ವೀಕೆಂಡ್ ನಲ್ಲಿ ಮನೆಯಲ್ಲೇ ಘಮ ಘಮಿಸುವ ರುಚಿಯಾದ ಗೀರೈಸ್ ಮಾಡಿ ಸವಿಯಿರಿ…

ಪುಳಿಯೋಗರೆ ಹೀಗೆ ರೈಸ್ ಐಟಮ್‌ ಗಳಲ್ಲಿ ಮೇಲ್ಪಂಕ್ತಿಯಲ್ಲಿ ನಿಲ್ಲುವುದು ಗೀರೈಸ್ .

ಶ್ರೀರಾಮ್ ನಾಯಕ್, Dec 2, 2022, 6:00 PM IST

web exclusive food geerice

ಇಂದು ಎಲ್ಲರೂ ಆಹಾರದಲ್ಲಿ ವೈವಿಧ್ಯತೆಯನ್ನು ಬಯಸುತ್ತಾರೆ. ಅದರಲ್ಲೂ ನಗರ ಪ್ರದೇಶದಲ್ಲಿರುವವರಂತೂ ಪ್ರತೀ ದಿನ ಅಲ್ಲದಿದ್ದರೂ ವೀಕೆಂಡ್ ಗಳಲ್ಲಿ ವೈವಿಧ್ಯಮಯ ಆಹಾರಗಳಿಗೆ ತಮ್ಮ ಆಧ್ಯತೆಯನ್ನು ನೀಡುತ್ತಿರುವ ಜೊತೆಗೆ ಹೊಸ ಹೊಸ ಬಗೆಯ ತಿಂಡಿ ತಿನಿಸುಗಳನ್ನು ಮಾಡಿ ತಮ್ಮ ಕೈ ರುಚಿಯ ಸವಿಯನ್ನು ಕುಟುಂಬದವರೊಂದಿಗೆ ಹಂಚಿಕೊಳ್ಳಲು ನಾವು ನಿಮಗೊಂದು ಸುಲಭ ರೀತಿಯಲ್ಲಿ ರುಚಿಕರವಾದ ಗೀರೈಸ್ ಮತ್ತು ವೆಜ್ ಕುರ್ಮಾ ವನ್ನು ಉಣಬಡಿಸಲಿದ್ದೇವೆ.

ಹಲವಾರು ಬಗೆಯ ರೈಸ್ ಗಳನ್ನು ನಾವು ತಿಂದಿರುತ್ತೇವೆ ಅದರಲ್ಲಿ ಮುಖ್ಯವಾಗಿ ಜೀರಾ ರೈಸ್, ಟೊಮೆಟೊ ರೈಸ್ , ಪಲಾವ್, ಲೆಮನ್ ರೈಸ್, ಪುಳಿಯೋಗರೆ ಹೀಗೆ ರೈಸ್ ಐಟಮ್‌ ಗಳಲ್ಲಿ ಮೇಲ್ಪಂಕ್ತಿಯಲ್ಲಿ ನಿಲ್ಲುವುದು ಗೀರೈಸ್ .

ಹಾಗಾದರೆ ಇನ್ನೇಕೆ ತಡ ರುಚಿ-ರುಚಿಯಾದ ಗೀರೈಸ್ ಮತ್ತು ವೆಜ್ ಕುರ್ಮಾ ಮಾಡುವ ವಿಧಾನವನ್ನು ಓದಿಕೊಂಡು ನಿಮ್ಮ ಮನೆಯಲ್ಲೇ ಮಾಡಿ… ಸ್ವಾದಿಷ್ಟವಾಗಿ ಸವಿಯಿರಿ…

ಗೀರೈಸ್
ಬೇಕಾಗುವ ಸಾಮಗ್ರಿಗಳು
ಬಾಸ್ಮತಿ ಅಕ್ಕಿ-3ಕಪ್‌, (20ನಿಮಿಷ ನೀರಿನಲ್ಲಿ ನೆನೆಸಿಡಿ), ತುಪ್ಪ-4ಚಮಚ, ತೆಂಗಿನೆಣ್ಣೆ-2ಚಮಚ, ಪಾಲಾವ್‌ ಎಲೆ, ಚಕ್ಕೆ, ಲವಂಗ, ಏಲಕ್ಕಿ-ಸ್ವಲ್ಪ, ಶುಂಠಿ-ಬೆಳ್ಳುಳ್ಳಿ ಪೇಸ್ಟ್‌-1ಚಮಚ, ಹಸಿಮೆಣಸು-4, ಈರುಳ್ಳಿ-2, ಗೋಡಂಬಿ, ಒಣದ್ರಾಕ್ಷಿ-ಸ್ವಲ್ಪ, ಪುದೀನಾ,ಕೊತ್ತಂಬರಿ ಸೊಪ್ಪು-ಸ್ವಲ್ಪ, ಹಾಲು-1/4ಕಪ್‌,ಮೊಸರು-1/4 ಕಪ್‌, ಉಪ್ಪು-ರುಚಿಗೆ ತಕ್ಕಷ್ಟು.

ತಯಾರಿಸುವ ವಿಧಾನ
ಮೊದಲಿಗೆ ಒಂದು ದೊಡ್ಡ ಪಾತ್ರೆಗೆ ತುಪ್ಪ ಮತ್ತು ಎಣ್ಣೆಯನ್ನು ಹಾಕಿ, ಬಿಸಿಯಾದ ಮೇಲೆ ಅದಕ್ಕೆ ಚಕ್ಕೆ, ಲವಂಗ, ಪಾಲವ್‌ ಎಲೆ, ಏಲಕ್ಕಿ ಹಾಕಿ ಹುರಿಯಿರಿ. ತದನಂತರ ಹಸಿಮೆಣಸು, ಶುಂಠಿ-ಬೆಳ್ಳುಳ್ಳಿ ಪೇಸ್ಟ್‌ ಸೇರಿಸಿ ಸ್ವಲ್ಪ ಸಮಯ ಹುರಿಯಿರಿ. ಆಮೇಲೆ ಗೋಡಂಬಿ, ಒಣದ್ರಾಕ್ಷಿ ಸೇರಿಸಿ ಕಂದು ಬಣ್ಣ ಬಂದ ತಕ್ಷಣ ಈರುಳ್ಳಿ ಸೇರಿಸಿ ಹುರಿಯಿರಿ. ನಂತರ ಗ್ರೀರೈಸ್‌ ಸಿಕ್ರೇಟ್‌ ರೆಸಿಪಿ ಎಂದರೆ ಹಾಲು. ಹಾಕಿ ಒಂದು ನಿಮಿಷಗಳ ನಂತರ ಮೊಸರನ್ನು ಕೂಡ ಸೇರಿಸಿ ಅದರ ಜೊತೆಗೆ ಕೊತ್ತಂಬರಿ ಸೊಪ್ಪು, ಪುದೀನಾ ಹಾಕಿ ಸರಿಯಾಗಿ ಮಿಕ್ಸ್‌ ಮಾಡಿರಿ. ತದನಂತರ ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ ಅದಕ್ಕೆ ನೆನೆಸಿಟ್ಟ ಬಾಸ್ಮತಿ ಅಕ್ಕಿ ಹಾಕಿ ಮಸಾಲದೊಂದಿಗೆ ಕೆಲವು ನಿಮಿಷ ಹಾಗೆ ಬಿಡಿ. ಈ ರೀತಿ ಮಾಡುವುದರಿಂದ ತುಪ್ಪ/ಎಣ್ಣೆ , ಮಸಾಲೆಯು ಅನ್ನಕ್ಕೆ ಹೊಳಪು ಕೊಡುತ್ತದೆ. ತದನಂತರ ಸಮಪ್ರಮಾಣದ ನೀರನ್ನು ಸೇರಿಸಿ ಪಾತ್ರೆಯ ಮುಚ್ಚಳ ಮುಚ್ಚಿ ಮಧ್ಯಮ ಉರಿಯಲ್ಲಿ 20 ನಿಮಿಷಗಳ ಕಾಲ ಬೇಯಿಸಿರಿ. ಬಿಸಿ-ಬಿಸಿಯಾದ ಗೀರೈಸ್‌, ವೆಜ್‌ಕುರ್ಮಾದೊಂದಿಗೆ ಸವಿಯಲು ಬಹಳ ರುಚಿಕರ.

ವೆಜ್‌ ಕುರ್ಮಾ
ಬೇಕಾಗುವ ಸಾಮಗ್ರಿಗಳು
ಈರುಳ್ಳಿ-2, ಚಕ್ಕೆ, ಲವಂಗ-ಸ್ವಲ್ಪ, ಶುಂಠಿ-ಬೆಳ್ಳುಳ್ಳಿ ಪೇಸ್ಟ್‌-2ಚಮಚ, ಹಸಿಮೆಣಸು-6, ತೆಂಗಿನೆಣ್ಣೆ-3 ಚಮಚ, ಹುರಿಕಡಲೆ-2ಚಮಚ, ತೆಂಗಿನ ತುರಿ-1ಕಪ್‌, ಧನಿಯಾ ಪುಡಿ-1ಚಮಚ, ಅರಿಶಿನ ಪುಡಿ-ಸ್ವಲ್ಪ, ಕೊತ್ತಂಬರಿ ಸೊಪ್ಪು-ಸ್ವಲ್ಪ, ಬಡೆ ಸೊಂಪು-ಸ್ವಲ್ಪ, ಕರಿಬೇವು, ಉಪ್ಪು -ರುಚಿಗೆ ತಕ್ಕಷ್ಟು, ತರಕಾರಿ-ಟೊಮೆಟೋ-1, ನವಿಲ್‌ ಕೋಸು-1, ಬೀನ್ಸ್‌-10, ಕ್ಯಾರೆಟ್‌-2, ಹಸಿಬಟಾಣಿ-150ಗ್ರಾಂ, ಆಲೂಗಡ್ಡೆ-2.

ತಯಾರಿಸುವ ವಿಧಾನ
ಎಲ್ಲ ತರಕಾರಿಗಳನ್ನು ತೊಳೆದು ಸಣ್ಣಗೆ ಹೆಚ್ಚಿಕೊಳ್ಳಿ. ಒಂದು ಬಾಣಲೆಗೆ ಎಣ್ಣೆ ಹಾಕಿ ಬಿಸಿ ಮಾಡಿ ಅದಕ್ಕೆ ಚಕ್ಕೆ,ಲವಂಗ,ಶುಂಠಿ-ಬೆಳ್ಳುಳ್ಳಿ ಪೇಸ್ಟ್‌, ಹಸಿಮೆಣಸು, ಹುರಿಕಡಲೆ ಹಾಕಿ ಚೆನ್ನಾಗಿ ಹುರಿಯಿರಿ. ನಂತರ ಅದಕ್ಕೆ ಸಣ್ಣಗೆ ಹೆಚ್ಚಿದ ಈರುಳ್ಳಿ, ತೆಂಗಿನ ತುರಿ, ಧನಿಯಾ ಪುಡಿ, ಕೊತ್ತಂಬರಿ ಸೊಪ್ಪು, ಅರಿಶಿನ ಪುಡಿ ಹಾಕಿ ಸರಿಯಾಗಿ ಮಿಶ್ರಣ ಮಾಡಿ ನಂತರ ಮಿಕ್ಸ್‌ ಜಾರಿಗೆ ಇವೆಲ್ಲಾ ಮಸಾಲೆಯನ್ನು ಹಾಕಿ ನೀರನ್ನು ಸೇರಿಸಿ ಮಸಾಲೆ ರುಬ್ಬಿ ಇಟ್ಟುಕೊಳ್ಳಿ. ನಂತರ ಒಂದು ಪಾತ್ರೆಗೆ 1ಚಮಚ ಎಣ್ಣೆ ಹಾಕಿ ಬಿಸಿಯಾದ ಮೇಲೆ ಕರಿಬೇವು, ಬಡೆಸೊಂಪು ಹಾಕಿರಿ. ತದನಂತರ ಹೆಚ್ಚಿಟ್ಟ ತರಕಾರಿಯನ್ನು ಹಾಕಿ ಒಂದು ನಿಮಿಷಗಳ ಕಾಲ ಹುರಿಯಿರಿ. ಆಮೇಲೆ ಅದಕ್ಕೆ ರುಬ್ಬಿಟ್ಟ ಮಸಾಲೆಯನ್ನು ಹಾಕಿ ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ ಬೇಯಿಸಿರಿ. ಬಿಸಿ-ಬಿಸಿಯಾದ ವೆಜ್‌ ಕುರ್ಮಾ ಗೀರೈಸ್‌ ಜೊತೆ ಸವಿಯಿರಿ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.