ವಿಜಯಪುರ :ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ಇಬ್ಬರು ನಾಪತ್ತೆ
Team Udayavani, Jun 12, 2020, 9:55 AM IST
ವಿಜಯಪುರ : ಕೃಷ್ಣಾ ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ನಾಪತ್ತೆಯಾಗಿರುವ ಘಟನೆ
ವಿಜಯಪುರ ಜಿಲ್ಲೆ ಕೊಲ್ಹಾರ ಬಳಿ ಗುರುವಾರ ಸಂಜೆ ಸಂಭವಿಸಿದೆ.
ಕೊಲ್ಹಾರ ತಾಲೂಕಿನ ಸಿದ್ದನಾಥ ಗ್ರಾಮದ ಬಳಿ ನದಿಯಲ್ಲಿ ಮೂವರು ಮೀನುಗಾರರು ತೆಪ್ಪದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಭಾರಿ ಗಾಳಿ ಮಳೆ ಸುರಿದ ಪರಿಣಾಮ ತೆಪ್ಪ ಮಗುಚಿ ಬಿದ್ದಿದೆ.
ತೆಪ್ಪದಲ್ಲಿದ್ದ ಅಕ್ಷಯ ಲಮಾಣಿ (30), ಪರಶುರಾಮ ಲಮಾಣಿ ( 35 ) ರಮೇಶ ಲಮಾಣಿ ( 38 ) ಈ ಮೂವರಲ್ಲಿ ಇಬ್ಬರು ನದಿಯಲ್ಲಿ ಕಾಣೆಯಾಗಿದ್ದಾರೆ.
ಘಟನೆ ಬೆಳಕಿಗೆ ಬರುವ ಹಂತದಲ್ಲಿ ಕತ್ತಲಾದ ಕಾರಣ ಗುರುವಾರ ಶೋಧ ಕಾರ್ಯಕ್ಕೆ ತೊಂದರೆ ಆಗಿದೆ. ಹೀಗಾಗಿ ಶುಕ್ರವಾರ ಬೆಳಿಗ್ಗೆ ಈಜು ತಜ್ಞರು, ಅಗ್ನಿಶಾಮಕ ಸಿಬ್ಬಂದಿಯನ್ನು ಕರೆಸಿ ನದಿಯಲ್ಲಿ ತೆಪ್ಪ ಮುಳುಗಿ ಕಾಣೆಯಾದವರ ಶೋಧ ಕಾರ್ಯಕ್ಕೆ ಮುಂದಾಗಿದೆ.
ಸುದ್ದಿ ತಿಳಿಯುತ್ತಲೇ ಕೊಲ್ಹಾರ ತಹಶೀಲ್ದಾರ ಎಂ.ಎಸ್. ಭಾಗವಾನ ನೇತೃತ್ವದಲ್ಲಿ ಸ್ಥಳೀಯ ಠಾಣೆ ಪೊಲೀಸರು ಸ್ಥಳಿಯ ಮೀನುಗಾರರ ಸಹಾಯದೊಂದಿಗೆ ಶೋಧ ಕಾರ್ಯ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!