ಯೋಗೀಶ್ ಗೌಡ ಕೊಲೆ ಪ್ರಕರಣ : ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ರದ್ದು
Team Udayavani, Mar 17, 2021, 10:30 PM IST
ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಯೋಗೀಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ವಜಾ ಮಾಡಿ ಆದೇಶಿಸಿದೆ.
ಪ್ರಕರದಲ್ಲಿ ಜಾಮೀನು ನೀಡುವಂತೆ ಕೋರಿ ಆರೋಪಿ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಗೆ ಅಕ್ಷೇಪಣೆ ಸಲ್ಲಿಸಿದ್ದ ಸಿಬಿಐ, ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದಾರೆ. ರಾಜಕೀಯ ಕಾರಣಗಳಿಗಾಗಿ ಹತ್ಯೆ ನಡೆದಿದೆ. ಜಿಮ್ ನಿಂದ ಹೊರ ಬರುವ ವೇಳೆ ಯೋಗೀಶ್ ಗೌಡ ಹತ್ಯೆ ನಡೆದಿತ್ತು. ಈ ಸಂಬಂಧ ಪ್ರಕರಣ ದಾಖಲಾದ ಬಳಿಕ ಕೊಲೆ ಮಾಡಿರದ ಆರೋಪಿಗಳು ಬಂದು ತಾವೇ ಕೊಲೆ ಮಾಡಿರುವುದಾಗಿ ಶರಣಾಗಿದ್ದರು.
ಕೊಲೆ ನೋಡಿದ್ದ ಪ್ರತ್ಯಕ್ಷ ಸಾಕ್ಷಿಗಳನ್ನು ಅರ್ಜಿದಾರರು ಬೆದರಿಸಿ ಪ್ರಕರಣದಿಂದ ದೂರ ಉಳಿಯುವಂತೆ ನೋಡಿಕೊಂಡಿದ್ದರು. ಅದಕ್ಕೆ ಸ್ಥಳೀಯ ಪೊಲೀಸರು ಹಾಗೂ ವಿನಯ್ ಸಂಬಂಧಿಗಳು ನೆರವು ನೀಡಿದ್ದರು. ಈ ಎಲ್ಲ ಅಂಶಗಳು ಸಿಬಿಐ ತನಿಖೆ ವೇಳೆ ಪತ್ತೆಯಾಗಿವೆ ಎಂದು ಸಿಬಿಐ ಆಕ್ಷೇಪಣೆ ಸಲ್ಲಿಸಿತ್ತು. ಸಿಬಿಐ ಪರ ವಿಶೇಷ ಅಭಿಯೋಜಕ ಪಿ. ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ವಿಶೇಷ ಕೋರ್ಟ್ ಮಾಜಿ ಸಚಿವ ವಿನಯ್ ಕುಲಕರ್ಣಿಯ ಜಾಮೀನು ಅರ್ಜಿ ತಿರಸ್ಕರಿಸಿದೆ.
ಇದನ್ನೂ ಓದಿ :ನವದೆಹಲಿ ಜಗತ್ತಿನ ನಂ.1 ಕಲುಷಿತ ರಾಜಧಾನಿ! ಸತತ 3ನೇ ಬಾರಿಗೆ ಈ ಅಪಖ್ಯಾತಿ
ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಳೆದ ನ. 5ರಂದು ಬಂಧನಕ್ಕೆ ಒಳಗಾಗಿರುವ ಮಾಜಿ ಶಾಸಕ ವಿನಯ್ ಕುಲಕರ್ಣಿ ಮೊದಲಿಗೆ ಜಾಮೀನು ಕೋರಿ ಸ್ಥಳೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಜಾಮೀನು ಸಿಗದೆ ಹಿನ್ನಲೆಯಲ್ಲಿ ಧಾರವಾಡ ಹೈಕೋರ್ಟ್ ಪೀಠದಲ್ಲಿಯೂ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಕೂಡ ಜಾಮೀನು ನಿರಾಕರಿಸಿತ್ತು. ಆ ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿತ್ತು. ಪ್ರಕರಣ ವರ್ಗಾವಣೆಯಾಗುತ್ತಲೇ ಮೂರನೇ ಬಾರಿ ಜಾಮೀನು ಕೋರಿ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ಗಂಭೀರತೆ ಹಾಗೂ ಸಿಬಿಐ ಆಕ್ಷೇಪಣೆಗಳನ್ನು ಪುರಸ್ಕರಿಸಿರುವ ನ್ಯಾಯಾಲಯ ಜಾಮೀನು ತಿರಸ್ಕರಿಸಿದೆ. ಪ್ರಸ್ತುತ ವಿನಯ್ ಕುಲಕರ್ಣಿ 5 ತಿಂಗಳಿಂದ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ