“ಸಂಧಾನ’ ವಿಫಲ: ಆದೇಶ ಸಿಗುವವರೆಗೆ ಪಾದಯಾತ್ರೆ ಸ್ಥಗಿತವಿಲ್ಲ ಎಂದ ಶ್ರೀಗಳು
Team Udayavani, Feb 5, 2021, 5:50 AM IST
ಚಿತ್ರದುರ್ಗ: ಕುರುಬ ಸಮುದಾಯಕ್ಕೆ ಎಸ್ಟಿ ಹಾಗೂ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಿಗೆ ಆಗ್ರಹಿಸಿ ಉಭಯ ಸಮುದಾಯದ ಶ್ರೀಗಳ ಪಾದಯಾತ್ರೆ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಗುರುವಾರ ಸರಕಾರದ ಸಂದೇಶ ಹೊತ್ತು ಬಸವಜಯ ಮೃತ್ಯುಂಜಯ ಶ್ರೀ ಹಾಗೂ ವಚನಾನಂದ ಶ್ರೀ ಬಳಿಗೆ ತೆರಳಿದ್ದ ಸಚಿವರಾದ ಮುರುಗೇಶ ನಿರಾಣಿ ಹಾಗೂ ಸಿ.ಸಿ. ಪಾಟೀಲ್ ಬರಿಗೈಯಲ್ಲಿ ಮರಳಿದ್ದಾರೆ.
ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಿಗೆ ಆಗ್ರಹಿಸಿ ನಿರಂಜನಾನಂದ ಪುರಿ ಶ್ರೀ ನೇತೃತ್ವದಲ್ಲಿ ನಡೆದ ಪಾದಯಾತ್ರೆ ಈಗಾಗಲೇ ಬೆಂಗಳೂರು ತಲುಪಿದ್ದರೆ, ಪಂಚಮಸಾಲಿ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 2ಎ ಮೀಸಲಿಗೆ ಆಗ್ರಹಿಸಿ ಕೂಡಲ ಸಂಗಮದ ಬಸವಜಯ ಮೃತ್ಯುಂಜಯ ಶ್ರೀ ನೇತೃತ್ವದ ಪಾದಯಾತ್ರೆ ಕೂಡ ರಾಜಧಾನಿ ಸನಿಹಲ್ಲೇ ಬಂದು ನಿಂತಿದೆ. ಇದರಿಂದ ಎಚ್ಚೆತ್ತ ಸಿಎಂ ಗುರುವಾರ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಹಾಗೂ ಸಣ್ಣ ಕೈಗಾರಿಕೆ ಸಚಿವ ಸಿ.ಸಿ.ಪಾಟೀಲ್ ನೇತೃತ್ವದ ನಿಯೋಗವನ್ನು ಸಂಧಾನಕ್ಕೆ ಕಳುಹಿಸಿದ್ದರು. ಆದರೆ ಸರಕಾರದ ಆದೇಶ ಕೈಗೆ ಸಿಗುವವರೆಗೆ ಪಾದಯಾತ್ರೆ ನಿಲ್ಲಿಸುವುದಿಲ್ಲ ಎಂದು ಶ್ರೀಗಳು ಹೇಳಿದ್ದಾರೆ.
ಯಾರ್ಯಾರಿದ್ದರು?
ಸಚಿವರಾದ ಸಿ.ಸಿ.ಪಾಟೀಲ್, ಮುರುಗೇಶ್ ನಿರಾಣಿ, ಶಾಸಕರಾದ ಅರವಿಂದ ಬೆಲ್ಲದ, ಆರ್. ಶಂಕರ್, ಮಹೇಶ ಕುಮಟಳ್ಳಿ, ಅರುಣಕುಮಾರ್ ಪೂಜಾರ, ವಿರೂಪಾಕ್ಷಪ್ಪ ಬಳ್ಳಾರಿ, ಮೋಹನ ಲಿಂಬಿಕಾಯಿ ಮತ್ತಿತರರು ನಿಯೋಗದಲ್ಲಿದ್ದರು.
ಸಂದೇಶ ಏನು?
ಹಿರಿಯೂರು ತಾಲೂಕಿನ ಐಮಂಗಲ ಬಳಿ ಉಭಯ ಶ್ರೀಗಳನ್ನು ಸಚಿವರು ಹಾಗೂ ಶಾಸಕರ ನಿಯೋಗ ಭೇಟಿಯಾಯಿತು. ಸಮುದಾಯದ ಬೇಡಿಕೆಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ನಿಟ್ಟಿನಲ್ಲಿ ಆಡಳಿತಾತ್ಮಕ ಪ್ರಕ್ರಿಯೆ ನಡೆಸಲು ಒಪ್ಪಿದ್ದಾರೆ. ಶಾಶ್ವತ ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರಿಗೆ ಈ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಆದೇಶ ನೀಡಲಿದ್ದಾರೆ ಎಂದು ವಿವರಿಸಿದರು.
ಶ್ರೀಗಳು ಏನೆಂದರು?
ಇದನ್ನು ನಯವಾಗಿಯೇ ತಿರಸ್ಕರಿಸಿದ ಉಭಯ ಶ್ರೀಗಳು, ಸರಕಾರ ನಮ್ಮ ಮನವಿಗೆ ಸ್ಪಂದಿಸಿರುವುದು ಉತ್ತಮ ಬೆಳವಣಿಗೆ. ಆದರೆ, ಮೀಸಲಾತಿ ಆದೇಶ ಪ್ರತಿ ನಮ್ಮ ಕೈಗೆ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ. ಪಾದಯಾತ್ರೆ ಬೆಂಗಳೂರು ತಲುಪುವುದ ರೊಳಗೆ ಸರ್ಕಾರದ ಆದೇಶದ ಪ್ರತಿ ನಮ್ಮ ಕೈ ಸೇರು ವಂತಾಗಲಿ. ಈ ನಿಟ್ಟಿನಲ್ಲಿ ಸಮುದಾಯದ ಎಲ್ಲ ಸಚಿವರು, ಶಾಸಕರು ಪ್ರಯತ್ನ ಮಾಡಲಿ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್