ವಾಜಪೇಯಿ ಭಾಷಣದ ತುಣುಕು ಹಂಚಿಕೊಂಡು ಬಿಜೆಪಿಗೆ ಶಾಕ್ ನೀಡಿದ ವರುಣ್ ಗಾಂಧಿ
Team Udayavani, Oct 14, 2021, 5:01 PM IST
ಹೊಸದಿಲ್ಲಿ : ಉತ್ತರಪ್ರದೇಶದ ಲಖೀಂಪುರ ಖೇರಿಯಲ್ಲಿ ಹಿಂಸಾಚಾರ ಘಟನೆಯ ಬಳಿಕ ರೈತರ ಪರ ಬಿಜೆಪಿ ಯುವ ನಾಯಕ ವರುಣ್ ಗಾಂಧಿ ಮತ್ತೆ ಧ್ವನಿ ಎತ್ತಿದ್ದು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು 1980ರಲ್ಲಿ ರೈತರ ಪರವಾಗಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರ ವಿರುದ್ಧ ಗುಡುಗಿದ್ದ ವಿಡಿಯೋ ತುಣುಕೊಂದನ್ನು ಸಾಮಾಜಿಕ ತಾಣದಲ್ಲಿ ಹಂಚಿಕೊಳ್ಳುವ ಮೂಲಕ ಬಿಜೆಪಿಗೆ ಇನ್ನೊಂದು ಪರೋಕ್ಷ ಶಾಕ್ ನೀಡಿದ್ದಾರೆ.
ಟ್ವೀಟ್ ಮಾಡಿರುವ ವರುಣ್ ಗಾಂಧಿ,ದೊಡ್ಡ ಹೃದಯದ ನಾಯಕನಿಂದ ಬುದ್ಧಿವಂತಿಕೆಯ ಮಾತುಗಳು ಎಂದು ವಿಡಿಯೋ ಹಂಚಿಕೊಂಡಿದ್ದಾರೆ.
ಸರಕಾರ ಕಾನೂನುಗಳನ್ನು ದುರುಪಯೋಗಪಡಿಸಿಕೊಂಡು ರೈತರನ್ನು ದಮನ ಮಾಡಿದರೆ,ನಾವು ರೈತರೊಂದಿಗೆ ಹೋರಾಟಕ್ಕೆ ಸೇರಲು ಹಿಂಜರಿಯುವುದಿಲ್ಲ ಎಂದು ವಾಜಪೇಯಿ ಅವರು ರೈತರ ಪರವಾಗಿ ಭಾಷಣ ಮಾಡಿದ್ದರು.
Wise words from a big-hearted leader… pic.twitter.com/xlRtznjFAx
— Varun Gandhi (@varungandhi80) October 14, 2021
ಲಖೀಂಪುರ ಖೇರಿಯಲ್ಲಿ ಹಿಂಸಾಚಾರ ಘಟನೆಯ ವಿಚಾರದಲ್ಲಿ ಆರೋಪಿಗಳ ವಿರುದ್ಧ ಧ್ವನಿ ಎತ್ತಿದ್ದ ಪಿಲಿಭಿತ್ ಕ್ಷೇತ್ರದ ಸಂಸದರಾಗಿರುವ ವರುಣ್ ಗಾಂಧಿ ಅವರನ್ನು ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಕೈಬಿಡಲಾಗಿತ್ತು.
ಲಖೀಂಪುರ ಹಿಂಸಾಚಾರವನ್ನು ಹಿಂದೂ ಮತ್ತು ಸಿಖ್ ಘರ್ಷಣೆಯನ್ನಾಗಿ ಪರಿವರ್ತಿಸಲು ಸಂಚು ಹೂಡಲಾಗಿತ್ತು ಎಂದು ವರುಣ್ ಗಾಂಧಿ ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ