ಈ ಹಿಂದೆಯೂ ವಿವಾದ…ಈಗ ಶ್ರೀಕೃಷ್ಣ ವೇಷಧಾರಿಗೆ ತಾಜ್ ಮಹಲ್ ಪ್ರವೇಶಿಸಲು ತಡೆ
ಶ್ರೀಕೃಷ್ಣ ಜನ್ಮಾಷ್ಠಮಿ ಸಂಭ್ರಮದಲ್ಲಿ ಪಾಲ್ಗೊಳ್ಳಲು ಮಧುರಾ ಮತ್ತು ವೃಂದಾವನಕ್ಕೆ ತೆರಳಿರುವುದಾಗಿ ವರದಿ ತಿಳಿಸಿದೆ.
Team Udayavani, Aug 30, 2021, 10:55 AM IST
ನವದೆಹಲಿ:ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಠಮಿ ಸಂಭ್ರಮ ನಡೆಯುತ್ತಿರುವ ಸಂದರ್ಭದಲ್ಲಿಯೇ ಶ್ರೀಕೃಷ್ಣ ವೇಷಧಾರಿ ಪ್ರವಾಸಿಗರು ತಾಜ್ ಮಹಲ್ ಒಳ ಪ್ರವೇಶಿಸದಂತೆ ತಡೆಯೊಡ್ಡಿರುವ ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಶ್ರೀಕೃಷ್ಣ ಜನ್ಮಾಷ್ಟಮಿ : ಡಾರ್ಕ್ ಅಲೈಟ್ ವೇಷದಲ್ಲಿ ರವಿ ಕಟಪಾಡಿ
ಶ್ರೀಕೃಷ್ಣ ವೇಷಧಾರಿ ತಾಜ್ ಮಹಲ್ ಒಳಗೆ ಪ್ರವೇಶಿಸುತ್ತಿದ್ದಂತೆಯೇ ಭದ್ರತಾ ಸಿಬಂದಿಗಳು ತಡೆದು ಹೊರ ಕಳುಹಿಸಿದ್ದು, ಬಳಿಕ ಆತ ಕೊಳಲನ್ನು ನುಡಿಸಿದಾಗ ಜನಸಮೂಹ ಮೆಚ್ಚುಗೆ ವ್ಯಕ್ತಪಡಿಸಿರುವ ಪ್ರಸಂಗ ನಡೆದಿರುವುದಾಗಿ ವರದಿ ವಿವರಿಸಿದೆ.
ಬಾವುಟ, ಬ್ಯಾನರ್ ಅಥವಾ ಪೋಸ್ಟರ್ ನೊಂದಿಗೆ ಸ್ವಯಂ ಪ್ರಚಾರಕ್ಕೆ ಯತ್ನಿಸುವ ವ್ಯಕ್ತಿಗಳಿಗೆ ನಿರ್ಬಂಧ ವಿಧಿಸುವುದು ಸಾಮಾನ್ಯ ಎಂದು ಪುರಾತತ್ವ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆಯೂ ಗುಂಪೊಂದು ಶ್ರೀರಾಮನ ಹೆಸರಿನ ದುಪ್ಪಟ್ಟಾ ಧರಿಸಿದ್ದ ಗುಂಪನ್ನು ತಾಜ್ ಮಹಲ್ ಒಳಗೆ ಪ್ರವೇಶಿಸಲು ಅನುಮತಿ ನೀಡದೆ ವಿವಾದಕ್ಕೆ ಕಾರಣವಾಗಿತ್ತು.
ಕೋವಿಡ್ ಎರಡನೇ ಅಲೆಯ ಬಳಿಕ ತಾಜ್ ಮಹಲ್ ಗೆ ಪ್ರತಿದಿನ ಸುಮಾರು 20 ಸಾವಿರ ಮಂದಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಏತನ್ಮಧ್ಯೆ ದೆಹಲಿಗೆ ಆಗಮಿಸಿರುವ ಸಾವಿರಾರು ಮಂದಿ ಶ್ರೀಕೃಷ್ಣ ಜನ್ಮಾಷ್ಠಮಿ ಸಂಭ್ರಮದಲ್ಲಿ ಪಾಲ್ಗೊಳ್ಳಲು ಮಧುರಾ ಮತ್ತು ವೃಂದಾವನಕ್ಕೆ ತೆರಳಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ