ಜೆಡಿಎಸ್ ನ ಹೊರಟ್ಟಿಗೆ ಸಭಾಪತಿ ಸ್ಥಾನ : ಬಿಜೆಪಿಯ ಪ್ರಾಣೇಶ್‌ ಉಪ ಸಭಾಪತಿ


Team Udayavani, Jan 27, 2021, 9:09 PM IST

ಸಭಾಪತಿ ಸ್ಥಾನ ಹೊರಟ್ಟಿಗೆ: ಬಿಜೆಪಿಯಿಂದ ಪ್ರಾಣೇಶ್‌ ಉಪ ಸಭಾಪತಿ

ಬೆಂಗಳೂರು: ನಿರೀಕ್ಷೆಯಂತೆ ಮುಂದೆ ತೆರವಾಗಬಹುದಾದ ವಿಧಾನಪರಿಷತ್‌ ಸಭಾಪತಿ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ ನಿರ್ಧರಿಸಿದೆ. ಉಪ ಸಭಾಪತಿ ಸ್ಥಾನದ ಚುನಾವಣೆಗೆ ಬಿಜೆಪಿಯ ಎಂ.ಕೆ. ಪ್ರಾಣೇಶ್‌ ನಾಮಪತ್ರ ಸಲ್ಲಿಸಲಿದ್ದಾರೆ.

ಬುಧವಾರ ಸಂಜೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಅವರ ಸರ್ಕಾರಿ ನಿವಾಸ ಕಾವೇರಿಯಲ್ಲಿ ವಿಧಾನ ಪರಿಷತ್‌ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪಕ್ಷ ರಾಜಕೀಯವಾಗಿ ತೀರ್ಮಾನ ತೆಗೆದುಕೊಂಡಿರುವುದರಿಂದ ಅದಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ವಿಧಾನ ಪರಿಷತ್‌ ಸದಸ್ಯರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸೂಚನೆಯ ಮೇರೆಗೆ ಚಿಕ್ಕಮಗಳೂರಿನ ಎಂ.ಕೆ.ಪ್ರಾಣೇಶ್‌ ಉಪ ಸಭಾಪತಿ ಸ್ಥಾನಕ್ಕೆ ಗುರುವಾರ 10 ಗಂಟೆಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಅವರನ್ನು ಪದಚ್ಯುತಗೊಳಿಸಲು ಬಿಜೆಪಿಗೆ ಜೆಡಿಎಸ್‌ ಬೆಂಬಲ ಸೂಚಿಸಿ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ನೊಟೀಸ್‌ ನೀಡಿರುವುದರಿಂದ ಬಿಜೆಪಿ ಮೇಲ್ಮನೆಯಲ್ಲಿ ವಿಧೇಯಕಗಳ ಆಂಗೀಕಾರ ಪಡೆಯುವ ಸಂದರ್ಭದಲ್ಲಿ ಆಗುತ್ತಿರುವ ಹಿನ್ನಡೆಯನ್ನು ತಪ್ಪಿಸಿಕೊಳ್ಳಲು ಜೆಡಿಎಸ್‌ಗೆ ಸಭಾಪತಿ ಸ್ಥಾನ ಬಿಟ್ಟುಕೊಡಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ರಾಜ್ಯದ ಎಲ್ಲ ಅಂಗಡಿಗಳ ನಾಮಫ‌ಲಕ ಕನ್ನಡದಲ್ಲೇ ಇರಬೇಕು : ನಾಗಾಭರಣ

ಹೈಕಮಾಂಡ್‌ ಸೂಚನೆ:
ಪ್ರತಾಪ್‌ ಚಂದ್ರ ಶೆಟ್ಟಿ ಅವರನ್ನು ಪದಚ್ಯುತಗೊಳಿಸಲು ಜೆಡಿಎಸ್‌ ಬೆಂಬಲ ಸೂಚಿಸಿದ್ದ ಬೆನ್ನಲ್ಲೆ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಪಕ್ಷದ ಹಿರಿಯ ಶಾಸಕ ಬಸವರಾಜ್‌ ಹೊರಟ್ಟಿ ಅವರನ್ನು ಸಭಾಪತಿ ಮಾಡಲು ಬೆಂಬಲ ನೀಡುವಂತೆ ಮನವಿ ಮಾಡಿದ್ದರು ಎಂದು ಹೇಳಲಾಗಿತ್ತು.

ದೇವೇಗೌಡರ ಮನವಿ ಹಿನ್ನೆಲೆಯಲ್ಲಿ ಕೇಂದ್ರದ ಬಿಜೆಪಿ ನಾಯಕರು ಜೆಡಿಎಸ್‌ಗೆ ಸಭಾಪತಿ ಸ್ಥಾನ ಬಿಟ್ಟುಕೊಡಲು ರಾಜ್ಯ ಬಿಜೆಪಿ ನಾಯಕರಿಗೆ ಸೂಚನೆ ನೀಡಿದ್ದರು ಎಂದು ತಿಳಿದು ಬಂದಿದೆ. ಪಕ್ಷದ ಹೈಕಮಾಂಡ್‌ ಸೂಚನೆ ಮೇರೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಜೆಡಿಎಸ್‌ಗೆ ಸಭಾಪತಿ ಸ್ಥಾನ ಬಿಟ್ಟುಕೊಡಲು ತೀರ್ಮಾನಿಸಲಾಗಿದ್ದು, ಉಪ ಸಭಾಪತಿ ಸ್ಥಾನಕ್ಕೆ ಎಂ.ಕೆ. ಪ್ರಾಣೇಶ್‌ಗೆ ನಾಮಪತ್ರ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ರಾಜ್ಯದ ಒಂದಿಂಚು ಜಾಗವನ್ನೂ ಬಿಡೆವು, ನಮ್ಮನ್ನು ಕೆಣಕಿದರೆ ಪರಿಣಾಮ ನೆಟ್ಟಗಿರಲ್ಲ :ನಾರಾಯಣಗೌಡ

ಹೊರಟ್ಟಿ ಮನವಿ:
ಸಭಾಪತಿ ಸ್ಥಾನದ ಆಕಾಂಕ್ಷಿಯಾಗಿರುವ ಜೆಡಿಎಸ್‌ನ ಹಿರಿಯ ಸದಸ್ಯ ಬಸವರಾಜ್‌ ಹೊರಟ್ಟಿ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡರ ಸೂಚನೆ ಮೇರೆಗೆ ಬುಧವಾರ ಬೆಳಿಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಸಭಾಪತಿ ಸ್ಥಾನಕ್ಕೆ ಜೆಡಿಎಸ್‌ಗೆ ಬೆಂಬಲಿಸುವಂತೆ ಮನವಿ ಮಾಡಿದ್ದರು. ಅಲ್ಲದೇ ಶುಕ್ರವಾರ ನಡೆಯುವ ಉಪ ಸಭಾಪತಿ ಸ್ಥಾನಕ್ಕೆ ಜೆಡಿಎಸ್‌ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಬಿಜೆಪಿಗೆ ಬೆಂಬಲ ಸೂಚಿಸುವುದಾಗಿ ತಿಳಿಸಿದ್ದರು.

ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ್‌ ಹೊರಟ್ಟಿ, ಜೆಡಿಎಸ್‌ಗೆ ಸಭಾಪತಿ ಸ್ಥಾನ ಬಿಟ್ಟು ಕೊಡುವಂತೆ ಮನವಿ ಮಾಡಿದ್ದೇವೆ. ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿ¨ªಾರೆ. ಉಪ ಸಭಾಪತಿ ಸ್ಥಾನ ಬಿಜೆಪಿಗೆ ಬಿಟ್ಟು ಕೊಡಲಿದ್ದೇವೆ. ಜನವರಿ 29 ರಂದು ಉಪ ಸಭಾಪತಿ ಚುನಾವಣೆ ನಡೆಯಲಿದೆ. ಉಪ ಸಭಾಪತಿ ಚುನಾವಣೆ ನಂತರ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರು ಉಪ ಸಭಾಪತಿ ಅವರಿಗೆ ರಾಜೀನಾಮೆ ನೀಡಬಹುದು. ಅವರು ರಾಜೀನಾಮೆ ನೀಡಿದರೆ, ರಾಜ್ಯಪಾಲರು ಸಭಾಪತಿ ಚುನಾವಣೆಗೆ ದಿನ ನಿಗದಿ ಮಾಡಬೇಕಾಗುತ್ತದೆ. ಅವರು ಇದೇ ಅಧಿವೇಶನದಲ್ಲಿ ಸಭಾಪತಿ ಚುನಾವಣೆಗೆ ದಿನ ನಿಗದಿ ಮಾಡಿದರೆ ಸಭಾಪತಿಯಾಗಿ ಆಯ್ಕೆ ಆಗುತ್ತೇನೆ. ಇಲ್ಲದಿದ್ದರೆ ಮುಂದಿನ ಅಧಿವೇಶನದಲ್ಲಿ ಸಭಾಪತಿ ಆಯ್ಕೆ ಆಗಬಹುದು ಎಂದು ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.