಸಿರುವುದಾಗಿ ವರದಿ ಹೇಳಿದೆ.
ದೇಶದಲ್ಲಿ ಶುಕ್ರವಾರದವರೆಗೆ (ಜೂನ್ 04) 22,75 ಕೋಟಿ ಲಸಿಕೆಯನ್ನು ನೀಡಲಾಗಿದೆ. ಇದರಲ್ಲಿ ವ್ಯರ್ಥವಾದ ಲಸಿಕೆ ಅಂಕಿಅಂಶವೂ ಸೇರಿದೆ ಎಂದು ವರದಿ ತಿಳಿಸಿದೆ. ಈ ಸಭೆಯಲ್ಲಿ ರಾಜ್ ನಾಥ್ ಸಿಂಗ್, ಅಮಿತ್ ಶಾ ಮತ್ತು ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವು ಕೇಂದ್ರ ಸಚಿವರು ಪಾಲ್ಗೊಂಡಿದ್ದರು.
ಭಾರತದಲ್ಲಿ ಕೋವಿಡ್ 19 ಲಸಿಕೆಯ ಉತ್ಪಾದನೆಯನ್ನು ಹೆಚ್ಚಿಸಲು ಲಸಿಕೆ ತಯಾರಿಕೆಯ ವಿವಿಧ ಉತ್ಪಾದಕರ ನೆರವು ಪಡೆಯಲಾಗಿದೆ ಎಂಬುದನ್ನು ಪ್ರಧಾನಿಯವರಿಗೆ ಸಭೆಯಲ್ಲಿ ಮಾಹಿತಿ ನೀಡಲಾಯಿತು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು