Lok Sabha Poll 2024: BJPಯಿಂದ ಕೊಕ್, ಕಾಂಗ್ರೆಸ್ ಸೇರ್ಪಡೆಯಾಗಲು ವರುಣ್ ಗಾಂಧಿಗೆ ಆಫರ್
ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಜಿತಿನ್ ಪ್ರಸಾದ್ ಗೆ ಪಿಲಿಭಿಟ್ ಟಿಕೆಟ್
Team Udayavani, Mar 26, 2024, 3:38 PM IST
ಲಕ್ನೋ: ಉತ್ತರಪ್ರದೇಶದ ಪಿಲಿಭಿಟ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ವರುಣ್ ಗಾಂಧಿಗೆ ಈ ಬಾರಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ, ವರುಣ್ ಗಾಂಧಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವುದಾದರೆ ಸ್ವಾಗತ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಅಧೀರ್ ರಂಜನ್ ಚೌಧುರಿ ಆಫರ್ ನೀಡಿದ್ದಾರೆ.
ಇದನ್ನೂ ಓದಿ:ವೃದ್ದ ದಂಪತಿಗೆ ಹಲ್ಲೆ ಪ್ರಕರಣ; ಹಲ್ಲೆಗೊಳಗಾದವರ ಮೇಲೆಯೇ ಪ್ರಕರಣ ದಾಖಲಿಸುವ ಹುನ್ನಾರ: ಆರೋಪ
ಸುದ್ದಿಗಾರರ ಜತೆ ಮಾತನಾಡಿದ ಚೌಧುರಿ, ವರುಣ್ ಕುಟುಂಬ ಗಾಂಧಿ ಕುಟುಂಬಕ್ಕೆ ಸೇರಿದ್ದ ಕಾರಣ ಚುನಾವಣೆಯಲ್ಲಿ ಟಿಕೆಟ್ ನೀಡಿಲ್ಲ ಎಂದು ಆರೋಪಿಸಿದ್ದಾರೆ.
ವರುಣ್ ಗಾಂಧಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಬೇಕು. ಒಂದು ವೇಳೆ ಅವರು ಸೇರ್ಪಡೆಯಾದರೆ ನಮಗೆ ಸಂತೋಷ. ಅವರೊಬ್ಬ ದೊಡ್ಡ ನಾಯಕ, ವಿದ್ಯಾವಂತ ರಾಜಕಾರಣಿ. ವರುಣ್ ಪಾರದರ್ಶಕ ವ್ಯಕ್ತಿತ್ವ ಹೊಂದಿದ್ದು, ಅವರ ಗಾಂಧಿ ಕುಟುಂಬದ ಸಂಬಂಧಿ ಎಂದು ಚೌಧುರಿ ಹೇಳಿದರು.
ಮಾರ್ಚ್ 24ರಂದು ಭಾರತೀಯ ಜನತಾ ಪಕ್ಷ ಲೋಕಸಭಾ ಚುನಾವಣೆಗಾಗಿ ಬಿಡುಗಡೆಗೊಳಿಸಿದ ಐದನೇ ಪಟ್ಟಿಯಲ್ಲಿ ವರುಣ್ ಗಾಂಧಿ ಹೆಸರನ್ನು ಕೈಬಿಡಲಾಗಿತ್ತು. ಆದರೆ ತಾಯಿ ಮನೇಕಾ ಗಾಂಧಿಗೆ ಸುಲ್ತಾನ್ ಪುರ್ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.
2021ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಜಿತಿನ್ ಪ್ರಸಾದ್ ಗೆ ಪಿಲಿಭಿಟ್ ಕ್ಷೇತ್ರದ ಟಿಕೆಟ್ ನೀಡಲಾಗಿದ್ದು, ಹಾಲಿ ಸಂಸದ ವರುಣ್ ಗಾಂಧಿಯನ್ನು ಕೈಬಿಡಲಾಗಿದೆ. ಬಿಜೆಪಿ ತನಗೆ ಮೋಸ ಮಾಡಿದ್ದು, ಯಾವುದೇ ಕಾರಣಕ್ಕೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ವರುಣ್ ಗಾಂಧಿ ಅಭಿಪ್ರಾಯವ್ಯಕ್ತಪಡಿಸಿರುವುದಾಗಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು