ಒಂದು ಕಾಲದ ಫೈರ್ ಬ್ರ್ಯಾಂಡ್ !: ಬಿಜೆಪಿ ತೊರೆಯುವರೇ ವರುಣ್ ಗಾಂಧಿ?


Team Udayavani, Nov 12, 2021, 5:17 PM IST

varun

ಲಕ್ನೋ : ಬಿಜೆಪಿಯಲ್ಲಿ ಒಂದು ಕಾಲದ ಫೈರ್ ಬ್ರ್ಯಾಂಡ್ ನಾಯಕನೆನಿಸಿಕೊಂಡ ವರುಣ್ ಗಾಂಧಿ ಅವರ ಇತ್ತೀಚಿಗಿನ ಹೇಳಿಕೆಗಳು ಮತ್ತು ಚಟುವಟಿಕೆಗಳನ್ನು ಗಮನಿಸಿದರೆ ಅವರು ಪಕ್ಷ ತೊರೆಯುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ವರುಣ್ ಅವರ ಇತ್ತೀಚಿನ ಹೇಳಿಕೆಗಳು ಮತ್ತು ನಡವಳಿಕೆ ಬಿಜೆಪಿಯೊಂದಿಗೆ ಹೊಂದಾಣಿಕೆಯಾಗುವುದಿಲ್ಲ ಎಂದು ಬಿಜೆಪಿ ನಾಯಕರು, ಕಾರ್ಯಕರ್ತರು ಹೇಳುತ್ತಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಕಂಗನಾ ರಣಾವತ್ ವಿರುದ್ಧ ಅವರ ಇತ್ತೀಚಿನ ಟ್ವೀಟ್ ರಾಜಕೀಯ ಬಿರುಗಾಳಿಯನ್ನು ಸೃಷ್ಟಿಸಿದ್ದು, ಬಿಜೆಪಿಯನ್ನು ಮುಜುಗರಕ್ಕೀಡು ಮಾಡಿದೆ. ಆದರೆ ಆಶ್ಚರ್ಯಕರವಾಗಿ ಬಿಜೆಪಿ ಕಾರ್ಯಕರ್ತರ ಬೆಂಬಲವನ್ನೂ ಗಳಿಸಿದೆ.

2014 ರಲ್ಲಿ ವರುಣ್ ಅವರು ಪ್ರತಿನಿಧಿಸುತ್ತಿದ್ದ ಕ್ಷೇತ್ರವಾದ ಸುಲ್ತಾನ್‌ಪುರದ ಸ್ಥಳೀಯ ಬಿಜೆಪಿ ನಾಯಕರೊಬ್ಬರು, “ಕಂಗನಾ ರಣಾವತ್‌ ಅವರ ಹಿಂದಿನ ಹೇಳಿಕೆಗಳು ಮತ್ತು ನಡವಳಿಕೆಯಿಂದಾಗಿ ನಮಗೆ ದೊಡ್ಡ ಮುಜುಗರ ತಂದಿದೆ. ಆಕೆಯ ಸ್ವಾತಂತ್ರ್ಯ ಹೇಳಿಕೆಯನ್ನು ವರುಣ್ ಗಾಂಧಿ ತಿರಸ್ಕರಿಸಿದ್ದು ಸರಿಯಾಗಿಯೇ ಇದೆ. ಪೂರ್ಣವಾಗಿ ಅದನ್ನ ಘೋಷಿಸಲು ನಮಗೆ ಸಾಧ್ಯವಾಗದಿದ್ದರೂ ನಾವು ವರುಣ್ ಅವರನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇವೆ ಎಂದಿದ್ದಾರೆ.

ವರುಣ್, ಈ ಹಿಂದೆ, ಧರಣಿ ನಿರತ ರೈತರನ್ನು ಬೆಂಬಲಿಸಿ ಮಾತನಾಡಿದ್ದರು ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ರೈತರನ್ನು ಬೆಂಬಲಿಸಿ ಮಾಡಿದ ಭಾಷಣದ ಕಿರು ತುಣುಕನ್ನು ಟ್ವೀಟ್ ಮಾಡುವ ಮೂಲಕ ಬಿಜೆಪಿ ನಾಯಕರಿಗೆ ಶಾಕ್ ನೀಡಿದ್ದರು.

ಕಳೆದ ತಿಂಗಳು ಲಖಿಂಪುರ ಖೇರಿ ಹಿಂಸಾಚಾರದ ಬಳಿಕ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ಮತ್ತು ಅವರ ಮಗ ಆಶಿಶ್ ಮಿಶ್ರಾ ಅವರ ವಿರುದ್ಧ ನಿಲುವು ತೆಗೆದುಕೊಂಡು ವರುಣ್ ಗಾಂಧಿ ಹೇಳಿಕೆ ನೀಡಿದ್ದರು.

ವರುಣ್ ಹೇಳಿಕೆಗಳನ್ನು ಬಿಜೆಪಿ ಇದುವರೆಗೆ ಅಧಿಕೃತವಾಗಿ ವಿರೋಧಿಸಿಲ್ಲ ಆದರೆ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಅವರನ್ನು ಕೈಬಿಡುವ ಮೂಲಕ ಪಕ್ಷವು ತನ್ನ ಅಸಮಾಧಾನವನ್ನು ಈಗಾಗಲೇ ಹೊರಹಾಕಿದೆ.

ಕಾಂಗ್ರೆಸ್‌ ಸೇರ್ಪಡೆಯಾಗುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಆದರೆ ವರುಣ್ ಗಾಂಧಿ ಅವರು ಈಗಾಗಲೇ ಅಂತಹ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ.

ವಿಧಾನಸಭಾ ಚುನಾವಣಾ ಹೊಸ್ತಿಲಿನಲ್ಲಿ ನಿಂತಿರುವ ಉತ್ತರಪ್ರದೇಶದ ಬಿಜೆಪಿ, ವರುಣ್ ಅವರ ಮುಂದಿನ ನಡೆಗಾಗಿ ಕಾಯುತ್ತಿದೆ ಎನ್ನಲಾಗಿದೆ.

41 ರ ಹರೆಯದ ವರುಣ್ ಗಾಂಧಿ ಪಿಲಿಭಿತ್ ಕ್ಷೇತ್ರದಿಂದ ಲೋಕಸಭೆಗೆ ಮೂರನೇ ಅವಧಿಯ ಸಂಸತ್ ಸದಸ್ಯರಾಗಿದ್ದಾರೆ. 2012 ರಲ್ಲಿ ರಾಜನಾಥ್ ಸಿಂಗ್ ಅವರು ಅಧ್ಯಕ್ಷರಾಗಿದ್ದ ವೇಳೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು.

2009 ರ ಸಾರ್ವತ್ರಿಕ ಚುನಾವಣೆಯಲ್ಲಿ, ವರುಣ್ ಗಾಂಧಿಯವರು ಅವರ ತಾಯಿ ಮನೇಕಾ ಗಾಂಧಿ ಪ್ರತಿನಿಧಿಸುತ್ತಿದ್ದ ಪಿಲಿಭಿತ್ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿದು ಭಾರಿ ಮತಗಳ ಅಂತರದಿಂದ ಜಯ ಪಡೆಯುವ ಮೂಲಕ ಬಿಜೆಪಿಯ ಭವಿಷ್ಯದ ನಾಯಕನೆನಿಸಿಕೊಂಡಿದ್ದರು.

ಪಿಲಿಭಿತ್‌ನ ದಾಲ್‌ಚಂದ್ ಮೊಹಲ್ಲಾ ಪ್ರದೇಶದಲ್ಲಿ ನಡೆದ ಸಭೆಯಲ್ಲಿ ಮುಸ್ಲಿಮರ ಬಗ್ಗೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು, ಅವರು ಆ ಪ್ರಕರಣದಲ್ಲಿ ನ್ಯಾಯಾಲಯದಿಂದ ಖುಲಾಸೆಗೊಂಡಿದ್ದರು. ಆ ಭಾಷಣದ ಬಳಿಕ ಅವರು ಫೈರ್ ಬ್ರ್ಯಾಂಡ್ ನಾಯಕ ಎನಿಸಿಕೊಂಡಿದ್ದರು. ಬಿಜೆಪಿ ಪರವಾಗಿ ದೇಶದ ಹಲವು ಕಡೆ ಚುನಾವಣಾ ಪ್ರಾಚಾರವನ್ನೂ ಕೈಗೊಂಡಿದ್ದರು.

ವರುಣ್ ಅವರ ತಾಯಿ ಮನೇಕಾ ಗಾಂಧಿ ಅವರು ಜನತಾದಳ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. ಪ್ರಸಕ್ತ ಅವರು ಸುಲ್ತಾನ್ ಪುರ ಕ್ಷೇತ್ರದ ಬಿಜೆಪಿ ಸಂಸದೆ.

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.