ವಾವಾ ಸುರೇಶ್ ಆರೋಗ್ಯ ಸ್ಥಿತಿ ಸ್ವಲ್ಪ ಚೇತರಿಕೆ: ಮುಂದಿನ 48 ಗಂಟೆ ನಿರ್ಣಾಯಕ
Team Udayavani, Feb 3, 2022, 11:45 AM IST
ಕೊಟ್ಟಾಯಂ : ಇಲ್ಲಿನ ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಖ್ಯಾತ ಉರಗ ರಕ್ಷಕ ವಾವಾ ಸುರೇಶ್ ಅವರ ಆರೋಗ್ಯ ಸ್ಥಿತಿಯಲ್ಲಿ ಗುರುವಾರ ಸ್ವಲ್ಪ ಸುಧಾರಣೆಯಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ವೆಂಟಿಲೇಟರ್ ಮೂಲಕವೇ ಉಸಿರಾಟ ಮಾಡಿಸಲಾಗುತ್ತಿದ್ದು, ಮುಂದಿನ 48 ಗಂಟೆಗಳು ನಿರ್ಣಾಯಕ ಎಂದು ವೈದ್ಯರು ತಿಳಿಸಿರುವುದಾಗಿ ಕೇರಳದ ಮಾಧ್ಯಮಗಳು ವರದಿ ಮಾಡಿವೆ.
ಮಂಗಳವಾರ ಅವರು ಸ್ವಯಂ ಉಸಿರಾಟ ಆರಂಭಿಸಿದ್ದರು, ಅವರ ಹೃದಯ ಮತ್ತು ಶ್ವಾಸಕೋಶ ಸಾಮಾನ್ಯ ಸ್ಥಿತಿಗೆ ಮರಳಿವೆ ಎಂದು ಆಸ್ಪತ್ರೆಯ ಸುಪರಿಟೆಂಡೆಂಟ್ ಡಾ.ಟಿ.ಕೆ.ಜಯಕುಮಾರ್ ತಿಳಿಸಿದ್ದಾರೆ.
ವಿಷವೇರಿದ ಪರಿಣಾಮವಾಗಿ ಬುಧವಾರ ಅವರು ಸ್ಪಂದಿಸುವುದನ್ನು ನಿಲ್ಲಿಸಿದ್ದು, ಉಸಿರಾಟದಲ್ಲೂ ಏರು ಪೇರಾಗಿತ್ತು. ರಕ್ತದ ಒತ್ತಡವೂ ಕುಸಿದಿತ್ತು. ಆದರೆ 11 ಗಂಟೆಯ ವೇಳೆಗೆ ಸ್ವಲ್ಪ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ : ಶಿವಮೊಗ್ಗ: ಹಾವನ್ನು ತಪ್ಪಿಸಲು ಹೋಗಿ ನಾಲೆಗೆ ಉರುಳಿದ ಕಾರು; ಪತ್ನಿ ಸಾವು, ಪತಿ ಪಾರು
ಆಸ್ಪತ್ರೆಗೆ ದಾಖಲು ಮಾಡುವ ಮುನ್ನವೇ ಹೃದಯಾಘಾತವಾಗಿತ್ತು ಎಂದು ವೈದ್ಯರು ತಿಳಿಸಿದ್ದಾರೆ.
ಡಾ.ಟಿ.ಕೆ.ಜಯಕುಮಾರ್ ಸೇರಿದಂತೆ ನುರಿತ ತಜ್ಞರು ವಾವಾ ಸುರೇಶ್ ಅವರನ್ನು ಬದುಕಿಸಲು ಎಲ್ಲಾ ಶತ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.
ಸೋಮವಾರ ಕೊಟ್ಟಾಯಂನ ಕುರಿಚಿ ಗ್ರಾಮದಲ್ಲಿ ನಾಗರ ಹಾವು ಹಿಡಿಯಲು ಹೋದಾಗ ಗೋಣಿ ಚೀಲಕ್ಕೆ ಹಾಕಲು ಯತ್ನಿಸುತ್ತಿದ್ದಾಗ ಬಲತೊಡೆಗೆ ಕಚ್ಚಿತ್ತು. ಆ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಸಾವಿರಾರು ಮಂದಿ ಅವರ ಅಭಿಮಾನಿಗಳು ಸಾಹಸಿ ಉರಗ ಸ್ನೇಹಿ ಬದುಕಿ ಬರಲಿ ಎಂದು ಪ್ರಾರ್ಥಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ