ವಿಜಯಪುರ ಸೈನಿಕ ಶಾಲೆಯ ಹಳೆ ವಿದ್ಯಾರ್ಥಿಗೆ ರಫೆಲ್‌ ಸಾರಥ್ಯ


Team Udayavani, Jul 29, 2020, 3:54 PM IST

ವಿಜಯಪುರ ಸೈನಿಕ ಶಾಲೆಯ ಹಳೆ ವಿದ್ಯಾರ್ಥಿಗೆ ರಫೆಲ್‌ ಸಾರಥ್ಯ

ವಿಜಯಪುರ : ದೇಶದ ರಕ್ಷಣಾ ಸಾಮರ್ಥ್ಯದ ಬಲಿಷ್ಠ ಬತ್ತಳಿಕೆ ಸೇರುತ್ತಿರುವ ರಫೆಲ್‌ ಯುದ್ಧ ವಿಮಾನದ ಮೊದಲ ಪೈಲಟ್ ತಂಡದಲ್ಲಿ ವಿಜಯಪುರ ಸೈನಿಕ ಶಾಲೆಯ ಹಳೆಯ ವಿದ್ಯಾರ್ಥಿ ಸ್ಥಾನ ಗಿಟ್ಡಿಸಿದ್ದಾನೆ. ಹೀಗಾಗಿ ಇಲ್ಲಿನ ಸೈನಿಕ ಶಾಲೆಯಲ್ಲಿ ಸಂಭ್ರಮ ಮನೆ ಮಾಡಿದೆ.

1994 – 2001 ರ ವರೆಗೆ 7 ವರ್ಷ ವಿಜಯಪುರ ಸೈನಿಕ ಶಾಲೆಯಲ್ಲಿ ಓದಿದ್ದ ಅರುಣಕುಮಾರ ಎಂಬ ಪ್ರತಿಭಾವಂತ ವಿದ್ಯಾರ್ಥಿ. ಈ ಸಮರ ಸೇನಾನಿಗೆ ಭಾರತಕ್ಕೆ ಆಗಮಿಸಿರುವ ಫ್ರಾನ್ಸ್ ನಿರ್ಮಿತ ರಫೆಲ್‌ ಯುದ್ಧ ವಿಮಾನ ಮುನ್ನಡೆಸುವ ಅವಕಾಶ ದೊರಕಿದೆ.

ಇದೇ ಮೊದಲ ಬಾರಿಗೆ ಭಾರತದ ರಕ್ಷಣಾ ಪಡೆಯ ವಾಯು ಸೇನಾ ಬಲಕ್ಕೆ ಫ್ರಾನ್ಸ್ ನಿರ್ಮಿತ ಐದು ರಫೆಲ್ ವಿಮಾನಗಳು ಸೇರ್ಪಡೆ ಆಗುತ್ತಿದೆ.

ಬುಧವಾರ ಭಾರತದ ಹರಿಯಾಣದ ಅಂಬಾಲಾ ಏರಬೇಸ್ ಗೆ ಬಂದಿಳಿದ ರಫೆಲ್ ವಿಮಾನ ನಡೆಸುವ ಅವಕಾಶ ಅರುಣಕುಮಾರಗೆ ದೊರಕಿದೆ. ಹೀಗಾಗಿ ಸದರಿ ಅರುಣಕುಮಾರ ಓದಿದ ವಿಜಯಪುರ ಸೈನಿಕ ಶಾಲೆಯಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ.

ಬಿಹಾರ ರಾಜ್ಯದ ರೋಹ್ಟಕ್ ಮೂಲದ ಅರುಣಕುಮಾರ ತಂದೆ ನಾಗೇಂದ್ರಪ್ರಸಾದ ಬೆಂಗಳೂರಿನಲ್ಲಿ ಜ್ಯೂನಿಯರ್ ಏರ್ ವಾರಂಟ್ ಆಫಿಸರ್ ಆಗಿದ್ದರು. ಈ ಹಂತದಲ್ಲಿ 1994 ರಲ್ಲಿ ಬೆಂಗಳೂರು ಕೇಂದ್ರೀಯ ವಿದ್ಯಾಲಯದಲ್ಲಿ 5ನೇ ತರಗತಿ ಪಾಸಾಗಿ, ಅದೇ ವರ್ಷ ವಿಜಯಪುರ ಸೈನಿಕ ಶಾಲೆಗೆ ಆಯ್ಕೆಯಾಗಿ ಪ್ರವೇಶ ಪಡೆದಿದ್ದರು. 2001 ರಲ್ಲಿ ಪಿಯುಸಿ ದ್ವಿತೀಯ ವಿಜ್ಞಾನ ಪರೀಕ್ಷೆ ಉತ್ತೀರ್ಣನಾಗಿ, ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್.ಡಿ.ಎ.) ಗೆ ಆಯ್ಕೆಯಾಗಿ, ವಾಯುಸೇನೆಗೆ ಸೇರ್ಪಡೆ ಆಗಿದ್ದ.

ಸತತ ಪರಿಶ್ರಮಿ ಆಗಿದ್ದ ಅರುಣಕುಮಾರ ಛಲಗಾರ ಮಾತ್ರವಲ್ಲ, ಪ್ರಬಲ ನಾಯಕತ್ವ ಗುಣ ಹೊಂದಿದ್ದ. ಶಿಕ್ಷಣ ಮಾತ್ರವಲ್ಲ, ಕ್ರೀಡೆ, ನಾಟಕ ಸೇರಿದಂತೆ ಸಾಂಸ್ಕೃತಿಕ ರಂಗದಲ್ಲಿ ಮುಂಚೂಣಿಯಲ್ಲಿದ್ದ. ಹೀಗಾಗಿ ಆತನಲ್ಲಿದ್ದ ಬಹುಮುಖ ಪ್ರತಿಭೆಯನ್ನು ಕಂಡು ನಮ್ಮ ಸೈನಿಕ ಶಾಲೆಯ ವಿಜಯನಗರ ಹೌಸ್ ಕ್ಯಾಪ್ಟನ್ ಮಾಡಲಾಗಿತ್ತು. ಇದೀಗ ನವ ಪೀಳಿಗೆಗೆ ಮಾದರಿ ಆಗಿದ್ದಾರೆ ಎಂದು ಸೈನಿಕ ಶಾಲೆಯ ಅವರ ಶಿಕ್ಷಕರಾಗಿದ್ದ ರಾಮಮೂರ್ತಿ ಗೋಲಪಲ್ಲಿ ಸಂತಸ ವ್ಯಕ್ತಪಡಿಸುತ್ತಾರೆ.

ರಫೆಲ್ ಯುದ್ಧ ವಿಮಾನ‌ ಮುನ್ನಡೆಸುವ ಐವರ ತಂಡದಲ್ಲಿ ಸ್ಥಾನ ಪಡೆದಿರುವ ಅರುಣಕುಮಾರ ನಮ್ಮ ಶಾಲೆಯ ವಿದ್ಯಾರ್ಥಿ ಎಂಬುದು ನಮಗೆ ಹೆಮ್ಮೆ.

ಸೈನಿಕ‌ ಶಾಲೆಯ ಭವಿಷ್ಯದ ಪೀಳಿಗೆಗೆ ವಾಯುಸೇನೆಯ ವಿಂಗ್ ಕಮಾಂಡರ್ ಅರುಣಕುಮಾರ ಸ್ಫೂರ್ತಿ ಆಗಿದ್ದಾರೆ ಎಂದು ಸೈನಿಕ ಶಾಲೆಯ ಪ್ರಾಚಾರ್ಯ ಭಾರತೀಯ ನೇವಿ ಕ್ಯಾಪ್ಟನ್ ವಿನಯ ತಿವಾರಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.