ವೀಕೆಂಡ್ ನಲ್ಲಿ ಮನೆಯಲ್ಲೇ ಘಮ ಘಮಿಸುವ ರುಚಿಯಾದ ಗೀರೈಸ್ ಮಾಡಿ ಸವಿಯಿರಿ…
ಪುಳಿಯೋಗರೆ ಹೀಗೆ ರೈಸ್ ಐಟಮ್ ಗಳಲ್ಲಿ ಮೇಲ್ಪಂಕ್ತಿಯಲ್ಲಿ ನಿಲ್ಲುವುದು ಗೀರೈಸ್ .
ಶ್ರೀರಾಮ್ ನಾಯಕ್, Dec 2, 2022, 6:00 PM IST
ಇಂದು ಎಲ್ಲರೂ ಆಹಾರದಲ್ಲಿ ವೈವಿಧ್ಯತೆಯನ್ನು ಬಯಸುತ್ತಾರೆ. ಅದರಲ್ಲೂ ನಗರ ಪ್ರದೇಶದಲ್ಲಿರುವವರಂತೂ ಪ್ರತೀ ದಿನ ಅಲ್ಲದಿದ್ದರೂ ವೀಕೆಂಡ್ ಗಳಲ್ಲಿ ವೈವಿಧ್ಯಮಯ ಆಹಾರಗಳಿಗೆ ತಮ್ಮ ಆಧ್ಯತೆಯನ್ನು ನೀಡುತ್ತಿರುವ ಜೊತೆಗೆ ಹೊಸ ಹೊಸ ಬಗೆಯ ತಿಂಡಿ ತಿನಿಸುಗಳನ್ನು ಮಾಡಿ ತಮ್ಮ ಕೈ ರುಚಿಯ ಸವಿಯನ್ನು ಕುಟುಂಬದವರೊಂದಿಗೆ ಹಂಚಿಕೊಳ್ಳಲು ನಾವು ನಿಮಗೊಂದು ಸುಲಭ ರೀತಿಯಲ್ಲಿ ರುಚಿಕರವಾದ ಗೀರೈಸ್ ಮತ್ತು ವೆಜ್ ಕುರ್ಮಾ ವನ್ನು ಉಣಬಡಿಸಲಿದ್ದೇವೆ.
ಹಲವಾರು ಬಗೆಯ ರೈಸ್ ಗಳನ್ನು ನಾವು ತಿಂದಿರುತ್ತೇವೆ ಅದರಲ್ಲಿ ಮುಖ್ಯವಾಗಿ ಜೀರಾ ರೈಸ್, ಟೊಮೆಟೊ ರೈಸ್ , ಪಲಾವ್, ಲೆಮನ್ ರೈಸ್, ಪುಳಿಯೋಗರೆ ಹೀಗೆ ರೈಸ್ ಐಟಮ್ ಗಳಲ್ಲಿ ಮೇಲ್ಪಂಕ್ತಿಯಲ್ಲಿ ನಿಲ್ಲುವುದು ಗೀರೈಸ್ .
ಹಾಗಾದರೆ ಇನ್ನೇಕೆ ತಡ ರುಚಿ-ರುಚಿಯಾದ ಗೀರೈಸ್ ಮತ್ತು ವೆಜ್ ಕುರ್ಮಾ ಮಾಡುವ ವಿಧಾನವನ್ನು ಓದಿಕೊಂಡು ನಿಮ್ಮ ಮನೆಯಲ್ಲೇ ಮಾಡಿ… ಸ್ವಾದಿಷ್ಟವಾಗಿ ಸವಿಯಿರಿ…
ಗೀರೈಸ್
ಬೇಕಾಗುವ ಸಾಮಗ್ರಿಗಳು
ಬಾಸ್ಮತಿ ಅಕ್ಕಿ-3ಕಪ್, (20ನಿಮಿಷ ನೀರಿನಲ್ಲಿ ನೆನೆಸಿಡಿ), ತುಪ್ಪ-4ಚಮಚ, ತೆಂಗಿನೆಣ್ಣೆ-2ಚಮಚ, ಪಾಲಾವ್ ಎಲೆ, ಚಕ್ಕೆ, ಲವಂಗ, ಏಲಕ್ಕಿ-ಸ್ವಲ್ಪ, ಶುಂಠಿ-ಬೆಳ್ಳುಳ್ಳಿ ಪೇಸ್ಟ್-1ಚಮಚ, ಹಸಿಮೆಣಸು-4, ಈರುಳ್ಳಿ-2, ಗೋಡಂಬಿ, ಒಣದ್ರಾಕ್ಷಿ-ಸ್ವಲ್ಪ, ಪುದೀನಾ,ಕೊತ್ತಂಬರಿ ಸೊಪ್ಪು-ಸ್ವಲ್ಪ, ಹಾಲು-1/4ಕಪ್,ಮೊಸರು-1/4 ಕಪ್, ಉಪ್ಪು-ರುಚಿಗೆ ತಕ್ಕಷ್ಟು.
ತಯಾರಿಸುವ ವಿಧಾನ
ಮೊದಲಿಗೆ ಒಂದು ದೊಡ್ಡ ಪಾತ್ರೆಗೆ ತುಪ್ಪ ಮತ್ತು ಎಣ್ಣೆಯನ್ನು ಹಾಕಿ, ಬಿಸಿಯಾದ ಮೇಲೆ ಅದಕ್ಕೆ ಚಕ್ಕೆ, ಲವಂಗ, ಪಾಲವ್ ಎಲೆ, ಏಲಕ್ಕಿ ಹಾಕಿ ಹುರಿಯಿರಿ. ತದನಂತರ ಹಸಿಮೆಣಸು, ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಸೇರಿಸಿ ಸ್ವಲ್ಪ ಸಮಯ ಹುರಿಯಿರಿ. ಆಮೇಲೆ ಗೋಡಂಬಿ, ಒಣದ್ರಾಕ್ಷಿ ಸೇರಿಸಿ ಕಂದು ಬಣ್ಣ ಬಂದ ತಕ್ಷಣ ಈರುಳ್ಳಿ ಸೇರಿಸಿ ಹುರಿಯಿರಿ. ನಂತರ ಗ್ರೀರೈಸ್ ಸಿಕ್ರೇಟ್ ರೆಸಿಪಿ ಎಂದರೆ ಹಾಲು. ಹಾಕಿ ಒಂದು ನಿಮಿಷಗಳ ನಂತರ ಮೊಸರನ್ನು ಕೂಡ ಸೇರಿಸಿ ಅದರ ಜೊತೆಗೆ ಕೊತ್ತಂಬರಿ ಸೊಪ್ಪು, ಪುದೀನಾ ಹಾಕಿ ಸರಿಯಾಗಿ ಮಿಕ್ಸ್ ಮಾಡಿರಿ. ತದನಂತರ ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ ಅದಕ್ಕೆ ನೆನೆಸಿಟ್ಟ ಬಾಸ್ಮತಿ ಅಕ್ಕಿ ಹಾಕಿ ಮಸಾಲದೊಂದಿಗೆ ಕೆಲವು ನಿಮಿಷ ಹಾಗೆ ಬಿಡಿ. ಈ ರೀತಿ ಮಾಡುವುದರಿಂದ ತುಪ್ಪ/ಎಣ್ಣೆ , ಮಸಾಲೆಯು ಅನ್ನಕ್ಕೆ ಹೊಳಪು ಕೊಡುತ್ತದೆ. ತದನಂತರ ಸಮಪ್ರಮಾಣದ ನೀರನ್ನು ಸೇರಿಸಿ ಪಾತ್ರೆಯ ಮುಚ್ಚಳ ಮುಚ್ಚಿ ಮಧ್ಯಮ ಉರಿಯಲ್ಲಿ 20 ನಿಮಿಷಗಳ ಕಾಲ ಬೇಯಿಸಿರಿ. ಬಿಸಿ-ಬಿಸಿಯಾದ ಗೀರೈಸ್, ವೆಜ್ಕುರ್ಮಾದೊಂದಿಗೆ ಸವಿಯಲು ಬಹಳ ರುಚಿಕರ.
ವೆಜ್ ಕುರ್ಮಾ
ಬೇಕಾಗುವ ಸಾಮಗ್ರಿಗಳು
ಈರುಳ್ಳಿ-2, ಚಕ್ಕೆ, ಲವಂಗ-ಸ್ವಲ್ಪ, ಶುಂಠಿ-ಬೆಳ್ಳುಳ್ಳಿ ಪೇಸ್ಟ್-2ಚಮಚ, ಹಸಿಮೆಣಸು-6, ತೆಂಗಿನೆಣ್ಣೆ-3 ಚಮಚ, ಹುರಿಕಡಲೆ-2ಚಮಚ, ತೆಂಗಿನ ತುರಿ-1ಕಪ್, ಧನಿಯಾ ಪುಡಿ-1ಚಮಚ, ಅರಿಶಿನ ಪುಡಿ-ಸ್ವಲ್ಪ, ಕೊತ್ತಂಬರಿ ಸೊಪ್ಪು-ಸ್ವಲ್ಪ, ಬಡೆ ಸೊಂಪು-ಸ್ವಲ್ಪ, ಕರಿಬೇವು, ಉಪ್ಪು -ರುಚಿಗೆ ತಕ್ಕಷ್ಟು, ತರಕಾರಿ-ಟೊಮೆಟೋ-1, ನವಿಲ್ ಕೋಸು-1, ಬೀನ್ಸ್-10, ಕ್ಯಾರೆಟ್-2, ಹಸಿಬಟಾಣಿ-150ಗ್ರಾಂ, ಆಲೂಗಡ್ಡೆ-2.
ತಯಾರಿಸುವ ವಿಧಾನ
ಎಲ್ಲ ತರಕಾರಿಗಳನ್ನು ತೊಳೆದು ಸಣ್ಣಗೆ ಹೆಚ್ಚಿಕೊಳ್ಳಿ. ಒಂದು ಬಾಣಲೆಗೆ ಎಣ್ಣೆ ಹಾಕಿ ಬಿಸಿ ಮಾಡಿ ಅದಕ್ಕೆ ಚಕ್ಕೆ,ಲವಂಗ,ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಹಸಿಮೆಣಸು, ಹುರಿಕಡಲೆ ಹಾಕಿ ಚೆನ್ನಾಗಿ ಹುರಿಯಿರಿ. ನಂತರ ಅದಕ್ಕೆ ಸಣ್ಣಗೆ ಹೆಚ್ಚಿದ ಈರುಳ್ಳಿ, ತೆಂಗಿನ ತುರಿ, ಧನಿಯಾ ಪುಡಿ, ಕೊತ್ತಂಬರಿ ಸೊಪ್ಪು, ಅರಿಶಿನ ಪುಡಿ ಹಾಕಿ ಸರಿಯಾಗಿ ಮಿಶ್ರಣ ಮಾಡಿ ನಂತರ ಮಿಕ್ಸ್ ಜಾರಿಗೆ ಇವೆಲ್ಲಾ ಮಸಾಲೆಯನ್ನು ಹಾಕಿ ನೀರನ್ನು ಸೇರಿಸಿ ಮಸಾಲೆ ರುಬ್ಬಿ ಇಟ್ಟುಕೊಳ್ಳಿ. ನಂತರ ಒಂದು ಪಾತ್ರೆಗೆ 1ಚಮಚ ಎಣ್ಣೆ ಹಾಕಿ ಬಿಸಿಯಾದ ಮೇಲೆ ಕರಿಬೇವು, ಬಡೆಸೊಂಪು ಹಾಕಿರಿ. ತದನಂತರ ಹೆಚ್ಚಿಟ್ಟ ತರಕಾರಿಯನ್ನು ಹಾಕಿ ಒಂದು ನಿಮಿಷಗಳ ಕಾಲ ಹುರಿಯಿರಿ. ಆಮೇಲೆ ಅದಕ್ಕೆ ರುಬ್ಬಿಟ್ಟ ಮಸಾಲೆಯನ್ನು ಹಾಕಿ ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ ಬೇಯಿಸಿರಿ. ಬಿಸಿ-ಬಿಸಿಯಾದ ವೆಜ್ ಕುರ್ಮಾ ಗೀರೈಸ್ ಜೊತೆ ಸವಿಯಿರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu Kashmir: ಗುಲ್ ಮಾರ್ಗ್, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…
ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?
Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ
Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?
Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು
MUST WATCH
ಹೊಸ ಸೇರ್ಪಡೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ